AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ‘ದಿ ಡೆವಿಲ್’ ಶೂಟಿಂಗ್; ದರ್ಶನ್ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ ತಂಡ

‘ದಿ ಡೆವಿಲ್’ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಬಿರುಸಿನಿಂದ ಶೂಟಿಂಗ್ ಮಾಡಲಾಗುತ್ತಿದೆ. ಕಾರಣಾಂತರಗಳಿಂದ ವಿಳಂಬ ಆಗಿದ್ದ ಚಿತ್ರೀಕರಣಕ್ಕೆ ಮರುಚಾಲನೆ ನೀಡಿದ್ದು, ರಾಜಸ್ಥಾನದಲ್ಲಿ ಶೂಟಿಂಗ್ ನಡೆಯುತ್ತಿದೆ. ‘ಚಾಲೆಂಜಿಂಗ್ ಸ್ಟಾರ್’ ದರ್ಶನ್, ರಚನಾ ರೈ ಹಾಗೂ ಇನ್ನುಳಿದ ಕಲಾವಿದರು ‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ರಾಜಸ್ಥಾನದಲ್ಲಿ ‘ದಿ ಡೆವಿಲ್’ ಶೂಟಿಂಗ್; ದರ್ಶನ್ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ ತಂಡ
Darshan Thoogudeepa
ಮದನ್​ ಕುಮಾರ್​
|

Updated on: Mar 25, 2025 | 8:27 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ (The Devil Movie) ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಹಲವು ವಿಘ್ನಗಳು ಎದುರಾಗಿದ್ದರಿಂದ ಶೂಟಿಂಗ್ ವಿಳಂಬ ಆಯಿತು. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದರಿಂದ ಅನೇಕ ತಿಂಗಳ ಕಾಲ ಶೂಟಿಂಗ್ (The Devil Movie Shooting) ಸ್ಥಗಿತಕೊಂಡಿತ್ತು. ಆದರೆ ಇತ್ತೀಚೆಗೆ ಅವರು ಮೈಸೂರಿನಲ್ಲಿ ಮತ್ತೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಈಗ ಮತ್ತೊಂದು ಹಂತದ ಶೂಟಿಂಗ್ ಬಗ್ಗೆ ‘ದಿ ಡೆವಿಲ್’ ಸಿನಿಮಾ ತಂಡ ಮಾಹಿತಿ ಹಂಚಿಕೊಂಡಿದೆ.

‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಬಿರುಸಿನಿಂದ ಸಾಗುತ್ತಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಶ್ರೀ ಜೈ ಮಾತಾ ಕಂಬೈನ್ಸ್’ ಮೂಲಕ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಪ್ರಕಾಶ್ ವೀರ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ, ಮಾತಿನ ಭಾಗದ ಶೂಟಿಂಗ್ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್ ಸೇರಿದಂತೆ ಅನೇಕ ಕಲಾವಿದರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ.

ಈ ಸಿನಿಮಾದಲ್ಲಿ ದರ್ಶನ್ ಅವರಿಗೆ ಜೋಡಿಯಾಗಿ ರಚನಾ ರೈ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ತುಳಸಿ, ಮಹೇಶ್ ಮಂಜ್ರೇಕರ್, ಶ್ರೀನಿವಾಸ್ ಪ್ರಭು , ಶೋಭರಾಜ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಸುಧಾಕರ್ ಎಸ್. ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಬಿ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ದರ್ಶನ್ ಪೂಜೆ ಮಾಡಿಸಿದ ಕೇರಳದ ಭಗವತಿ ದೇವಾಲಯದ ಮಹತ್ವವೇನು?

ದರ್ಶನ್ ಅವರಿಗೆ ಬೆನ್ನು ನೋವು ಇದೆ. ಹಾಗಾಗಿ ಮೊದಲಿನಂತೆ ಆ್ಯಕ್ಷನ್ ಸನ್ನಿವೇಶಗಳ ಶೂಟಿಂಗ್ ಮಾಡುವುದು ಕಷ್ಟ. ಆ ಕಾರಣದಿಂದ ಸದ್ಯಕ್ಕೆ ಮಾತಿನ ಭಾಗದ ಚಿತ್ರೀಕರಣವನ್ನು ಮುಗಿಸಿಕೊಳ್ಳಲಾಗುತ್ತಿದೆ. ದರ್ಶನ್ ಅವರು ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರ ನಡುವೆಯೂ ಅವರು ಚಿತ್ರೀಕರಣಕ್ಕೆ ಸಮಯ ನೀಡುತ್ತಿದ್ದಾರೆ. ‘ದಿ ಡೆವಿಲ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು