AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್ ಅವರು ಮನವಿ ಮಾಡಿಕೊಂಡಿದ್ದಾರೆ.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ
ಅರ್ಜುನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 03, 2024 | 7:00 AM

ನಟ ದರ್ಶನ್ (Darshan) ಅವರಿಗೆ ಪ್ರಾಣಿಗಳ ಮೇಲೆ ಇರುವ ಪ್ರೀತಿ ಅಪಾರವಾದುದ್ದು. ಇದು ಪದೇ ಪದೇ ಸಾಬೀತು ಆಗುತ್ತಲೇ ಇರುತ್ತದೆ. ಅವರು ಫಾರ್ಮ್​​ಹೌಸ್​ನಲ್ಲಿ ಸಾಕಷ್ಟು ಹಸುಗಳನ್ನು ಸಾಕಿದ್ದಾರೆ. ಪ್ರಾಣಿ-ಪಕ್ಷಿಗಳಿಗೂ ಆಶ್ರಯ ಕೊಟ್ಟಿದ್ದಾರೆ. ಈಗ ದರ್ಶನ್ ಅವರು ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆಯ ಸಮಾಧಿಗೆ ಒಂದು ವ್ಯವಸ್ಥೆ ಆಗಬೇಕು ಎನ್ನುವ ಕೋರಿಕೆಯನ್ನು ಅವರು ಇಟ್ಟಿದ್ದಾರೆ.

ಕಳೆದ ವರ್ಷ ನವೆಂಬರ್ 23ರಂದು ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತಿತ್ತು. ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು. ಸಕಲೇಶಪುರೆ ಬಳಿಯ ಕಾರ್ಯಾಚರಣೆಯಲ್ಲಿ ಅರ್ಜುನ, ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟೂ 6 ಆನೆಗಳು ಇದ್ದವು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. 9 ಆನೆಗಳನ್ನು ಹಿಡಿಯಲು ಟಾರ್ಗೆಟ್ ಇಟ್ಟುಕೊಳ್ಳಲಾಗಿತ್ತು. ಆರು ಆನೆಗಳನ್ನು ಆಗಲೇ ಹಿಡಿಯಲಾಗಿತ್ತು. ಏಳನೇ ಆನೆಯನ್ನು ಟಾರ್ಗೆಟ್ ಮಾಡುವಾಗ ಅರ್ಜುನ ಮೃತಪಟ್ಟಿದ್ದ. ನಂತರ ಹಾಸನದಲ್ಲಿ ಆನೆಯ ಅಂತ್ಯಕ್ರಿಯೆ ನಡೆಸಲಾಗಿತ್ತು. ಈಗ ದರ್ಶನ್ ಕಡೆಯಿಂದ ವಿಶೇಷ ಮನವಿ ಬಂದಿದೆ.

ಇದನ್ನೂ ಓದಿ: ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

‘ಚಾಮುಂಡೇಶ್ವರಿ ತಾಯಿಯ ದಸರಾ ವೈಭವದ ಸಾರೋಟುಗಾರ ಅರ್ಜುನನ ಸಮಾಧಿ ಮರೆತೇ ಬಿಟ್ಟರೇ ಹೇಗೆ? ಸಂಬಂಧ ಪಟ್ಟವರು ನಮ್ಮ ಗಜರಾಜ ಅರ್ಜುನನ ಮರೆಯದಿರಲಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ