AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಸ್ಥಳಾಂತರಗೊಳ್ಳುತ್ತಿರುವ ಬಳ್ಳಾರಿ ಜೈಲಿನಲ್ಲಿ ಊಟದ ಮೆನು ಹೀಗಿದೆ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಈಗ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಅಲ್ಲಿ ದರ್ಶನ್​ ವಾಸ ಹೇಗಿರಲಿದೆ. ಯಾವ ರೀತಿಯ ಊಟ ಅವರಿಗೆ ಸಿಗಲಿದೆ? ಇಲ್ಲಿದೆ ಮಾಹಿತಿ.

ದರ್ಶನ್ ಸ್ಥಳಾಂತರಗೊಳ್ಳುತ್ತಿರುವ ಬಳ್ಳಾರಿ ಜೈಲಿನಲ್ಲಿ ಊಟದ ಮೆನು ಹೀಗಿದೆ
ದರ್ಶನ್ ತೂಗುದೀಪ
ಮಂಜುನಾಥ ಸಿ.
|

Updated on: Aug 28, 2024 | 2:05 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೆಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಹಾಕಿ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಿಸುತ್ತಿದ್ದಾರೆ. ನಟ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ವಾಸ ಹೇಗಿರಲಿದೆ? ಅಲ್ಲಿ ಊಟಕ್ಕೆ ಏನೇನು ಸಿಗುತ್ತದೆ? ಇಲ್ಲಿದೆ ಮಾಹಿತಿ.

ಪರಪ್ಪನ ಅಗ್ರಹಾರ ಜೈಲಿಗೆ ಹೋಲಿಸಿದರೆ ಬಳ್ಳಾರಿ ಜೈಲಿನ ವಿಸ್ತೀರ್ಣ ಕಡಿಮೆ ಎನ್ನಲಾಗುತ್ತಿದೆ. ಬ್ಯಾರಕ್​ಗಳು ಸಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ವ್ಯವಸ್ಥಿತವಾಗಿಲ್ಲ ಎಂಬ ಮಾತುಗಳು ಇವೆ. ಇನ್ನು ಊಟದ ವಿಷಯಕ್ಕೆ ಬರುವುದಾದರೆ, ಸರಳವಾದ ಊಟದ ಮೆನು ಬಳ್ಳಾರಿ ಜೈಲಿನಲ್ಲಿದೆ.

ಇದನ್ನೂ ಓದಿ:ಬಳ್ಳಾರಿ ಜೈಲಿಗೆ ಕರೆತಂದರೆ ದರ್ಶನ್ ಮತ್ತೆ ಕೆಟ್ಟುಹೋಗ್ತಾರೆ: ಕಾರಾಗೃಹದ ಕರ್ಮಕಾಂಡ ಬಿಚ್ಚಿಟ್ಟ ಮಾಜಿ ಕೈದಿ

ಪ್ರತಿಧಿನ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು, ಒಗ್ಗರಣೆ ಅವಲಕ್ಕಿ, ಬಿಸಿಬೇಳೆ ಬಾತ್, ಚಿತ್ರಾನ್ನ ಇಂಥಹವುಗಳು ಸಿಗಲಿವೆ. ಇನ್ನು ಮಧ್ಯಾಹ್ನದ ಊಟಕ್ಕೆ ರಾಗಿಮುದ್ದೆ, ಚಪಾತಿ, ಜೋಳದ ರೊಟ್ಟಿ, ಸಜ್ಜಿ ರೊಟ್ಟಿ ಕೊಡಲಾಗುತ್ತದೆ. ಬಳ್ಳಾರಿಯ ಜನರ ಸ್ಥಳೀಯ ಊಟ ಜೋಳ, ಸಜ್ಜಿ ರೊಟ್ಟಿಯೇ ಆಗಿದೆ. ದರ್ಶನ್​, ರೊಟ್ಟಿ, ಚಪಾತಿ ಅಥವಾ ಮುದ್ದೆಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದಾಗಿರುತ್ತದೆ. ರಾತ್ರಿ ವೇಳೆ ಅನ್ನ ಸಾಂಬಾರ್ ಲಭ್ಯವಾಗಲಿದೆ. ಪ್ರತಿ ಮಂಗಳವಾರ ಮೊಟ್ಟೆ ಕೊಡಲಾಗುತ್ತದೆ. ಇನ್ನು ಪ್ರತಿ ಭಾನುವಾರ ಮಾಂಸಾಹಾರವನ್ನು ನೀಡಲಾಗುತ್ತದೆ. ಒಂದು ಭಾನುವಾರ ಚಿಕನ್ ಕೊಟ್ಟರೆ ಮತ್ತೊಂದು ಭಾನುವಾರ ಮಟನ್ ನೀಡಲಾಗುತ್ತದೆ. ಇದು ಬಳ್ಳಾರಿ ಜೈಲಿನ ಸಾಮಾನ್ಯ ಊಟದ ಮೆನು ಆಗಿದ್ದು, ಇದೇ ಮೆನು ದರ್ಶನ್​ಗೂ ಸಹ ಇರಲಿದೆ.

ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ತಮಗೆ ಊಟ ಸರಿ ಹೋಗುತ್ತಿಲ್ಲ ಎಂದಿದ್ದರು. ತಮಗೆ ಮನೆಯಿಂದ ಊಟ ಬೇಕು ಎಂದು ಮನವಿ ಮಾಡಿದ್ದರು. ಆದರೆ ಅವರ ಮನವಿ ತಿರಸ್ಕರಿಸಲಾಗಿತ್ತು. ಈಗ ಬಳ್ಳಾರಿಗೆ ಶಿಫ್ಟ್ ಆಗುತ್ತಿದ್ದು, ಅಲ್ಲಿ ಅವರಿಗೆ ಮತ್ತೊಮ್ಮೆ ಹೊಸ ರೀತಿಯ ಊಟಕ್ಕೆ ಹೊಂದಿಕೊಳ್ಳಬೇಕಾಗಿರುತ್ತದೆ. ಅಲ್ಲದೆ ಹೊಸ ರೀತಿಯ ಪರಿಸರಕ್ಕೆ ಹೊಂದಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹ ಕೈದಿಗಳ ಜೊತೆಗೆ ತುಸು ಆತ್ಮೀಯತೆ ಬೆಳೆಸಿಕೊಂಡಿದ್ದರು. ಆಗಾಗ್ಗೆ ಅವರೊಟ್ಟಿಗೆ ವಾಲಿಬಾಲ್ ಇನ್ನಿತರೆ ಚಟುವಟಿಕೆಗಳಲ್ಲಿ ಭಾಗಿ ಆಗಿರುತ್ತಿದ್ದರು. ಈಗ ಬಳ್ಳಾರಿ ಜೈಲಿನಲ್ಲಿ ಹೊಸ ಸಹ ಕೈದಿಗಳೊಟ್ಟಿಗೆ ಸ್ನೇಹ ಬೆಳೆಸಿಕೊಳ್ಳಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್