AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್

ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

Darshan Thoogudeepa: ಜನಸಾಮಾನ್ಯರಂತೆ ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ದರ್ಶನ್
ರಾಕ್​ಲೈನ್​ ವೆಂಕಟೇಶ್- ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jan 04, 2024 | 1:03 PM

Share

ನಟ ದರ್ಶನ್ (Darshan) ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ವಿಮರ್ಶೆಯಲ್ಲಿ ಹಾಗೂ ಬಾಕ್ಸ್ ಆಫೀಸ್​ನಲ್ಲಿ ಗೆದ್ದು ಬೀಗಿದೆ. ಈ ಸಿನಿಮಾದ ಗಳಿಕೆ ನೂರು ಕೋಟಿ ರೂಪಾಯಿ ಸನಿಹದಲ್ಲಿದೆ. ಬೆಂಗಳೂರಿನ ಮಾಲ್ ಒಂದರಲ್ಲಿ ಡಿಸೆಂಬರ್ 3ರಂದು ಈ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿತ್ತು. ಧನಂಜಯ್, ಅಮೂಲ್ಯ ಸೇರಿ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸಿನಿಮಾ ಕಣ್ತುಂಬಿಕೊಂಡಿದ್ದಾರೆ. ಈ ವೇಳೆ ದರ್ಶನ್ ಅವರು ಮೆಟ್ಟಿಲ ಮೇಲೆ ಕುಳಿತು ‘ಕಾಟೇರ’ ವೀಕ್ಷಿಸಿದ ಫೋಟೋ ವೈರಲ್ ಆಗಿದೆ.

ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ‘ಕಾಟೇರ’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿದ್ದಾರೆ. ದರ್ಶನ್ ಅವರಿಂದ ಸ್ಫೂರ್ತಿ ಪಡೆದು ನಟನೆಗೆ ಬಂದಿರುವ ಧನ್ವೀರ್ ಕೂಡ ಆಗಮಿಸಿದ್ದರು. ನಟ ವಿನೋದ್ ಪ್ರಭಾಕರ್, ನಿರ್ದೇಶಕ ಯೋಗರಾಜ್ ಭಟ್, ನಟಿ ಮೇಘಾ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ, ಶ್ರುತಿ ಮೊದಲಾದ ಸೆಲೆಬ್ರಿಟಿಗಳು ಈ ಶೋ ವೀಕ್ಷಣೆಗೆ ಆಗಮಿಸಿದ್ದರು.

ಬಂದ ಎಲ್ಲಾ ಕಲಾವಿದರನ್ನು ದರ್ಶನ್ ಪ್ರೀತಿಯಿಂದ ಸ್ವಾಗತಿಸಿದರು. ಆ ಬಳಿಕ ದರ್ಶನ್ ಅವರು ಥಿಯೇಟರ್​ ಒಳಗೆ ತೆರಳಿದರು. ದರ್ಶನ್, ರಾಕ್​ಲೈನ್ ವೆಂಕಟೇಶ್ ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಈ ಫೋಟೋ ಫ್ಯಾನ್ಸ್ ವಲಯದಲ್ಲಿ ಹರಿದಾಡಿದೆ. ದರ್ಶನ್ ಯಾವಾಗಲೂ ಸಿಂಪಲ್ ಆಗಿ ಇರೋಕೆ ಇಷ್ಟ ಪಡುತ್ತಾರೆ. ಇದಕ್ಕೆ ಈ ಫೋಟೋ ಉತ್ತಮ ಉದಾಹರಣೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇದನ್ನೂ ಓದಿ: ಇತಿಹಾಸ ಬರೆಯಲು ಸಿದ್ಧವಾದ ‘ಕಾಟೇರ’; ಐದು ದಿನಕ್ಕೆ ಸಿನಿಮಾ ಗಳಿಸಿದ್ದೆಷ್ಟು?

‘ಕಾಟೇರ’ ಚಿತ್ರ ಮೊದಲ ದಿನ ಅಂದರೆ ಡಿಸೆಂಬರ್ 29ರಂದು 19.79 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಶನಿವಾರ (ಡಿ.30)17.35 ಕೋಟಿ ರೂ., ಭಾನುವಾರ (ಡಿ.31) 20.94 ಕೋಟಿ ರೂ., ಸೋಮವಾರ(ಜ.1) 18.26 ಕೋಟಿ ರೂ. ಹಾಗೂ ಮಂಗಳವಾರ (ಜ.2) 9.24 ಕೋಟಿ ರೂ. ಗಳಿಕೆ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 86.84 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Thu, 4 January 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!