AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಪಾತ್ರ ಏನು ಎಂಬ ಬಗ್ಗೆ ವಿವರಣೆ ಇಡಲಾಗಿದೆ. ಇತ್ತ ದರ್ಶನ್ ಅವರು ಬಳ್ಳಾರಿಯಲ್ಲಿ ಸಿಂಪಲ್ ಜೀವನ ನಡೆಸುತ್ತಿದ್ದಾರೆ.

ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 06, 2024 | 2:36 PM

Share

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಅರೆಸ್ಟ್ ಆಗಿರೋ ನಟ ದರ್ಶನ್ ಹಾಗೂ ಗ್ಯಾಂಗ್ ಬೇರೆ ಬೇರೆ ಜೈಲುಗಳಲ್ಲಿ ವಿಚಾರಾಣಾಧೀನ ಖೈದಿಗಳಾಗಿ ಇಡಲಾಗಿದೆ. ಆರಂಭದಲ್ಲಿ ಅವರು ಬೆಂಗಳೂರಿನ ಜೈಲಿನಲ್ಲಿ ಇದ್ದರು. ಈ ವೇಳೆ ಅವರು ಹಣ ಪಡೆದು ಸಾಕಷ್ಟು ವ್ಯವಸ್ಥೆ ಪಡೆದಿದ್ದಾರೆ ಎನ್ನಲಾಗಿತ್ತು. ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಾ ಇದ್ದ ಫೋಟೋ ವೈರಲ್ ಆಗಿತ್ತು. ಈ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿನಲ್ಲಿ ಶಿಫ್ಟ್ ಮಾಡಲಾಗಿತ್ತು. ಈಗ ಅವರು ಎಂಟು ದಿನಕ್ಕೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಲೆಕ್ಕ ಸಿಕ್ಕಿದೆ.

ನಟ ದರ್ಶನ್ ಅವರು ದರ್ಶನ್ 735 ರೂಪಾಯಿ ಖರ್ಚು ಮಾಡಿದ್ದಾರೆ. ಕಾಫಿ, ಟೀಗಾಗಿ ಅವರು ಈ ಹಣ ಬಳಕೆ ಮಾಡಿಕೊಂಡಿದ್ದಾರೆ. ಅವರು ಇಲ್ಲಿ ಸರಳವಾದ ಜೀವನ ನಡೆಸೋ ಅನಿವಾರ್ಯತೆ ಬಂದೊದಗಿದೆ. ಮದ್ಯ ಸೇವನೆ, ಸಿಗರೇಟ್ ಸೇದಲು ಅವರಿಗೆ ಇಲ್ಲಿ ಅವಕಾಶವಿಲ್ಲ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ದರ್ಶನ್ ಅವರು ಹೊರಗೆ ಸಾಕಷ್ಟು ಸುಖವಾಗಿ ಜೀವನ ನಡೆಸುತ್ತಾ ಬಂದವರು. ವಾರಕ್ಕೆ ಎರಡು ಪಾರ್ಟಿ ಮಾಡುತ್ತಾ ಇರುತ್ತಿದ್ದರು. ಗೆಳೆಯರ ಜೊತೆ ಸುತ್ತಾಡುತ್ತಿದ್ದರು. ವನ್ಯ ಜೀವಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಈ ಕಾರಣಕ್ಕೆ ದರ್ಶನ್ ಅವರಿಗೆ ಜೈಲಿನ ಜೀವನ ಕಷ್ಟ ಆಗುತ್ತಿದೆ.

ಇದನ್ನೂ ಓದಿ: ಚಾರ್ಜ್​ಶೀಟ್​ ಸಲ್ಲಿಕೆ ಬಳಿಕ ದೇವರ ಮೊರೆ ಹೋದ ದರ್ಶನ್​ ಪತ್ನಿ ವಿಜಯಲಕ್ಷ್ಮಿ

ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರಿಗೆ ಕಠಿಣ ನಿಯಮ ಹಾಕಲಾಗಿದೆ. ಅವರು ಎಲ್ಲವನ್ನು ಫಾಲೋ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಅವರು ನಿತ್ಯ ಜೈಲಿನಲ್ಲಿ ನೀಡುವ ಊಟ ಹಾಗೂ ತಿಂಡಿ ಸೇವನೆ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರು ಜೈಲಿನ ಕ್ಯಾಂಟೀನ್​ನಲ್ಲಿ ಸಿಗುವ ಕೆಲ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5ರಂದು ಅವರು ಜೈಲಿನಲ್ಲಿ ಪತ್ನಿ ವಿಜಯಲಕ್ಷ್ಮೀ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ