AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್ ಮಾಡಲು ಸೂರ್ಯನ ಬೆಳಕು ಇಲ್ಲ: ಜಡ್ಜ್ ಎದುರು ದರ್ಶನ್ ಅಳಲು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಇನ್ನೂ ಕ್ವಾರೆಂಟೈನ್ ಸೆಲ್​​ನಲ್ಲಿಯೇ ಇದ್ದಾರೆ. ಸಾಮಾನ್ಯ ಸೆಲ್​​ಗೆ ಶಿಫ್ಟ್ ಮಾಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ವಾಕಿಂಗ್ ಮಾಡುವ ಜಾಗದಲ್ಲಿ ಸೂರ್ಯನ ಬೆಳಕು ಇಲ್ಲ ಎಂದು ವಿಚಾರಣೆ ವೇಳೆ ದರ್ಶನ್ ಹೇಳಿದ್ದಾರೆ.

ವಾಕಿಂಗ್ ಮಾಡಲು ಸೂರ್ಯನ ಬೆಳಕು ಇಲ್ಲ: ಜಡ್ಜ್ ಎದುರು ದರ್ಶನ್ ಅಳಲು
Darshan Thoogudeepa
ಶಿವಪ್ರಸಾದ್​ ಬಿ.
| Edited By: |

Updated on: Sep 25, 2025 | 4:54 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ (Darshan Thoogudeepa), ಪವಿತ್ರಾ ಗೌಡ ಮುಂತಾದ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇಂದು (ಸೆಪ್ಟೆಂಬರ್ 25) ಸಿಸಿಹೆಚ್-57ನೇ ಕೋರ್ಟ್​ಗೆ ಆರೋಪಿಗಳು ಹಾಜರಾಗಿದ್ದಾರೆ. ದರ್ಶನ್ ಹಾಗೂ ಪವಿತ್ರಾ ಗೌಡ (Pavithra Gowda) ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಚಾರಣೆಗೆ ಹಾಜರಾದರು. ಈ ವೇಳೆ ಜಡ್ಜ್ ಎದುರು ದರ್ಶನ್ ಅಳಲು ತೋಡಿಕೊಂಡಿದ್ದಾರೆ. ಕೋರ್ಟ್ ಆದೇಶವನ್ನು ಜೈಲಿನ ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ದರ್ಶನ್ (Darshan) ಪರ ವಕೀಲರು ವಾದ ಮಾಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ದರ್ಶನ್ ಅವರು ಬಿಳಿ ಬಣ್ಣದ ಜಾಕೆಟ್ ಧರಿಸಿದ್ದರು. ಉಳಿದ ಆರೋಪಿಗಳಾದ ಪುಟ್ಟಸ್ವಾಮಿ, ರಾಘವೇಂದ್ರ, ಧನರಾಜ್, ವಿನಯ್ ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಕೋರ್ಟ್​​ಗೆ ಖುದ್ದು ಹಾಜರಾಗಿದ್ದಾರೆ. ಆರೋಪಿ ನಂದೀಶ್ ನಂದೀಶ್ ಗೈರಾಗಿದ್ದಾನೆ. ಪ್ರಕರಣದಿಂದ ಕೈಬಿಡುವಂತೆ ಕೆಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಪರ ವಕೀಲ ಸುನೀಲ್ ವಾದ ಮಾಡಿದ್ದಾರೆ. ‘ದರ್ಶನ್ ಅವರನ್ನು ಇನ್ನೂ ಕ್ವಾರಂಟೈನ್​​ನಲ್ಲಿ ಇಟ್ಟಿದ್ದಾರೆ. ಜೈಲಿನ ಅಧಿಕಾರಿಗಳು ಕೋರ್ಟ್ ಆದೇಶ ಪಾಲಿಸುತ್ತಿಲ್ಲ. ಜೈಲಿನಲ್ಲಿರುವ ಆರೋಪಿಗಳಿಗೆ ಕೆಲ ಸಮಸ್ಯೆಗಳಿವೆ’ ಎಂದಿರುವ ವಕೀಲರು, ಆರೋಪಿಗಳ ಸಮಸ್ಯೆ ಬಗ್ಗೆಆಲಿಸುವಂತೆ ಕೋರ್ಟ್​​ಗೆ ಮನವಿ ಮಾಡಿದ್ದಾರೆ. ಕ್ವಾರಂಟೈನ್ ಸೆಲ್​​ನಿಂದ ಸಾಮಾನ್ಯ ಸೆಲ್​​ಗೆ ಆರೋಪಿಗಳನ್ನು ಶಿಫ್ಟ್ ಮಾಡುವಂತೆ ಇತರೆ ಆರೋಪಿಗಳ ಪರ ವಕೀಲರು ಮನವಿ ಸಲ್ಲಿಸಿದ್ದಾರೆ.

ವಿಚಾರಣೆ ವೇಳೆ ದರ್ಶನ್​​ಗೆ ಜಡ್ಜ್ ಪ್ರಶ್ನೆ ಕೇಳಿದ್ದಾರೆ. ‘ಕೋರ್ಟ್ ಆದೇಶ ಪಾಲಿಸುತ್ತಿದ್ದಾರೆಯೇ?’ ಎಂದು ಕೇಳಿದ ಪ್ರಶ್ನೆಗೆ, ‘ಇಲ್ಲ ಸರ್, ಯಾವ ಆದೇಶಗಳನ್ನೂ ಪಾಲಿಸುತ್ತಿಲ್ಲ. 25/3 ಫೀಟ್ ಮಾತ್ರ ಓಡಾಡಲು ಅವಕಾಶ ಕೊಟ್ಟಿದ್ದಾರೆ. ಅಲ್ಲಿ ವಾಕಿಂಗ್ ಮಾಡಲು ಸೂರ್ಯನ ಬೆಳಕು ಬರುವುದಿಲ್ಲ’ ಎಂದು ದರ್ಶನ್ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಪತ್ನಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್​​ಗೂ ಉತ್ತರ ನೀಡದ ವಿಜಯಲಕ್ಷ್ಮಿ

ಜೈಲು ಅಧಿಕಾರಿಗಳ ವಿರುದ್ದ ದರ್ಶನ್ ಪರ ವಕೀಲರು ಆರೋಪ ಮಾಡಿದ್ದಾರೆ. ‘20 ಬಾರಿ ಕೋರ್ಟ್ ಆರ್ಡರ್ ಕೇಳುತ್ತಾರೆ. ಗುಂಡಾ ರಾಜ್ಯವೇ ಇದು? ಕೋರ್ಟ್ ಆರ್ಡರ್​ಗೂ ಮಾನ್ಯತೆ ನೀಡುತ್ತಿಲ್ಲ’ ಎಂದು ದರ್ಶನ್ ಪರ ವಕೀಲ ಸುನೀಲ್ ವಾದಿಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಹಾಜರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಅಕ್ಟೋಬರ್ 9ಕ್ಕೆ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ