AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್

ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್
ರಾಕ್​ಲೈನ್​ ವೆಂಕಟೇಶ್- ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 04, 2024 | 1:03 PM

Share

ನಟ ದರ್ಶನ್ (Darshan) ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ವಿಮರ್ಶೆಯಲ್ಲಿ ಹಾಗೂ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿದೆ. ಈ ಸಿನಿಮಾದ ಗಳಿಕೆ ನೂರು ಕೋಟಿ ರೂಪಾಯಿ ಸನಿಹದಲ್ಲಿದೆ. ಬೆಂಗಳೂರಿನ ಮಾಲ್ ಒಂದರಲ್ಲಿ ಡಿಸೆಂಬರ್ 3ರಂದು ಈ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಧನಂಜಯ್, ಅಮೂಲ್ಯ ಸೇರಿ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸಿನಿಮಾ ಕಣ್ತುಂಬಿಕೊಂಡಿದ್ದಾರೆ. ಈ ವೇಳೆ ದರ್ಶನ್ ಅವರು ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ಫೋಟೋ ವೈರಲ್ ಆಗಿದೆ.

ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿದ್ದಾರೆ. ದರ್ಶನ್ ಅವರಿಂದ ಸ್ಫೂರ್ತಿ ಪಡೆದು ನಟನೆಗೆ ಬಂದಿರುವ ಧನ್ವೀರ್ ಕೂಡ ಆಗಮಿಸಿದ್ದರು. ನಟ ವಿನೋದ್ ಪ್ರಭಾಕರ್, ನಿರ್ದೇಶಕ ಯೋಗರಾಜ್ ಭಟ್, ನಟಿ ಮೇಘಾ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ, ಶ್ರುತಿ ಮೊದಲಾದ ಸೆಲೆಬ್ರಿಟಿಗಳು ಈ ಶೋ ವೀಕ್ಷಣೆಗೆ ಆಗಮಿಸಿದ್ದರು.

ಬಂದ ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋ ಫ್ಯಾನ್ಸ್ ವಲಯದಲ್ಲಿ ಹರಿದಾಡಿದೆ. ದರ್ಶನ್ ಯಾವಾಗಲೂ ಸಿಂಪಲ್ ಆಗಿ ಇರೋಕೆ ಇಷ್ಟ ಪಡುತ್ತಾರೆ. ಇದಕ್ಕೆ ಈ ಫೋಟೋ ಉತ್ತಮ ಉದಾಹರಣೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇದನ್ನೂ ಓದಿ: ಇತಿಹಾಸ ಬರೆಯಲು ಸಿದ್ಧವಾದ ‘ಕಾಟೇರ’; ಐದು ದಿನಕ್ಕೆ ಸಿನಿಮಾ ಗಳಿಸಿದ್ದೆಷ್ಟು?

‘ಕಾಟೇರ’ ಚಿತ್ರ ಮೊದಲ ದಿನ ಅಂದರೆ ಡಿಸೆಂಬರ್ 29ರಂದು 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30)17.35 ಕೋಟಿ ರೂ., ಭಾನುವಾರ (ಡಿ.31) 20.94 ಕೋಟಿ ರೂ., ಸೋಮವಾರ(ಜ.1) 18.26 ಕೋಟಿ ರೂ. ಹಾಗೂ ಮಂಗಳವಾರ (ಜ.2) 9.24 ಕೋಟಿ ರೂ. ಗಳಿಕೆ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 86.84 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Thu, 4 January 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​