AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿರುವುದು ಸಾಬೀತಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ಅದರಂತೆ ಈಗ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 28, 2024 | 7:21 AM

Share

ನಟ ದರ್ಶನ್ ಅವರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಸಿಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಇಂದು (ಆಗಸ್ಟ್ 28) ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗುತ್ತಿದೆ. ಮಧ್ಯಾಹ್ನ 1 ಗಂಟೆ ಬಳಿಕ ಈ ಪ್ರಕ್ರಿಯೆ ಆರಂಭ ಆಗುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಒಂದು ಪ್ರಮುಖ ವಿಚಾರ ನಡೆಯಬೇಕಿದೆ.

ದರ್ಶನ್ ಅವರು ಈ ಮೊದಲು ‘ಚೌಕ’ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಅವರು ಅತಿಥಿ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲಿ ಜೈಲಿನ ದೃಶ್ಯವೊಂದು ಬರುತ್ತದೆ. ಅದನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲೇ ಶೂಟ್ ಮಾಡಲಾಗಿತ್ತು. ದರ್ಶನ್ ಕೂಡ ಈ ದೃಶ್ಯದಲ್ಲಿ ಇದ್ದರು. ಈಗ ಅವರು ಇದೇ ಜೈಲಿಗೆ ಸ್ಥಳಾಂತರ ಆಗುತ್ತಿದ್ದಾರೆ ಅನ್ನೋದು ವಿಚಿತ್ರ.

ಪೊಲೀಸ್​ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಒಂದು ಪ್ರಮುಖ ಪ್ರಕ್ರಿಯೆ ಮುಗಿಯಬೇಕಿದೆ. ಇಂದು (ಆಗಸ್ಟ್​ 28) ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಅವರನ್ನು ಜಡ್ಜ್​ ಮುಂದೆ ಹಾಜರು ಮಾಡಲಾಗುತ್ತದೆ. ದರ್ಶನ್​ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಕೋರ್ಟ್​ ಪ್ರಕ್ರಿಯೆ ಬಳಿಕ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಿಂದ ದರ್ಶನ್‌ ಸ್ಥಳಾಂತರಕ್ಕೆ ಕೋರ್ಟ್​ ಒಪ್ಪಿಗೆ: ದಾಸ ಈಗ ಹೋಗುವುದು ಯಾವ ಜೈಲಿಗೆ?

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ಬಂಧನಕ್ಕೆ ಈಗಾಗಲೇ ಮೂರು ತಿಂಗಳು ಪೂರ್ಣಗೊಳ್ಳುತ್ತಾ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಪೊಲೀಸರು ಕೋರ್ಟ್ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಆ ಬಳಿಕ ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Wed, 28 August 24

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ