AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಕ್ಕೂ ದರ್ಶನ್​ಗೆ ಆಪರೇಷನ್‌ ಅವಶ್ಯಕತೆ ಇದೆಯೇ? 12 ದಿನ ಕಳೆದರೂ ನಡೆದಿಲ್ಲ ಶಸ್ತ್ರಚಿಕಿತ್ಸೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಟ ದರ್ಶನ್ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಇನ್ನೂ ಆಗಿಲ್ಲ. ಹೈಕೋರ್ಟ್ ನೀಡಿದ ಆರು ವಾರಗಳ ಗಡುವಿಗೆ ಇನ್ನು ನಾಲ್ಕು ವಾರಗಳು ಬಾಕಿ ಇವೆ.

ನಿಜಕ್ಕೂ ದರ್ಶನ್​ಗೆ ಆಪರೇಷನ್‌ ಅವಶ್ಯಕತೆ ಇದೆಯೇ? 12 ದಿನ ಕಳೆದರೂ ನಡೆದಿಲ್ಲ ಶಸ್ತ್ರಚಿಕಿತ್ಸೆ
ದರ್ಶನ್
Kiran HV
| Edited By: |

Updated on: Nov 11, 2024 | 10:32 AM

Share

ನಟ ದರ್ಶನ್ ಅವರು ಜಾಮೀನು ಪಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಅದಾದ ಬಳಿಕ ದರ್ಶನ್ ಅವರು ಆಸ್ಪತ್ರೆ ಸೇರಿದ್ದಾರೆ. ದರ್ಶನ್​ಗೆ ಆಪರಷೇನ್ ಅಗತ್ಯ ಇದೆ ಎಂದು ವಕೀಲರು ಬಲವಾಗಿ ವಾದಿಸಿದ್ದರು. ಆದರೆ, ಈವರೆಗೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ. ಇದು ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ದರ್ಶನ್ ಅವರನ್ನು ಬಳ್ಳಾರಿಯ ಜೈಲಿನಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ತೀವ್ರ ಬೆನ್ನು ನೋವು ಕಾಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು. ಈ ವರದಿಯನ್ನೇ ಆಧರಿಸಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ದರ್ಶನ್​ಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಬೇಕು ಎಂದಿದ್ದರು. ಅಂತೆಯೇ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಇದುವರೆಗೂ ದರ್ಶನ್‌ಅಪರೇಷನ್ ಮಾಡಿಸಿಕೊಂಡಿಲ್ಲ.

ಸದ್ಯ ಆಸ್ಪತ್ರೆಯಲ್ಲಿ ದರ್ಶನ್‌ಗೆ ಚಿಕಿತ್ಸೆ ಮುಂದುವರಿದಿದೆ. ದರ್ಶನ್‌ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಆಸ್ಪತ್ರೆಯಲ್ಲಿ ಸ್ಕ್ಯಾನ್ ಕೂಡ ಮಾಡಿಸಿದ್ದಾರೆ. ಈ ವಿಚಾರದ ಕುರಿತು ಸಾಮಾಜಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.

ಕರ್ನಾಟಕ ಹೈಕೋರ್ಟ್​ ದರ್ಶನ್​​ಗೆ ನೀಡಿರುವುದು ಕೇವಲ ಆರು ವಾರಗಳ ಗಡುವು ಮಾತ್ರ. ಈಗಾಗಲೇ ಅದರಲ್ಲಿ ಎರಡು ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಒಂದೊಮ್ಮೆ ಕೊನೆಯ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ವಿಶ್ರಾಂತಿಗಾಗಿ ದರ್ಶನ್ ಕೋರ್ಟ್ ಬಳಿ ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ‘ದರ್ಶನ್​ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಜೂನ್ 11ರಂದು ಬಂಧಿತರಾದರು. ಸುಮಾರು 130 ದಿನಗಳ ಕಾಲ ಅವರು ಜೈಲಿನಲ್ಲೇ ಇದ್ದರು. ಅವರ ಜಾಮೀನು ಅರ್ಜಿ ಕೆಳ ಹಂತದ ಕೋರ್ಟ್​ನಲ್ಲಿ ರದ್ದಾಗಿತ್ತು. ಹೀಗಾಗಿ, ಹೈಕೋರ್ಟ್ ಮೊರೆ ಹೋಗಿದ್ದ ದರ್ಶನ್​, ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.

ಇತ್ತೀಚೆಗೆ ಸುಮಲತಾ ಅವರು ದರ್ಶನ್ ಬಗ್ಗೆ ಮಾತನಾಡಿದ್ದರು. ‘ದರ್ಶನ್​ಗೆ ಬೆನ್ನು ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಅಂತ ನಾನು ಕೇಳ್ಪಟ್ಟೆ. ಸರ್ಜರಿ ಮಾಡಿದರೆ ರಿಕವರಿ ಸಾಕಷ್ಟು ಸಮಯ ಬೇಕಾಗುತ್ತದೆ. ದರ್ಶನ್ ಕೈಯಲ್ಲಿ ಫೋನ್ ಇಲ್ಲ. ಅವರ ಪತ್ನಿ ಜೊತೆ ನಾವು ಸಂಪರ್ಕ ಮಾಡಬೇಕು ಅಷ್ಟೇ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್