AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್ ಮಾಡಲು ಸೂರ್ಯನ ಬೆಳಕು ಇಲ್ಲ: ಜಡ್ಜ್ ಎದುರು ದರ್ಶನ್ ಅಳಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಇನ್ನೂ ಕ್ವಾರೆಂಟೈನ್ ಸೆಲ್​​ನಲ್ಲಿಯೇ ಇದ್ದಾರೆ. ಸಾಮಾನ್ಯ ಸೆಲ್​​ಗೆ ಶಿಫ್ಟ್ ಮಾಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ವಾಕಿಂಗ್ ಮಾಡುವ ಜಾಗದಲ್ಲಿ ಸೂರ್ಯನ ಬೆಳಕು ಇಲ್ಲ ಎಂದು ವಿಚಾರಣೆ ವೇಳೆ ದರ್ಶನ್ ಹೇಳಿದ್ದಾರೆ.

ವಾಕಿಂಗ್ ಮಾಡಲು ಸೂರ್ಯನ ಬೆಳಕು ಇಲ್ಲ: ಜಡ್ಜ್ ಎದುರು ದರ್ಶನ್ ಅಳಲು
Darshan Thoogudeepa
Shivaprasad B
| Edited By: |

Updated on: Sep 25, 2025 | 4:54 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ (Darshan Thoogudeepa), ಪವಿತ್ರಾ ಗೌಡ ಮುಂತಾದ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇಂದು (ಸೆಪ್ಟೆಂಬರ್ 25) ಸಿಸಿಹೆಚ್-57ನೇ ಕೋರ್ಟ್​ಗೆ ಆರೋಪಿಗಳು ಹಾಜರಾಗಿದ್ದಾರೆ. ದರ್ಶನ್ ಹಾಗೂ ಪವಿತ್ರಾ ಗೌಡ (Pavithra Gowda) ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾದರು. ಈ ವೇಳೆ ಜಡ್ಜ್ ಎದುರು ದರ್ಶನ್ ಅಳಲು ತೋಡಿಕೊಂಡಿದ್ದಾರೆ. ಕೋರ್ಟ್ ಆದೇಶವನ್ನು ಜೈಲಿನ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ದರ್ಶನ್ (Darshan) ಪರ ವಕೀಲರು ವಾದ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ದರ್ಶನ್ ಅವರು ಬಿಳಿ ಬಣ್ಣದ ಜಾಕೆಟ್ ಧರಿಸಿದ್ದರು. ಉಳಿದ ಆರೋಪಿಗಳಾದ ಪುಟ್ಟಸ್ವಾಮಿ, ರಾಘವೇಂದ್ರ, ಧನರಾಜ್, ವಿನಯ್ ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಕೋರ್ಟ್​​ಗೆ ಖುದ್ದು ಹಾಜರಾಗಿದ್ದಾರೆ. ಆರೋಪಿ ನಂದೀಶ್ ನಂದೀಶ್ ಗೈರಾಗಿದ್ದಾನೆ. ಪ್ರಕರಣದಿಂದ ಕೈಬಿಡುವಂತೆ ಕೆಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಪರ ವಕೀಲ ಸುನೀಲ್ ವಾದ ಮಾಡಿದ್ದಾರೆ. ‘ದರ್ಶನ್ ಅವರನ್ನು ಇನ್ನೂ ಕ್ವಾರಂಟೈನ್​​ನಲ್ಲಿ ಇಟ್ಟಿದ್ದಾರೆ. ಜೈಲಿನ ಅಧಿಕಾರಿಗಳು ಕೋರ್ಟ್ ಆದೇಶ ಪಾಲಿಸುತ್ತಿಲ್ಲ. ಜೈಲಿನಲ್ಲಿರುವ ಆರೋಪಿಗಳಿಗೆ ಕೆಲ ಸಮಸ್ಯೆಗಳಿವೆ’ ಎಂದಿರುವ ವಕೀಲರು, ಆರೋಪಿಗಳ ಸಮಸ್ಯೆ ಬಗ್ಗೆಆಲಿಸುವಂತೆ ಕೋರ್ಟ್​​ಗೆ ಮನವಿ ಮಾಡಿದ್ದಾರೆ. ಕ್ವಾರಂಟೈನ್ ಸೆಲ್​​ನಿಂದ ಸಾಮಾನ್ಯ ಸೆಲ್​​ಗೆ ಆರೋಪಿಗಳನ್ನು ಶಿಫ್ಟ್ ಮಾಡುವಂತೆ ಇತರೆ ಆರೋಪಿಗಳ ಪರ ವಕೀಲರು ಮನವಿ ಸಲ್ಲಿಸಿದ್ದಾರೆ.

ವಿಚಾರಣೆ ವೇಳೆ ದರ್ಶನ್​​ಗೆ ಜಡ್ಜ್ ಪ್ರಶ್ನೆ ಕೇಳಿದ್ದಾರೆ. ‘ಕೋರ್ಟ್ ಆದೇಶ ಪಾಲಿಸುತ್ತಿದ್ದಾರೆಯೇ?’ ಎಂದು ಕೇಳಿದ ಪ್ರಶ್ನೆಗೆ, ‘ಇಲ್ಲ ಸರ್, ಯಾವ ಆದೇಶಗಳನ್ನೂ ಪಾಲಿಸುತ್ತಿಲ್ಲ. 25/3 ಫೀಟ್ ಮಾತ್ರ ಓಡಾಡಲು ಅವಕಾಶ ಕೊಟ್ಟಿದ್ದಾರೆ. ಅಲ್ಲಿ ವಾಕಿಂಗ್ ಮಾಡಲು ಸೂರ್ಯನ ಬೆಳಕು ಬರುವುದಿಲ್ಲ’ ಎಂದು ದರ್ಶನ್ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಪತ್ನಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್​​ಗೂ ಉತ್ತರ ನೀಡದ ವಿಜಯಲಕ್ಷ್ಮಿ

ಜೈಲು ಅಧಿಕಾರಿಗಳ ವಿರುದ್ದ ದರ್ಶನ್ ಪರ ವಕೀಲರು ಆರೋಪ ಮಾಡಿದ್ದಾರೆ. ‘20 ಬಾರಿ ಕೋರ್ಟ್ ಆರ್ಡರ್ ಕೇಳುತ್ತಾರೆ. ಗುಂಡಾ ರಾಜ್ಯವೇ ಇದು? ಕೋರ್ಟ್ ಆರ್ಡರ್​ಗೂ ಮಾನ್ಯತೆ ನೀಡುತ್ತಿಲ್ಲ’ ಎಂದು ದರ್ಶನ್ ಪರ ವಕೀಲ ಸುನೀಲ್ ವಾದಿಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಹಾಜರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಅಕ್ಟೋಬರ್ 9ಕ್ಕೆ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!