Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?

ಅಶ್ವಿನಿ ಬಗ್ಗೆ ಅವಹೇಳನಕಾರಿಯಾಗಿ ಮಾಡಿದ ಪೋಸ್ಟ್ ವಿಚಾರ ದರ್ಶನ್ ಅವರ ಗಮನಕ್ಕೂ ಬಂದಿದೆಯಂತೆ. ಇದನ್ನು ನೋಡಿ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಈ ಬಗ್ಗೆ ದರ್ಶನ್ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್ ಅವರು ಮಾತನಾಡಿದ್ದಾರೆ.

Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?
ದರ್ಶನ್-ಅಶ್ವಿನಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 05, 2024 | 11:07 AM

ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಕುರಿತು ಅವಹೇಳನಕಾರಿಯಾಗಿ ಮಾಡಲಾದ ಪೋಸ್ಟ್ ಒಂದು ಸಖತ್ ವೈರಲ್ ಆಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ‘ಗಜಪಡೆ’ ಹೆಸರಿನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಇದನ್ನು ಹಾಕಲಾಗಿರುವುದರಿಂದ ಇದು ಯಾರೋ ದರ್ಶನ್ ಅಭಿಮಾನಿ ಮಾಡಿದ್ದು ಎಂದು ಹೇಳಲಾಗಿತ್ತು. ಈ ವಿಚಾರದಲ್ಲಿ ದರ್ಶನ್ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್ ಅವರು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಯಾರೋ ಕಿಡಿಗೇಡಿಗಳ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್​ನಲ್ಲಿ ಏನಿತ್ತು?

ಆರ್​ಸಿಬಿ ಅನ್​ಬಾಕ್ಸಿಂಗ್ ಈವೆಂಟ್​ನಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಭಾಗಿ ಆಗಿದ್ದರು. ಒಳ್ಳೆಯ ಕೆಲಸಕ್ಕೆ ಪತಿ ಇಲ್ಲದ ಅಶ್ವಿನಿ ಅವರನ್ನು ಕರೆಸಿದ್ದೇ ತಪ್ಪು ಎಂದು ಬರೆಯಲಾಗಿತ್ತು. ಜೊತೆಗೆ ಆರ್​ಸಿಬಿ ನಿರಂತರವಾಗಿ ಸೋಲುತ್ತಿರುವುದು ಇದೇ ಕಾರಣಕ್ಕೆ ಎಂದು ಹೇಳಲಾಗಿತ್ತು. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು

ದರ್ಶನ್ ಗಮನಕ್ಕೂ ಬಂದಿದೆ..

ದರ್ಶನ್ ಅವರ ಗಮನಕ್ಕೂ ಈ ವಿಚಾರ ಬಂದಿದೆಯಂತೆ. ಇದನ್ನು ನೋಡಿ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಈ ಬಗ್ಗೆ ಪುನೀತ್ ಅವರು ಮಾತನಾಡಿದ್ದಾರೆ. ‘ಅಶ್ವಿನಿ ಬಗ್ಗೆ ಹಾಕಲಾದ ಪೋಸ್ಟ್ ನೋಡಿ ದರ್ಶನ್ ಬೇಸರ ಮಾಡಿಕೊಂಡಿದ್ದಾರೆ. ಅವರು ನಮಗೆ ಹಲವು ವರ್ಷಗಳ ಹಿಂದೆಯೇ ಸೂಚನೆ ಒಂದನ್ನು ನೀಡಿದ್ದರು. ಯಾರು ಏನೇ ಮಾಡಿದರೂ ಸೋಶಿಯಲ್ ಮೀಡಿಯಾ ಮೂಲಕ ಉತ್ತರಿಸಬಾರದು, ಅವಹೇಳನಕಾರಿ ಪೋಸ್ಟ್ ಮಾಡಬಾರದು ಎಂದು ಹೇಳಿದ್ದಾರೆ’ ಎಂದಿದ್ದಾರೆ ಪುನೀತ್.

ಇದನ್ನೂ ಓದಿ: ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್, ಬೆಲೆ ಎಷ್ಟು ಕೋಟಿ?

‘ಸಿನಿಮಾ ಪ್ರಚಾರಕ್ಕೆ ಮಾತ್ರ ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಲು ದರ್ಶನ್ ಸೂಚನೆ ನೀಡಿದ್ದಾರೆ. ಹೀಗಾಗಿ ಇದು ಫೇಕ್ ಖಾತೆ. ಆತ ದರ್ಶನ್ ಅಭಿಮಾನಿ ಆಗಿರಲು ಸಾಧ್ಯವೇ ಇಲ್ಲ. ದರ್ಶನ್ ಅವರು ಅಭಿಮಾನಿಗಳಿಗೆ ಈ ರೀತಿ ಹೇಳಿರಲು ಸಾಧ್ಯವೇ ಇಲ್ಲ. ಅವರು ಮಹಿಳೆಯರಿಗೆ ಸಾಕಷ್ಟು ಗೌರವ ನೀಡುತ್ತಾರೆ’ ಎಂದಿದ್ದಾರೆ ಪುನೀತ್. ದರ್ಶನ್ ಅವರು ‘ಡೆವಿಲ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾಗ ಅವರ ಕೈಗೆ ಪೆಟ್ಟಾಗಿತ್ತು. ಅವರು ಈಗ ಆಪರೇಷನ್ ಮಾಡಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ