AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್ ಅವರು ಮನವಿ ಮಾಡಿಕೊಂಡಿದ್ದಾರೆ.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ
ಅರ್ಜುನ್
TV9 Web
| Edited By: |

Updated on: May 03, 2024 | 7:00 AM

Share

ನಟ ದರ್ಶನ್ (Darshan) ಅವರಿಗೆ ಪ್ರಾಣಿಗಳ ಮೇಲೆ ಇರುವ ಪ್ರೀತಿ ಅಪಾರವಾದುದ್ದು. ಇದು ಪದೇ ಪದೇ ಸಾಬೀತು ಆಗುತ್ತಲೇ ಇರುತ್ತದೆ. ಅವರು ಫಾರ್ಮ್​​ಹೌಸ್​ನಲ್ಲಿ ಸಾಕಷ್ಟು ಹಸುಗಳನ್ನು ಸಾಕಿದ್ದಾರೆ. ಪ್ರಾಣಿ-ಪಕ್ಷಿಗಳಿಗೂ ಆಶ್ರಯ ಕೊಟ್ಟಿದ್ದಾರೆ. ಈಗ ದರ್ಶನ್ ಅವರು ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆಯ ಸಮಾಧಿಗೆ ಒಂದು ವ್ಯವಸ್ಥೆ ಆಗಬೇಕು ಎನ್ನುವ ಕೋರಿಕೆಯನ್ನು ಅವರು ಇಟ್ಟಿದ್ದಾರೆ.

ಕಳೆದ ವರ್ಷ ನವೆಂಬರ್ 23ರಂದು ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತಿತ್ತು. ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು. ಸಕಲೇಶಪುರೆ ಬಳಿಯ ಕಾರ್ಯಾಚರಣೆಯಲ್ಲಿ ಅರ್ಜುನ, ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟೂ 6 ಆನೆಗಳು ಇದ್ದವು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. 9 ಆನೆಗಳನ್ನು ಹಿಡಿಯಲು ಟಾರ್ಗೆಟ್ ಇಟ್ಟುಕೊಳ್ಳಲಾಗಿತ್ತು. ಆರು ಆನೆಗಳನ್ನು ಆಗಲೇ ಹಿಡಿಯಲಾಗಿತ್ತು. ಏಳನೇ ಆನೆಯನ್ನು ಟಾರ್ಗೆಟ್ ಮಾಡುವಾಗ ಅರ್ಜುನ ಮೃತಪಟ್ಟಿದ್ದ. ನಂತರ ಹಾಸನದಲ್ಲಿ ಆನೆಯ ಅಂತ್ಯಕ್ರಿಯೆ ನಡೆಸಲಾಗಿತ್ತು. ಈಗ ದರ್ಶನ್ ಕಡೆಯಿಂದ ವಿಶೇಷ ಮನವಿ ಬಂದಿದೆ.

ಇದನ್ನೂ ಓದಿ: ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

‘ಚಾಮುಂಡೇಶ್ವರಿ ತಾಯಿಯ ದಸರಾ ವೈಭವದ ಸಾರೋಟುಗಾರ ಅರ್ಜುನನ ಸಮಾಧಿ ಮರೆತೇ ಬಿಟ್ಟರೇ ಹೇಗೆ? ಸಂಬಂಧ ಪಟ್ಟವರು ನಮ್ಮ ಗಜರಾಜ ಅರ್ಜುನನ ಮರೆಯದಿರಲಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!