AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್ ಅವರು ಮನವಿ ಮಾಡಿಕೊಂಡಿದ್ದಾರೆ.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ
ಅರ್ಜುನ್
TV9 Web
| Edited By: |

Updated on: May 03, 2024 | 7:00 AM

Share

ನಟ ದರ್ಶನ್ (Darshan) ಅವರಿಗೆ ಪ್ರಾಣಿಗಳ ಮೇಲೆ ಇರುವ ಪ್ರೀತಿ ಅಪಾರವಾದುದ್ದು. ಇದು ಪದೇ ಪದೇ ಸಾಬೀತು ಆಗುತ್ತಲೇ ಇರುತ್ತದೆ. ಅವರು ಫಾರ್ಮ್​​ಹೌಸ್​ನಲ್ಲಿ ಸಾಕಷ್ಟು ಹಸುಗಳನ್ನು ಸಾಕಿದ್ದಾರೆ. ಪ್ರಾಣಿ-ಪಕ್ಷಿಗಳಿಗೂ ಆಶ್ರಯ ಕೊಟ್ಟಿದ್ದಾರೆ. ಈಗ ದರ್ಶನ್ ಅವರು ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆಯ ಸಮಾಧಿಗೆ ಒಂದು ವ್ಯವಸ್ಥೆ ಆಗಬೇಕು ಎನ್ನುವ ಕೋರಿಕೆಯನ್ನು ಅವರು ಇಟ್ಟಿದ್ದಾರೆ.

ಕಳೆದ ವರ್ಷ ನವೆಂಬರ್ 23ರಂದು ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತಿತ್ತು. ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು. ಸಕಲೇಶಪುರೆ ಬಳಿಯ ಕಾರ್ಯಾಚರಣೆಯಲ್ಲಿ ಅರ್ಜುನ, ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟೂ 6 ಆನೆಗಳು ಇದ್ದವು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. 9 ಆನೆಗಳನ್ನು ಹಿಡಿಯಲು ಟಾರ್ಗೆಟ್ ಇಟ್ಟುಕೊಳ್ಳಲಾಗಿತ್ತು. ಆರು ಆನೆಗಳನ್ನು ಆಗಲೇ ಹಿಡಿಯಲಾಗಿತ್ತು. ಏಳನೇ ಆನೆಯನ್ನು ಟಾರ್ಗೆಟ್ ಮಾಡುವಾಗ ಅರ್ಜುನ ಮೃತಪಟ್ಟಿದ್ದ. ನಂತರ ಹಾಸನದಲ್ಲಿ ಆನೆಯ ಅಂತ್ಯಕ್ರಿಯೆ ನಡೆಸಲಾಗಿತ್ತು. ಈಗ ದರ್ಶನ್ ಕಡೆಯಿಂದ ವಿಶೇಷ ಮನವಿ ಬಂದಿದೆ.

ಇದನ್ನೂ ಓದಿ: ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

‘ಚಾಮುಂಡೇಶ್ವರಿ ತಾಯಿಯ ದಸರಾ ವೈಭವದ ಸಾರೋಟುಗಾರ ಅರ್ಜುನನ ಸಮಾಧಿ ಮರೆತೇ ಬಿಟ್ಟರೇ ಹೇಗೆ? ಸಂಬಂಧ ಪಟ್ಟವರು ನಮ್ಮ ಗಜರಾಜ ಅರ್ಜುನನ ಮರೆಯದಿರಲಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ