AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುಬಿಡುಗಡೆ ಆಗಲಿದೆ ದರ್ಶನ್​ರ ಸೂಪರ್​ ಹಿಟ್ ಸಿನಿಮಾ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಈ ನಡುವೆ ದರ್ಶನ್​ರ ಕೆಲವು ಹಳೆ ಸಿನಿಮಾಗಳನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ಕೆಲ ವಾರದ ಹಿಂದೆ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಆಗಿತ್ತು. ಈಗ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ.

ಮರುಬಿಡುಗಡೆ ಆಗಲಿದೆ ದರ್ಶನ್​ರ ಸೂಪರ್​ ಹಿಟ್ ಸಿನಿಮಾ
ಮಂಜುನಾಥ ಸಿ.
|

Updated on: Aug 22, 2024 | 10:51 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಎರಡು ತಿಂಗಳಿಗೂ ಹೆಚ್ಚು ಸಮಯವಾಗಿದೆ. ದರ್ಶನ್ ಇನ್ನೂ ಕನಿಷ್ಠ ಎರಡು-ಮೂರು ತಿಂಗಳು ಹೊರಗೆ ಬರುವುದು ಅನುಮಾನ ಎನ್ನಲಾಗುತ್ತಿದೆ. ಈ ನಡುವೆ ಕೆಲ ದಿನಗಳ ಹಿಂದೆ ಕೆಲ ದರ್ಶನ್ ಅಭಿಮಾನಿಗಳು, ನಾವು ದರ್ಶನ್ ಹೊರಗೆ ಬರುವವರೆಗೆ ಇನ್ಯಾವ ನಟರ ಸಿನಿಮಾವನ್ನೂ ಸಹ ನೋಡುವುದಿಲ್ಲ ಎಂದಿದ್ದರು. ಇದೀಗ ದರ್ಶನ್ ಅವರೇ ನಟಿಸಿದ್ದ ಹಳೆಯ ಸೂಪರ್ ಹಿಟ್ ಸಿನಿಮಾ ಮರು ಬಿಡುಗಡೆ ಆಗಲಿದೆ.

ದರ್ಶನ್ ನಟನೆಯ ‘ಕರಿಯ’ ಸಿನಿಮಾ ಆಗಸ್ಟ್ 30ರಂದು ಮರು ಬಿಡುಗಡೆ ಆಗುತ್ತಿದೆ. 2003ರ ಜನವರಿ ತಿಂಗಳಲ್ಲಿ ಈ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದು. ದರ್ಶನ್​ಗೆ ಸಹ ನಾಯಕನಾಗಿ ಇದು ಐದನೇ ಸಿನಿಮಾ ಮತ್ತು ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ. ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ದರ್ಶನ್ ಅನ್ನು ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತು.

ಆಗಸ್ಟ್ 30 ರಂದು ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿದ್ದು, ಈ ಸಿನಿಮಾಕ್ಕೆ ಪ್ರತ್ಯೇಕ ಅಭಿಮಾನಿ ಬಳಗವೇ ಇದೆ. ಕನ್ನಡದಲ್ಲಿ ಈವರೆಗೆ ಬಿಡುಗಡೆ ಆಗಿರುವ ರೌಡಿಸಂ ಕತೆಯುಳ್ಳ ಸಿನಿಮಾಗಳ ಪೈಕಿ ಕೆಲವೇ ಅತ್ಯುತ್ತಮ ಸಿನಿಮಾಗಳಲ್ಲಿ ಇದೂ ಸಹ ಒಂದು. ಸಿನಿಮಾದ ಹಾಡುಗಳು, ಆಕ್ಷನ್, ಸಿನಿಮಾದ ನಿರೂಪಣೆ ಆಗಿನ ಸಮಯಕ್ಕೆ ವಿನೂತನ ಎನಿಸಿತ್ತು. ಅಲ್ಲದೆ ಕೆಲವು ನಿಜವಾದ ರೌಡಿಗಳನ್ನು, ನಿಜವಾದ ರೌಡಿ ಅಡ್ಡಗಳಲ್ಲಿಯೇ ಸಿನಿಮಾದ ಚಿತ್ರೀಕರಣ ಮಾಡಿಸಲಾಗಿತ್ತು.

ಇದನ್ನೂ ಓದಿ:ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?

ದರ್ಶನ್ ಜೈಲು ಸೇರಿದ ಬಿಡುಗಡೆ ಆಗುತ್ತಿರುವ ಎರಡನೇ ಸಿನಿಮಾ ಇದು. ಕೆಲ ವಾರದ ಹಿಂದೆ ದರ್ಶನ್ ನಟನೆಯ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಆಗಿತ್ತು. ಆ ಸಿನಿಮಾ ಉತ್ತಮ ಕಲೆಕ್ಷನ್ ಅನ್ನೇ ಮಾಡಿತ್ತು. ಇದೀಗ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿದ್ದು, ಈ ಸಿನಿಮಾ ಸಹ ಉತ್ತಮ ಕಲೆಕ್ಷನ್ ಅನ್ನೇ ಮಾಡುವ ನಿರೀಕ್ಷೆ ಇದೆ. ಅಂದಹಾಗೆ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿರುವ ದಿನದಂದೆ ರಿಷಬ್ ಶೆಟ್ಟಿ ನಿರ್ಮಿಸಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ‘ಕರಿಯ’ ಸಿನಿಮಾದ ಮರು ಬಿಡುಗಡೆ, ‘ಲಾಫಿಂಗ್ ಬುದ್ಧ’ ಸಿನಿಮಾದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ದರ್ಶನ್ ಜೈಲಿಗೆ ಹೋಗಿರುವುದನ್ನು ಪರೋಕ್ಷವಾಗಿ ಕೆಲವರು ಲಾಭ ಗಳಿಕೆಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಸಹ ಕೇಳಿ ಬರುತ್ತಿವೆ. ದರ್ಶನ್ ಜೈಲಿನಲ್ಲಿರುವ ಕಾರಣ ಅವರ ಸಿನಿಮಾಗಳನ್ನು ಮರು ಬಿಡುಗಡೆ ಮಾಡಿ, ಅಭಿಮಾನಿಗಳು ಸೆಂಟಿಮೆಂಟ್ ಅನ್ನು ಲಾಭವನ್ನಾಗಿ ಪರಿವರ್ತಿಸಿಕೊಳ್ಳುವ ಹುನ್ನಾರವೆಂದೂ ಸಹ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು