AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devil Movie: ‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್

ದರ್ಶನ್​ಗೆ ಕಳೆದ ಡಿಸೆಂಬರ್ ಅದೃಷ್ಟ ತಂದುಕೊಟ್ಟಿತ್ತು. ಅವರ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್ ಆಗಿ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈಗ ಅವರ ಮುಂದಿನ ಚಿತ್ರವನ್ನು ಡಿಸೆಂಬರ್ ಅಂತ್ಯಕ್ಕೆ ತೆರೆಮೇಲೆ ತರುತ್ತಿದ್ದಾರೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

Devil Movie: ‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 23, 2024 | 10:31 AM

Share

ನಟ ದರ್ಶನ್ (Darshan) ಅವರು ಸದ್ಯ ವಿಶ್ರಾಂತಿಯಲ್ಲಿ ಇದ್ದಾರೆ. ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ಈ ಗಾಯ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಅಕ್ಟೋಬರ್​ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ. ಕೈಗೆ ಪೆಟ್ಟಾದ ಕಾರಣ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈಗ ಹೊಸ ರಿಲೀಸ್ ದಿನಾಂಕವನ್ನು ದರ್ಶನ್ ಘೋಷಿಸಿದ್ದಾರೆ. ಈ ವರ್ಷ ಕ್ರಿಸ್​ಮಸ್​ಗೆ ಚಿತ್ರ ರಿಲೀಸ್ ಆಗಲಿದೆ.

ದರ್ಶನ್​ಗೆ ಕಳೆದ ಡಿಸೆಂಬರ್ ಅದೃಷ್ಟ ತಂದುಕೊಟ್ಟಿತ್ತು. ಅವರ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್ ಆಗಿ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈಗ ಅವರ ಮುಂದಿನ ಚಿತ್ರವನ್ನು ಡಿಸೆಂಬರ್ ಅಂತ್ಯಕ್ಕೆ ತೆರೆಮೇಲೆ ತರುತ್ತಿದ್ದಾರೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ –  ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ವರ್ಷಕ್ಕೆ ಎರಡು ಸಿನಿಮಾಗಳಲ್ಲಿ ನಟಿಸೋ ಟಾರ್ಗೆಟ್ ಇಟ್ಟುಕೊಂಡಿದ್ದರು. ಈಗ ಕೈಗೆ ಪೆಟ್ಟಾಗಿರುವುದರಿಂದ ಈ ವರ್ಷ ಅದು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಪತ್ನಿ ವಿಜಯಲಕ್ಷ್ಮಿ ಜೊತೆ ಅವರು ವಿದೇಶಕ್ಕೆ ತೆರಳಿದ್ದರು. ಅಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ದರ್ಶನ್ ಅವರು ಸಂಪೂರ್ಣ ಗುಣಮುಖರಾದ ಬಳಿಕ ಸಿನಿಮಾದ ಶೂಟ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: ಹೇಗಿದೆ ನೋಡಿ ದರ್ಶನ್ ನಟನೆಯ ‘ಡೆವಿಲ್’ ಮೇಕಿಂಗ್; ವಿಡಿಯೋ ರಿಲೀಸ್ ಮಾಡಿದ ಟೀಂ

‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರಿಗೆ ನಿರ್ದೇಶನದಲ್ಲಿ ಸಾಕಷ್ಟು ಅನುಭವ ಇದೆ. ಈ ಮೊದಲು ದರ್ಶನ್ ನಟನೆಯ ‘ತಾರಕ್’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು. ಈ ಸಿನಿಮಾ 2017ರಲ್ಲಿ ಬಿಡುಗಡೆ ಆಗಿತ್ತು. ಇವರು ಎರಡನೇ ಬಾರಿಗೆ ಒಂದಾಗಿದ್ದು, ಕುತೂಹಲ ಹೆಚ್ಚಿಸಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಸಿನಿಮಾದ ಮೇಕಿಂಗ್ ವಿಡಿಯೋನ ತಂಡ ರಿಲೀಸ್ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ