AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬೇರೆ ಜೈಲಿಗೆ ಹೋಗದಂತೆ ಲಾಯರ್ ಮಾಡಿರುವ ಪ್ರಯತ್ನ ಏನು?

ನಟ ದರ್ಶನ್ ಅವರ ಜಾಮೀನು ರದ್ದಾಗಿದ್ದು, ಮತ್ತೆ ಜೈಲು ವಾಸ ಅನಿವಾರ್ಯ ಆಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹಕ್ಕೆ ಅವರನ್ನು ಕಳಿಸಲಾಗಿದೆ. ಬಳಿಕ ದರ್ಶನ್ ಪರ ವಕೀಲರು ಮಾಧ್ಯಮಗಳ ಜೊತೆ ಮಾತನಾಡಿ, ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ. ಆ ಕುರಿತು ಇಲ್ಲಿದೆ ಪೂರ್ತಿ ವಿವರ..

ದರ್ಶನ್ ಬೇರೆ ಜೈಲಿಗೆ ಹೋಗದಂತೆ ಲಾಯರ್ ಮಾಡಿರುವ ಪ್ರಯತ್ನ ಏನು?
Darshan, Lawyer
ಮದನ್​ ಕುಮಾರ್​
|

Updated on: Aug 14, 2025 | 9:16 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರು ಇಷ್ಟು ದಿನ ಜಾಮೀನಿನ ಮೇಲೆ ಆರಾಮಾಗಿ ಕಾಲ ಕಳೆಯುತ್ತಿದ್ದರು. ಆದರೆ ಇಂದು (ಆಗಸ್ಟ್ 14) ಅವರ ಜಾಮೀನನ್ನು ಸುಪ್ರೀಂ ಕೋರ್ಟ್​ (Supreme Court) ರದ್ದು ಮಾಡಿ ಆದೇಶ ಹೊರಡಿಸಿದೆ. ಆದ್ದರಿಂದ 7 ಪ್ರಮುಖ ಆರೋಪಿಗಳು ಮತ್ತೆ ಜೈಲುಪಾಲಾಗಿದ್ದಾರೆ. ನಟ ದರ್ಶನ್ (Darshan) ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಇರಿಸಲು ಲಾಯರ್ ಮನವಿ ಮಾಡಿಕೊಂಡಿದ್ದಾರೆ. ಆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

‘ಇಂದು ಜಾಮೀನು ರದ್ದಾಗಿರುವ ದರ್ಶನ್ ಹಾಗೂ ಇನ್ನಿತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ. ದರ್ಶನ್ ಅವರ ಪರವಾಗಿ ನಾವು ವಿಶೇಷ ಮನವಿಯನ್ನು ಮಾಡಿಕೊಂಡಿದ್ದೇವೆ. ದರ್ಶನ್ ಅವರನ್ನು ಬೇರೆ ಜೈಲಿಗೆ ಕಳಿಸಲು ಅಧಿಕಾರಿಗಳು ಆದೇಶ ನೀಡಿದರೆ ನಮ್ಮ ವಾದಕ್ಕೆ ಅವಕಾಶ ನೀಡಬೇಕಾಗುತ್ತದೆ’ ಎಂದು ವಕೀಲರು ತಿಳಿಸಿದ್ದಾರೆ.

‘ದರ್ಶನ್ ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದೇವೆ. ಯಾಕೆಂದರೆ, ಈ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲೇ ನಡೆಯುವುದರಿಂದ ನ್ಯಾಯಾಲಯದಲ್ಲಿ ಅವರ ಫಿಸಿಕಲ್ ಹಾಜರಾತಿ ಕಡ್ಡಾಯವಾಗಿದೆ. ವಕೀಲರಾದ ನಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಳಿ ಮಾಹಿತಿ ತೆಗೆದುಕೊಳ್ಳಬೇಕಾಗುತ್ತದೆ. ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಿದರೆ ಅಲ್ಲಿಗೆ ಹೋಗಿ ಮಾಹಿತಿ ಪಡೆಯುವುದು ಕಷ್ಟ ಆಗುತ್ತದೆ ಎಂಬುದನ್ನು ನ್ಯಾಯಾಲಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದಿದ್ದಾರೆ ದರ್ಶನ್ ಪರ ವಕೀಲರು.

ಇದನ್ನೂ ಓದಿ
Image
20 ಕೋಟಿ ರೂ. ಕೊಟ್ಟರು ಎಂಬುದೆಲ್ಲ ಸುಳ್ಳು: ರೇಣುಕಾಸ್ವಾಮಿ ತಂದೆ ಖಡಕ್ ಮಾತು
Image
ಯಾವ ಜೈಲಿಗೆ ಹೋಗಲಿದ್ದಾರೆ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸಿದ್ಧತೆ?
Image
‘ನೆಮ್ದಿಯಾಗ್ ಇರ್ಬೇಕ್’ ಹಾಡು ರಿಲೀಸ್​ಗೂ ಮೊದಲೇ ನೆಮ್ಮದಿ ಕಳೆದುಕೊಂಡ ದಾಸ
Image
ಸುಪ್ರೀಂ ಚುರುಕು; ಬೇಗ ಇತ್ಯರ್ಥವಾಗುತ್ತಾ ರೇಣುಕಾಸ್ವಾಮಿ ಪ್ರಕರಣ?

‘ಈ ವಿಚಾರಕ್ಕೆ ಸಂಬಂಧಿಸಿದಂತೆ ನಾವು ನ್ಯಾಯಾಲಯಕ್ಕೆ ಅರ್ಜಿ ಕೂಡ ಹಾಕಿದ್ದೇವೆ. ಅದನ್ನು ಪರಿಗಣಿಸುವುದಾಗಿ ಸಾಹೇಬರು ಹೇಳಿದ್ದಾರೆ. ಸುಪ್ರೀಂ ಕೋರ್ಟ್​​ನಲ್ಲಿ ರಿವ್ಯೂವ್​​ಗೆ ಹೋಗಲು ಅವಕಾಶ ಇದೆ. ಆದರೆ ಆ ಬಗ್ಗೆ ಯಾವ ಚರ್ಚೆಯೂ ನಮ್ಮಲ್ಲಿ ನಡೆದಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ನಾವು ತೆಗೆದುಕೊಳ್ಳುವವರಿದ್ದೇವೆ’ ಎಂದು ಲಾಯರ್ ತಿಳಿಸಿದ್ದಾರೆ.

ಇದನ್ನೂ ಓದಿ: ಅರೆಸ್ಟ್ ಆಗಿರುವ ದರ್ಶನ್ ನೋಡಲು ಬಂದ ಅಭಿಮಾನಿಗಳಿಗೆ ಪೊಲೀಸ್ ಲಾಠಿ ರುಚಿ

ಕಳೆದ ಬಾರಿ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ಸಿಗರೇಟ್ ಸೇದುತ್ತಾ ರಾಜಾಥಿತ್ಯ ಪಡೆದ ಫೋಟೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಲಾಯರ್​​ಗೆ ಪ್ರಶ್ನೆ ಎದುರಾಗಿದೆ. ‘ಜೈಲಿನಲ್ಲಿ ಹೇಗೆ ಇರಬೇಕು ಎಂಬ ಬಗ್ಗೆ ನಾವು ಯಾವುದೇ ಸಲಹೆ ನೀಡಿಲ್ಲ. ಯಾವ ರೀತಿ ಇರಬೇಕೋ ಆ ಹುಷಾರಿನಲ್ಲಿ ದರ್ಶನ್ ಇರುತ್ತಾರೆ. ಎಲ್ಲ ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳಿಸಿಲಾಗಿದೆ’ ಎಂದು ವಕೀಲರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು