AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್

ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್
ರಾಕ್​ಲೈನ್​ ವೆಂಕಟೇಶ್- ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 04, 2024 | 1:03 PM

Share

ನಟ ದರ್ಶನ್ (Darshan) ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ವಿಮರ್ಶೆಯಲ್ಲಿ ಹಾಗೂ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿದೆ. ಈ ಸಿನಿಮಾದ ಗಳಿಕೆ ನೂರು ಕೋಟಿ ರೂಪಾಯಿ ಸನಿಹದಲ್ಲಿದೆ. ಬೆಂಗಳೂರಿನ ಮಾಲ್ ಒಂದರಲ್ಲಿ ಡಿಸೆಂಬರ್ 3ರಂದು ಈ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಧನಂಜಯ್, ಅಮೂಲ್ಯ ಸೇರಿ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸಿನಿಮಾ ಕಣ್ತುಂಬಿಕೊಂಡಿದ್ದಾರೆ. ಈ ವೇಳೆ ದರ್ಶನ್ ಅವರು ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ಫೋಟೋ ವೈರಲ್ ಆಗಿದೆ.

ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿದ್ದಾರೆ. ದರ್ಶನ್ ಅವರಿಂದ ಸ್ಫೂರ್ತಿ ಪಡೆದು ನಟನೆಗೆ ಬಂದಿರುವ ಧನ್ವೀರ್ ಕೂಡ ಆಗಮಿಸಿದ್ದರು. ನಟ ವಿನೋದ್ ಪ್ರಭಾಕರ್, ನಿರ್ದೇಶಕ ಯೋಗರಾಜ್ ಭಟ್, ನಟಿ ಮೇಘಾ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ, ಶ್ರುತಿ ಮೊದಲಾದ ಸೆಲೆಬ್ರಿಟಿಗಳು ಈ ಶೋ ವೀಕ್ಷಣೆಗೆ ಆಗಮಿಸಿದ್ದರು.

ಬಂದ ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋ ಫ್ಯಾನ್ಸ್ ವಲಯದಲ್ಲಿ ಹರಿದಾಡಿದೆ. ದರ್ಶನ್ ಯಾವಾಗಲೂ ಸಿಂಪಲ್ ಆಗಿ ಇರೋಕೆ ಇಷ್ಟ ಪಡುತ್ತಾರೆ. ಇದಕ್ಕೆ ಈ ಫೋಟೋ ಉತ್ತಮ ಉದಾಹರಣೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇದನ್ನೂ ಓದಿ: ಇತಿಹಾಸ ಬರೆಯಲು ಸಿದ್ಧವಾದ ‘ಕಾಟೇರ’; ಐದು ದಿನಕ್ಕೆ ಸಿನಿಮಾ ಗಳಿಸಿದ್ದೆಷ್ಟು?

‘ಕಾಟೇರ’ ಚಿತ್ರ ಮೊದಲ ದಿನ ಅಂದರೆ ಡಿಸೆಂಬರ್ 29ರಂದು 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30)17.35 ಕೋಟಿ ರೂ., ಭಾನುವಾರ (ಡಿ.31) 20.94 ಕೋಟಿ ರೂ., ಸೋಮವಾರ(ಜ.1) 18.26 ಕೋಟಿ ರೂ. ಹಾಗೂ ಮಂಗಳವಾರ (ಜ.2) 9.24 ಕೋಟಿ ರೂ. ಗಳಿಕೆ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 86.84 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Thu, 4 January 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್