AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ರ ಮತ್ತೊಂದು ಸಿನಿಮಾ ಮರು ಬಿಡುಗಡೆಗೆ ಸಜ್ಜು

ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್ ಅನ್ನು ಹೊರತರಲು ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಅಭಿಮಾನಿಗಳು ಬೇಸರದಲ್ಲಿದ್ದಾರೆ. ಅಭಿಮಾನಿಗಳ ಈ ಸೆಂಟಿಮೆಂಟ್ ಅನ್ನು ಲಾಭವನ್ನಾಗಿ ಮಾಡಿಕೊಳ್ಳಲು ಕೆಲವರು ದರ್ಶನ್​ರ ಹಳೆಯ ಸಿನಿಮಾಗಳನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ದರ್ಶನ್​ರ ಮತ್ತೊಂದು ಸಿನಿಮಾ ಮರು ಬಿಡುಗಡೆಗೆ ಸಜ್ಜು
ಮಂಜುನಾಥ ಸಿ.
|

Updated on: Oct 16, 2024 | 11:47 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಜೈಲು ಸೇರಿ ನಾಲ್ಕು ತಿಂಗಳಾಗಿವೆ. ಅವರ ಕುಟುಂಬದವರು ದರ್ಶನ್ ಅನ್ನು ಕನಿಷ್ಟ ಜಾಮೀನಿನ ಮೇಲಾದರೂ ಹೊರಗೆ ತರುವ ಪ್ರಯತ್ನದಲ್ಲಿದ್ದಾರೆ. ದರ್ಶನ್, ಜೈಲು ಸೇರಿರುವುದರಿಂದ ಅಭಿಮಾನಿಗಳು ಸಹ ಬೇಸರದಲ್ಲಿದ್ದಾರೆ. ಇದೇ ಸಮಯವನ್ನು ಸದುಪಯೋಗಪಡಿಸಿಕೊಂಡಿರುವ ಕೆಲ ನಿರ್ಮಾಪಕರು, ಅಭಿಮಾನಿಗಳ ಸೆಂಟಿಮೆಂಟ್ ಅನ್ನೇ ಬಂಡವಾಳವಾಗಿಟ್ಟುಕೊಂಡು ದರ್ಶನ್ ನಟನೆಯ ಕೆಲ ಹಳೆಯ ಸಿನಿಮಾಗಳನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ದರ್ಶನ್ ಬಂಧನವಾದ ಬಳಿಕ ದರ್ಶನ್​ರ ಕೆಲ ಸಿನಿಮಾಗಳು ಮರು ಬಿಡುಗಡೆ ಆಗಿದೆ. ‘ಶಾಸ್ತ್ರಿ’, ‘ಕರಿಯ’ ಇನ್ನೂ ಕೆಲ ಸಿನಿಮಾಗಳು ಮರು ಬಿಡುಗಡೆ ಆಗಿವೆ. ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ದರ್ಶನ್ ಅವರು ‘ನವಗ್ರಹ’ ಸಿನಿಮಾ ಶೀಘ್ರವೇ ಮರು ಬಿಡುಗಡೆ ಆಗುವುದಾಗಿ ಇನ್​ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿದ್ದರು. ಇದೀಗ ಹೊಸ ಸುದ್ದಿಯೆಂದರೆ ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಸಹ ಮರು ಬಿಡುಗಡೆ ಆಗಲಿದೆ.

ಇದನ್ನೂ ಓದಿ:ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು

ಆಕ್ಷನ್ ಸ್ಟಾರ್ ಆಗಿದ್ದ ದರ್ಶನ್, ಮೊದಲ ಬಾರಿಗೆ ಆಕ್ಷನ್ ಬಿಟ್ಟು, ನಟನೆಗೆ ಒತ್ತು ಇರುವ ಪಾತ್ರದಲ್ಲಿ ನಟಿಸಿದ ಸಿನಿಮಾ ‘ನಮ್ಮ ಪ್ರೀತಿಯ ರಾಮು’. ಇಳಯರಾಜ ಸಂಗೀತ ನೀಡಿದ್ದ ಈ ಸಿನಿಮಾವನ್ನು ಸಂಜಯ್-ವಿಜಯ್ ಅವರುಗಳು ನಿರ್ದೇಶನ ಮಾಡಿದ್ದರು. ನಂದಕುಮಾರ್ ಮತ್ತು ರಾಮೇಗೌಡ ನಿರ್ಮಾಣ ಮಾಡಿದ್ದರು. ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಹಾಡುಗಳು ಸಹ ಜನಪ್ರಿಯವಾಗಿದ್ದವು. ಈಗ ಈ ಸಿನಿಮಾ ಮರು ಬಿಡುಗಡೆ ಆಗುತ್ತಿವೆ ಅದೂ ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ.

ದರ್ಶನ್ ಬಂಧನವಾಗುವ ಮುಂಚೆ ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದರು. ನಿರ್ದೇಶಕ ಮಿಲನ ಪ್ರಕಾಶ್​ಗೆ ಇದು ಕಮ್​ಬ್ಯಾಕ್ ಸಿನಿಮಾ ಆಗುವುದರಲ್ಲಿತ್ತು. ಆದರೆ ಸಿನಿಮಾದ ಚಿತ್ರೀಕರಣ ಜಾರಿಯಲ್ಲಿರುವಾಗಲೇ ದರ್ಶನ್ ಬಂಧನವಾಗಿ ಸಿನಿಮಾ ನಿಂತು ಹೋಯ್ತು. ನಾಲ್ಕು ತಿಂಗಳಿನಿಂದಲೂ ಚಿತ್ರೀಕರಣ ನಡೆದಿಲ್ಲ. ಬಂಧನಕ್ಕೆ ಮುನ್ನ ಕೆಲ ಭಾಗದ ಚಿತ್ರೀಕರಣ ಮಾತ್ರವೇ ನಡೆದಿತ್ತು. ದರ್ಶನ್ ಹೊರ ಬರುವವರೆಗೆ ಸಿನಿಮಾದ ಚಿತ್ರೀಕರಣ ನಡೆಯುವುದಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ