AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ರ ಮತ್ತೊಂದು ಸಿನಿಮಾ ಮರು ಬಿಡುಗಡೆಗೆ ಸಜ್ಜು

ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್ ಅನ್ನು ಹೊರತರಲು ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಅಭಿಮಾನಿಗಳು ಬೇಸರದಲ್ಲಿದ್ದಾರೆ. ಅಭಿಮಾನಿಗಳ ಈ ಸೆಂಟಿಮೆಂಟ್ ಅನ್ನು ಲಾಭವನ್ನಾಗಿ ಮಾಡಿಕೊಳ್ಳಲು ಕೆಲವರು ದರ್ಶನ್​ರ ಹಳೆಯ ಸಿನಿಮಾಗಳನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ದರ್ಶನ್​ರ ಮತ್ತೊಂದು ಸಿನಿಮಾ ಮರು ಬಿಡುಗಡೆಗೆ ಸಜ್ಜು
ಮಂಜುನಾಥ ಸಿ.
|

Updated on: Oct 16, 2024 | 11:47 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಜೈಲು ಸೇರಿ ನಾಲ್ಕು ತಿಂಗಳಾಗಿವೆ. ಅವರ ಕುಟುಂಬದವರು ದರ್ಶನ್ ಅನ್ನು ಕನಿಷ್ಟ ಜಾಮೀನಿನ ಮೇಲಾದರೂ ಹೊರಗೆ ತರುವ ಪ್ರಯತ್ನದಲ್ಲಿದ್ದಾರೆ. ದರ್ಶನ್, ಜೈಲು ಸೇರಿರುವುದರಿಂದ ಅಭಿಮಾನಿಗಳು ಸಹ ಬೇಸರದಲ್ಲಿದ್ದಾರೆ. ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡಿರುವ ಕೆಲ ನಿರ್ಮಾಪಕರು, ಅಭಿಮಾನಿಗಳ ಸೆಂಟಿಮೆಂಟ್ ಅನ್ನೇ ಬಂಡವಾಳವಾಗಿಟ್ಟುಕೊಂಡು ದರ್ಶನ್ ನಟನೆಯ ಕೆಲ ಹಳೆಯ ಸಿನಿಮಾಗಳನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ದರ್ಶನ್ ಬಂಧನವಾದ ಬಳಿಕ ದರ್ಶನ್​ರ ಕೆಲ ಸಿನಿಮಾಗಳು ಮರು ಬಿಡುಗಡೆ ಆಗಿದೆ. ‘ಶಾಸ್ತ್ರಿ’, ‘ಕರಿಯ’ ಇನ್ನೂ ಕೆಲ ಸಿನಿಮಾಗಳು ಮರು ಬಿಡುಗಡೆ ಆಗಿವೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ದರ್ಶನ್ ಅವರು ‘ನವಗ್ರಹ’ ಸಿನಿಮಾ ಶೀಘ್ರವೇ ಮರು ಬಿಡುಗಡೆ ಆಗುವುದಾಗಿ ಇನ್​ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿದ್ದರು. ಇದೀಗ ಹೊಸ ಸುದ್ದಿಯೆಂದರೆ ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಸಹ ಮರು ಬಿಡುಗಡೆ ಆಗಲಿದೆ.

ಇದನ್ನೂ ಓದಿ:ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು

ಆಕ್ಷನ್ ಸ್ಟಾರ್ ಆಗಿದ್ದ ದರ್ಶನ್, ಮೊದಲ ಬಾರಿಗೆ ಆಕ್ಷನ್ ಬಿಟ್ಟು, ನಟನೆಗೆ ಒತ್ತು ಇರುವ ಪಾತ್ರದಲ್ಲಿ ನಟಿಸಿದ ಸಿನಿಮಾ ‘ನಮ್ಮ ಪ್ರೀತಿಯ ರಾಮು’. ಇಳಯರಾಜ ಸಂಗೀತ ನೀಡಿದ್ದ ಈ ಸಿನಿಮಾವನ್ನು ಸಂಜಯ್-ವಿಜಯ್ ಅವರುಗಳು ನಿರ್ದೇಶನ ಮಾಡಿದ್ದರು. ನಂದಕುಮಾರ್ ಮತ್ತು ರಾಮೇಗೌಡ ನಿರ್ಮಾಣ ಮಾಡಿದ್ದರು. ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಹಾಡುಗಳು ಸಹ ಜನಪ್ರಿಯವಾಗಿದ್ದವು. ಈಗ ಈ ಸಿನಿಮಾ ಮರು ಬಿಡುಗಡೆ ಆಗುತ್ತಿವೆ ಅದೂ ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ.

ದರ್ಶನ್ ಬಂಧನವಾಗುವ ಮುಂಚೆ ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದರು. ನಿರ್ದೇಶಕ ಮಿಲನ ಪ್ರಕಾಶ್​ಗೆ ಇದು ಕಮ್​ಬ್ಯಾಕ್ ಸಿನಿಮಾ ಆಗುವುದರಲ್ಲಿತ್ತು. ಆದರೆ ಸಿನಿಮಾದ ಚಿತ್ರೀಕರಣ ಜಾರಿಯಲ್ಲಿರುವಾಗಲೇ ದರ್ಶನ್ ಬಂಧನವಾಗಿ ಸಿನಿಮಾ ನಿಂತು ಹೋಯ್ತು. ನಾಲ್ಕು ತಿಂಗಳಿನಿಂದಲೂ ಚಿತ್ರೀಕರಣ ನಡೆದಿಲ್ಲ. ಬಂಧನಕ್ಕೆ ಮುನ್ನ ಕೆಲ ಭಾಗದ ಚಿತ್ರೀಕರಣ ಮಾತ್ರವೇ ನಡೆದಿತ್ತು. ದರ್ಶನ್ ಹೊರ ಬರುವವರೆಗೆ ಸಿನಿಮಾದ ಚಿತ್ರೀಕರಣ ನಡೆಯುವುದಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​