AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರುಬಿಡುಗಡೆ ಆಗಲಿದೆ ದರ್ಶನ್​ರ ಸೂಪರ್​ ಹಿಟ್ ಸಿನಿಮಾ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಈ ನಡುವೆ ದರ್ಶನ್​ರ ಕೆಲವು ಹಳೆ ಸಿನಿಮಾಗಳನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ಕೆಲ ವಾರದ ಹಿಂದೆ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಆಗಿತ್ತು. ಈಗ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ.

ಮರುಬಿಡುಗಡೆ ಆಗಲಿದೆ ದರ್ಶನ್​ರ ಸೂಪರ್​ ಹಿಟ್ ಸಿನಿಮಾ
ಮಂಜುನಾಥ ಸಿ.
|

Updated on: Aug 22, 2024 | 10:51 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಎರಡು ತಿಂಗಳಿಗೂ ಹೆಚ್ಚು ಸಮಯವಾಗಿದೆ. ದರ್ಶನ್ ಇನ್ನೂ ಕನಿಷ್ಠ ಎರಡು-ಮೂರು ತಿಂಗಳು ಹೊರಗೆ ಬರುವುದು ಅನುಮಾನ ಎನ್ನಲಾಗುತ್ತಿದೆ. ಈ ನಡುವೆ ಕೆಲ ದಿನಗಳ ಹಿಂದೆ ಕೆಲ ದರ್ಶನ್ ಅಭಿಮಾನಿಗಳು, ನಾವು ದರ್ಶನ್ ಹೊರಗೆ ಬರುವವರೆಗೆ ಇನ್ಯಾವ ನಟರ ಸಿನಿಮಾವನ್ನೂ ಸಹ ನೋಡುವುದಿಲ್ಲ ಎಂದಿದ್ದರು. ಇದೀಗ ದರ್ಶನ್ ಅವರೇ ನಟಿಸಿದ್ದ ಹಳೆಯ ಸೂಪರ್ ಹಿಟ್ ಸಿನಿಮಾ ಮರು ಬಿಡುಗಡೆ ಆಗಲಿದೆ.

ದರ್ಶನ್ ನಟನೆಯ ‘ಕರಿಯ’ ಸಿನಿಮಾ ಆಗಸ್ಟ್ 30ರಂದು ಮರು ಬಿಡುಗಡೆ ಆಗುತ್ತಿದೆ. 2003ರ ಜನವರಿ ತಿಂಗಳಲ್ಲಿ ಈ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದು. ದರ್ಶನ್​ಗೆ ಸಹ ನಾಯಕನಾಗಿ ಇದು ಐದನೇ ಸಿನಿಮಾ ಮತ್ತು ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ. ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ದರ್ಶನ್ ಅನ್ನು ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತು.

ಆಗಸ್ಟ್ 30 ರಂದು ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿದ್ದು, ಈ ಸಿನಿಮಾಕ್ಕೆ ಪ್ರತ್ಯೇಕ ಅಭಿಮಾನಿ ಬಳಗವೇ ಇದೆ. ಕನ್ನಡದಲ್ಲಿ ಈವರೆಗೆ ಬಿಡುಗಡೆ ಆಗಿರುವ ರೌಡಿಸಂ ಕತೆಯುಳ್ಳ ಸಿನಿಮಾಗಳ ಪೈಕಿ ಕೆಲವೇ ಅತ್ಯುತ್ತಮ ಸಿನಿಮಾಗಳಲ್ಲಿ ಇದೂ ಸಹ ಒಂದು. ಸಿನಿಮಾದ ಹಾಡುಗಳು, ಆಕ್ಷನ್, ಸಿನಿಮಾದ ನಿರೂಪಣೆ ಆಗಿನ ಸಮಯಕ್ಕೆ ವಿನೂತನ ಎನಿಸಿತ್ತು. ಅಲ್ಲದೆ ಕೆಲವು ನಿಜವಾದ ರೌಡಿಗಳನ್ನು, ನಿಜವಾದ ರೌಡಿ ಅಡ್ಡಗಳಲ್ಲಿಯೇ ಸಿನಿಮಾದ ಚಿತ್ರೀಕರಣ ಮಾಡಿಸಲಾಗಿತ್ತು.

ಇದನ್ನೂ ಓದಿ:ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?

ದರ್ಶನ್ ಜೈಲು ಸೇರಿದ ಬಿಡುಗಡೆ ಆಗುತ್ತಿರುವ ಎರಡನೇ ಸಿನಿಮಾ ಇದು. ಕೆಲ ವಾರದ ಹಿಂದೆ ದರ್ಶನ್ ನಟನೆಯ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಆಗಿತ್ತು. ಆ ಸಿನಿಮಾ ಉತ್ತಮ ಕಲೆಕ್ಷನ್ ಅನ್ನೇ ಮಾಡಿತ್ತು. ಇದೀಗ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿದ್ದು, ಈ ಸಿನಿಮಾ ಸಹ ಉತ್ತಮ ಕಲೆಕ್ಷನ್ ಅನ್ನೇ ಮಾಡುವ ನಿರೀಕ್ಷೆ ಇದೆ. ಅಂದಹಾಗೆ ‘ಕರಿಯ’ ಸಿನಿಮಾ ಮರು ಬಿಡುಗಡೆ ಆಗುತ್ತಿರುವ ದಿನದಂದೆ ರಿಷಬ್ ಶೆಟ್ಟಿ ನಿರ್ಮಿಸಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ‘ಕರಿಯ’ ಸಿನಿಮಾದ ಮರು ಬಿಡುಗಡೆ, ‘ಲಾಫಿಂಗ್ ಬುದ್ಧ’ ಸಿನಿಮಾದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ದರ್ಶನ್ ಜೈಲಿಗೆ ಹೋಗಿರುವುದನ್ನು ಪರೋಕ್ಷವಾಗಿ ಕೆಲವರು ಲಾಭ ಗಳಿಕೆಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಸಹ ಕೇಳಿ ಬರುತ್ತಿವೆ. ದರ್ಶನ್ ಜೈಲಿನಲ್ಲಿರುವ ಕಾರಣ ಅವರ ಸಿನಿಮಾಗಳನ್ನು ಮರು ಬಿಡುಗಡೆ ಮಾಡಿ, ಅಭಿಮಾನಿಗಳು ಸೆಂಟಿಮೆಂಟ್ ಅನ್ನು ಲಾಭವನ್ನಾಗಿ ಪರಿವರ್ತಿಸಿಕೊಳ್ಳುವ ಹುನ್ನಾರವೆಂದೂ ಸಹ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್