AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಪಾತ್ರ ಏನು ಎಂಬ ಬಗ್ಗೆ ವಿವರಣೆ ಇಡಲಾಗಿದೆ. ಇತ್ತ ದರ್ಶನ್ ಅವರು ಬಳ್ಳಾರಿಯಲ್ಲಿ ಸಿಂಪಲ್ ಜೀವನ ನಡೆಸುತ್ತಿದ್ದಾರೆ.

ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on: Sep 06, 2024 | 2:36 PM

Share

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ಅರೆಸ್ಟ್ ಆಗಿರೋ ನಟ ದರ್ಶನ್ ಹಾಗೂ ಗ್ಯಾಂಗ್ ಬೇರೆ ಬೇರೆ ಜೈಲುಗಳಲ್ಲಿ ವಿಚಾರಾಣಾಧೀನ ಖೈದಿಗಳಾಗಿ ಇಡಲಾಗಿದೆ. ಆರಂಭದಲ್ಲಿ ಅವರು ಬೆಂಗಳೂರಿನ ಜೈಲಿನಲ್ಲಿ ಇದ್ದರು. ಈ ವೇಳೆ ಅವರು ಹಣ ಪಡೆದು ಸಾಕಷ್ಟು ವ್ಯವಸ್ಥೆ ಪಡೆದಿದ್ದಾರೆ ಎನ್ನಲಾಗಿತ್ತು. ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಾ ಇದ್ದ ಫೋಟೋ ವೈರಲ್ ಆಗಿತ್ತು. ಈ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿನಲ್ಲಿ ಶಿಫ್ಟ್ ಮಾಡಲಾಗಿತ್ತು. ಈಗ ಅವರು ಎಂಟು ದಿನಕ್ಕೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಲೆಕ್ಕ ಸಿಕ್ಕಿದೆ.

ನಟ ದರ್ಶನ್ ಅವರು ದರ್ಶನ್ 735 ರೂಪಾಯಿ ಖರ್ಚು ಮಾಡಿದ್ದಾರೆ. ಕಾಫಿ, ಟೀಗಾಗಿ ಅವರು ಈ ಹಣ ಬಳಕೆ ಮಾಡಿಕೊಂಡಿದ್ದಾರೆ. ಅವರು ಇಲ್ಲಿ ಸರಳವಾದ ಜೀವನ ನಡೆಸೋ ಅನಿವಾರ್ಯತೆ ಬಂದೊದಗಿದೆ. ಮದ್ಯ ಸೇವನೆ, ಸಿಗರೇಟ್ ಸೇದಲು ಅವರಿಗೆ ಇಲ್ಲಿ ಅವಕಾಶವಿಲ್ಲ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ದರ್ಶನ್ ಅವರು ಹೊರಗೆ ಸಾಕಷ್ಟು ಸುಖವಾಗಿ ಜೀವನ ನಡೆಸುತ್ತಾ ಬಂದವರು. ವಾರಕ್ಕೆ ಎರಡು ಪಾರ್ಟಿ ಮಾಡುತ್ತಾ ಇರುತ್ತಿದ್ದರು. ಗೆಳೆಯರ ಜೊತೆ ಸುತ್ತಾಡುತ್ತಿದ್ದರು. ವನ್ಯ ಜೀವಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಈ ಕಾರಣಕ್ಕೆ ದರ್ಶನ್ ಅವರಿಗೆ ಜೈಲಿನ ಜೀವನ ಕಷ್ಟ ಆಗುತ್ತಿದೆ.

ಇದನ್ನೂ ಓದಿ: ಚಾರ್ಜ್​ಶೀಟ್​ ಸಲ್ಲಿಕೆ ಬಳಿಕ ದೇವರ ಮೊರೆ ಹೋದ ದರ್ಶನ್​ ಪತ್ನಿ ವಿಜಯಲಕ್ಷ್ಮಿ

ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರಿಗೆ ಕಠಿಣ ನಿಯಮ ಹಾಕಲಾಗಿದೆ. ಅವರು ಎಲ್ಲವನ್ನು ಫಾಲೋ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಅವರು ನಿತ್ಯ ಜೈಲಿನಲ್ಲಿ ನೀಡುವ ಊಟ ಹಾಗೂ ತಿಂಡಿ ಸೇವನೆ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರು ಜೈಲಿನ ಕ್ಯಾಂಟೀನ್​ನಲ್ಲಿ ಸಿಗುವ ಕೆಲ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಸೆಪ್ಟೆಂಬರ್ 5ರಂದು ಅವರು ಜೈಲಿನಲ್ಲಿ ಪತ್ನಿ ವಿಜಯಲಕ್ಷ್ಮೀ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Vinayak Badiger
Vinayak Badiger
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ