AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್

ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್
ರಾಕ್​ಲೈನ್​ ವೆಂಕಟೇಶ್- ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 04, 2024 | 1:03 PM

Share

ನಟ ದರ್ಶನ್ (Darshan) ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ವಿಮರ್ಶೆಯಲ್ಲಿ ಹಾಗೂ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿದೆ. ಈ ಸಿನಿಮಾದ ಗಳಿಕೆ ನೂರು ಕೋಟಿ ರೂಪಾಯಿ ಸನಿಹದಲ್ಲಿದೆ. ಬೆಂಗಳೂರಿನ ಮಾಲ್ ಒಂದರಲ್ಲಿ ಡಿಸೆಂಬರ್ 3ರಂದು ಈ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಧನಂಜಯ್, ಅಮೂಲ್ಯ ಸೇರಿ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸಿನಿಮಾ ಕಣ್ತುಂಬಿಕೊಂಡಿದ್ದಾರೆ. ಈ ವೇಳೆ ದರ್ಶನ್ ಅವರು ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ಫೋಟೋ ವೈರಲ್ ಆಗಿದೆ.

ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿದ್ದಾರೆ. ದರ್ಶನ್ ಅವರಿಂದ ಸ್ಫೂರ್ತಿ ಪಡೆದು ನಟನೆಗೆ ಬಂದಿರುವ ಧನ್ವೀರ್ ಕೂಡ ಆಗಮಿಸಿದ್ದರು. ನಟ ವಿನೋದ್ ಪ್ರಭಾಕರ್, ನಿರ್ದೇಶಕ ಯೋಗರಾಜ್ ಭಟ್, ನಟಿ ಮೇಘಾ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ, ಶ್ರುತಿ ಮೊದಲಾದ ಸೆಲೆಬ್ರಿಟಿಗಳು ಈ ಶೋ ವೀಕ್ಷಣೆಗೆ ಆಗಮಿಸಿದ್ದರು.

ಬಂದ ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋ ಫ್ಯಾನ್ಸ್ ವಲಯದಲ್ಲಿ ಹರಿದಾಡಿದೆ. ದರ್ಶನ್ ಯಾವಾಗಲೂ ಸಿಂಪಲ್ ಆಗಿ ಇರೋಕೆ ಇಷ್ಟ ಪಡುತ್ತಾರೆ. ಇದಕ್ಕೆ ಈ ಫೋಟೋ ಉತ್ತಮ ಉದಾಹರಣೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇದನ್ನೂ ಓದಿ: ಇತಿಹಾಸ ಬರೆಯಲು ಸಿದ್ಧವಾದ ‘ಕಾಟೇರ’; ಐದು ದಿನಕ್ಕೆ ಸಿನಿಮಾ ಗಳಿಸಿದ್ದೆಷ್ಟು?

‘ಕಾಟೇರ’ ಚಿತ್ರ ಮೊದಲ ದಿನ ಅಂದರೆ ಡಿಸೆಂಬರ್ 29ರಂದು 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30)17.35 ಕೋಟಿ ರೂ., ಭಾನುವಾರ (ಡಿ.31) 20.94 ಕೋಟಿ ರೂ., ಸೋಮವಾರ(ಜ.1) 18.26 ಕೋಟಿ ರೂ. ಹಾಗೂ ಮಂಗಳವಾರ (ಜ.2) 9.24 ಕೋಟಿ ರೂ. ಗಳಿಕೆ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 86.84 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Thu, 4 January 24

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ