AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಕ್ಕೂ ದರ್ಶನ್​ಗೆ ಆಪರೇಷನ್‌ ಅವಶ್ಯಕತೆ ಇದೆಯೇ? 12 ದಿನ ಕಳೆದರೂ ನಡೆದಿಲ್ಲ ಶಸ್ತ್ರಚಿಕಿತ್ಸೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಟ ದರ್ಶನ್ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಇನ್ನೂ ಆಗಿಲ್ಲ. ಹೈಕೋರ್ಟ್ ನೀಡಿದ ಆರು ವಾರಗಳ ಗಡುವಿಗೆ ಇನ್ನು ನಾಲ್ಕು ವಾರಗಳು ಬಾಕಿ ಇವೆ.

ನಿಜಕ್ಕೂ ದರ್ಶನ್​ಗೆ ಆಪರೇಷನ್‌ ಅವಶ್ಯಕತೆ ಇದೆಯೇ? 12 ದಿನ ಕಳೆದರೂ ನಡೆದಿಲ್ಲ ಶಸ್ತ್ರಚಿಕಿತ್ಸೆ
ದರ್ಶನ್
Follow us
Kiran HV
| Updated By: ರಾಜೇಶ್ ದುಗ್ಗುಮನೆ

Updated on: Nov 11, 2024 | 10:32 AM

ನಟ ದರ್ಶನ್ ಅವರು ಜಾಮೀನು ಪಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಅದಾದ ಬಳಿಕ ದರ್ಶನ್ ಅವರು ಆಸ್ಪತ್ರೆ ಸೇರಿದ್ದಾರೆ. ದರ್ಶನ್​ಗೆ ಆಪರಷೇನ್ ಅಗತ್ಯ ಇದೆ ಎಂದು ವಕೀಲರು ಬಲವಾಗಿ ವಾದಿಸಿದ್ದರು. ಆದರೆ, ಈವರೆಗೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ. ಇದು ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ದರ್ಶನ್ ಅವರನ್ನು ಬಳ್ಳಾರಿಯ ಜೈಲಿನಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ತೀವ್ರ ಬೆನ್ನು ನೋವು ಕಾಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು. ಈ ವರದಿಯನ್ನೇ ಆಧರಿಸಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ದರ್ಶನ್​ಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಬೇಕು ಎಂದಿದ್ದರು. ಅಂತೆಯೇ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಇದುವರೆಗೂ ದರ್ಶನ್‌ಅಪರೇಷನ್ ಮಾಡಿಸಿಕೊಂಡಿಲ್ಲ.

ಸದ್ಯ ಆಸ್ಪತ್ರೆಯಲ್ಲಿ ದರ್ಶನ್‌ಗೆ ಚಿಕಿತ್ಸೆ ಮುಂದುವರಿದಿದೆ. ದರ್ಶನ್‌ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಆಸ್ಪತ್ರೆಯಲ್ಲಿ ಸ್ಕ್ಯಾನ್ ಕೂಡ ಮಾಡಿಸಿದ್ದಾರೆ. ಈ ವಿಚಾರದ ಕುರಿತು ಸಾಮಾಜಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.

ಕರ್ನಾಟಕ ಹೈಕೋರ್ಟ್​ ದರ್ಶನ್​​ಗೆ ನೀಡಿರುವುದು ಕೇವಲ ಆರು ವಾರಗಳ ಗಡುವು ಮಾತ್ರ. ಈಗಾಗಲೇ ಅದರಲ್ಲಿ ಎರಡು ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಒಂದೊಮ್ಮೆ ಕೊನೆಯ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ವಿಶ್ರಾಂತಿಗಾಗಿ ದರ್ಶನ್ ಕೋರ್ಟ್ ಬಳಿ ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ‘ದರ್ಶನ್​ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಜೂನ್ 11ರಂದು ಬಂಧಿತರಾದರು. ಸುಮಾರು 130 ದಿನಗಳ ಕಾಲ ಅವರು ಜೈಲಿನಲ್ಲೇ ಇದ್ದರು. ಅವರ ಜಾಮೀನು ಅರ್ಜಿ ಕೆಳ ಹಂತದ ಕೋರ್ಟ್​ನಲ್ಲಿ ರದ್ದಾಗಿತ್ತು. ಹೀಗಾಗಿ, ಹೈಕೋರ್ಟ್ ಮೊರೆ ಹೋಗಿದ್ದ ದರ್ಶನ್​, ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.

ಇತ್ತೀಚೆಗೆ ಸುಮಲತಾ ಅವರು ದರ್ಶನ್ ಬಗ್ಗೆ ಮಾತನಾಡಿದ್ದರು. ‘ದರ್ಶನ್​ಗೆ ಬೆನ್ನು ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಅಂತ ನಾನು ಕೇಳ್ಪಟ್ಟೆ. ಸರ್ಜರಿ ಮಾಡಿದರೆ ರಿಕವರಿ ಸಾಕಷ್ಟು ಸಮಯ ಬೇಕಾಗುತ್ತದೆ. ದರ್ಶನ್ ಕೈಯಲ್ಲಿ ಫೋನ್ ಇಲ್ಲ. ಅವರ ಪತ್ನಿ ಜೊತೆ ನಾವು ಸಂಪರ್ಕ ಮಾಡಬೇಕು ಅಷ್ಟೇ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ