AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devil Movie: ‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್

ದರ್ಶನ್​ಗೆ ಕಳೆದ ಡಿಸೆಂಬರ್ ಅದೃಷ್ಟ ತಂದುಕೊಟ್ಟಿತ್ತು. ಅವರ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್ ಆಗಿ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈಗ ಅವರ ಮುಂದಿನ ಚಿತ್ರವನ್ನು ಡಿಸೆಂಬರ್ ಅಂತ್ಯಕ್ಕೆ ತೆರೆಮೇಲೆ ತರುತ್ತಿದ್ದಾರೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

Devil Movie: ‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 23, 2024 | 10:31 AM

Share

ನಟ ದರ್ಶನ್ (Darshan) ಅವರು ಸದ್ಯ ವಿಶ್ರಾಂತಿಯಲ್ಲಿ ಇದ್ದಾರೆ. ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ಈ ಗಾಯ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಅಕ್ಟೋಬರ್​ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ. ಕೈಗೆ ಪೆಟ್ಟಾದ ಕಾರಣ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈಗ ಹೊಸ ರಿಲೀಸ್ ದಿನಾಂಕವನ್ನು ದರ್ಶನ್ ಘೋಷಿಸಿದ್ದಾರೆ. ಈ ವರ್ಷ ಕ್ರಿಸ್​ಮಸ್​ಗೆ ಚಿತ್ರ ರಿಲೀಸ್ ಆಗಲಿದೆ.

ದರ್ಶನ್​ಗೆ ಕಳೆದ ಡಿಸೆಂಬರ್ ಅದೃಷ್ಟ ತಂದುಕೊಟ್ಟಿತ್ತು. ಅವರ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್ ಆಗಿ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈಗ ಅವರ ಮುಂದಿನ ಚಿತ್ರವನ್ನು ಡಿಸೆಂಬರ್ ಅಂತ್ಯಕ್ಕೆ ತೆರೆಮೇಲೆ ತರುತ್ತಿದ್ದಾರೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಹಾಗೂ ಕನ್ನಡಾಭಿಮಾನಿಗಳಿಗೆ ವಿಶೇಷ ಪ್ರಕಟಣೆ –  ‘ಡೆವಿಲ್’ ಚಿತ್ರವು ಇದೇ ಕ್ರಿಸ್ಮಸ್ 2024 ಬೆಳ್ಳಿತೆರೆಯ ಮೇಲೆ ಬರಲಿದೆ. ನಿಮ್ಮ ಪ್ರೀತಿ-ಹಾರೈಕೆ ಸದಾ ಕನ್ನಡ ಚಿತ್ರಗಳ ಮೇಲಿರಲಿ’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

ದರ್ಶನ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ವರ್ಷಕ್ಕೆ ಎರಡು ಸಿನಿಮಾಗಳಲ್ಲಿ ನಟಿಸೋ ಟಾರ್ಗೆಟ್ ಇಟ್ಟುಕೊಂಡಿದ್ದರು. ಈಗ ಕೈಗೆ ಪೆಟ್ಟಾಗಿರುವುದರಿಂದ ಈ ವರ್ಷ ಅದು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ ಪತ್ನಿ ವಿಜಯಲಕ್ಷ್ಮಿ ಜೊತೆ ಅವರು ವಿದೇಶಕ್ಕೆ ತೆರಳಿದ್ದರು. ಅಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ದರ್ಶನ್ ಅವರು ಸಂಪೂರ್ಣ ಗುಣಮುಖರಾದ ಬಳಿಕ ಸಿನಿಮಾದ ಶೂಟ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: ಹೇಗಿದೆ ನೋಡಿ ದರ್ಶನ್ ನಟನೆಯ ‘ಡೆವಿಲ್’ ಮೇಕಿಂಗ್; ವಿಡಿಯೋ ರಿಲೀಸ್ ಮಾಡಿದ ಟೀಂ

‘ಡೆವಿಲ್’ ಚಿತ್ರವನ್ನು ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರಿಗೆ ನಿರ್ದೇಶನದಲ್ಲಿ ಸಾಕಷ್ಟು ಅನುಭವ ಇದೆ. ಈ ಮೊದಲು ದರ್ಶನ್ ನಟನೆಯ ‘ತಾರಕ್’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು. ಈ ಸಿನಿಮಾ 2017ರಲ್ಲಿ ಬಿಡುಗಡೆ ಆಗಿತ್ತು. ಇವರು ಎರಡನೇ ಬಾರಿಗೆ ಒಂದಾಗಿದ್ದು, ಕುತೂಹಲ ಹೆಚ್ಚಿಸಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಸಿನಿಮಾದ ಮೇಕಿಂಗ್ ವಿಡಿಯೋನ ತಂಡ ರಿಲೀಸ್ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ