AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿರುವುದು ಸಾಬೀತಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ಅದರಂತೆ ಈಗ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 28, 2024 | 7:21 AM

Share

ನಟ ದರ್ಶನ್ ಅವರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಸಿಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಇಂದು (ಆಗಸ್ಟ್ 28) ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮಧ್ಯಾಹ್ನ 1 ಗಂಟೆ ಬಳಿಕ ಈ ಪ್ರಕ್ರಿಯೆ ಆರಂಭ ಆಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಒಂದು ಪ್ರಮುಖ ವಿಚಾರ ನಡೆಯಬೇಕಿದೆ.

ದರ್ಶನ್ ಅವರು ಈ ಮೊದಲು ‘ಚೌಕ’ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲಿ ಜೈಲಿನ ದೃಶ್ಯವೊಂದು ಬರುತ್ತದೆ. ಅದನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲೇ ಶೂಟ್ ಮಾಡಲಾಗಿತ್ತು. ದರ್ಶನ್ ಕೂಡ ಈ ದೃಶ್ಯದಲ್ಲಿ ಇದ್ದರು. ಈಗ ಅವರು ಇದೇ ಜೈಲಿಗೆ ಸ್ಥಳಾಂತರ ಆಗುತ್ತಿದ್ದಾರೆ ಅನ್ನೋದು ವಿಚಿತ್ರ.

ಪೊಲೀಸ್​ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಒಂದು ಪ್ರಮುಖ ಪ್ರಕ್ರಿಯೆ ಮುಗಿಯಬೇಕಿದೆ. ಇಂದು (ಆಗಸ್ಟ್​ 28) ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಅವರನ್ನು ಜಡ್ಜ್​ ಮುಂದೆ ಹಾಜರು ಮಾಡಲಾಗುತ್ತದೆ. ದರ್ಶನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಕೋರ್ಟ್​ ಪ್ರಕ್ರಿಯೆ ಬಳಿಕ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಿಂದ ದರ್ಶನ್‌ ಸ್ಥಳಾಂತರಕ್ಕೆ ಕೋರ್ಟ್​ ಒಪ್ಪಿಗೆ: ದಾಸ ಈಗ ಹೋಗುವುದು ಯಾವ ಜೈಲಿಗೆ?

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ಬಂಧನಕ್ಕೆ ಈಗಾಗಲೇ ಮೂರು ತಿಂಗಳು ಪೂರ್ಣಗೊಳ್ಳುತ್ತಾ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಪೊಲೀಸರು ಕೋರ್ಟ್ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಆ ಬಳಿಕ ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Wed, 28 August 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ