AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ನಟ ದರ್ಶನ್​ಗೆ ಮೊದಲೇ ಇತ್ತಾ ಗಂಡಾಂತರದ ಮುನ್ಸೂಚನೆ?

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದಲೇ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈ ಪ್ರಕರಣದಿಂದ ಹೊರಗೆ ಬರೋದು ಅವರಿಗೆ ಅಷ್ಟು ಸುಲಭವಿಲ್ಲ. ಅವರಿಗೆ ಈ ಬಗ್ಗೆ ಮೊದಲೆ ಸೂಚನೆ ಸಿಕ್ಕಿತ್ತು ಎನ್ನಲಾಗಿದೆ.

Darshan: ನಟ ದರ್ಶನ್​ಗೆ ಮೊದಲೇ ಇತ್ತಾ ಗಂಡಾಂತರದ ಮುನ್ಸೂಚನೆ?
ದರ್ಶನ್
Mangala RR
| Updated By: ರಾಜೇಶ್ ದುಗ್ಗುಮನೆ|

Updated on: Jun 29, 2024 | 11:11 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಎನಿಸಿಕೊಂಡಿದ್ದಾರೆ. ಸದ್ಯ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅವರ ವಿರುದ್ಧ ಸದ್ಯ ಇರೋದು ಗಂಭೀರ ಆರೋಪ. ಹೀಗಾಗಿ, ಸದ್ಯಕ್ಕಂತೂ ಜಾಮೀನು ಸಿಗೋದು ಅನುಮಾನ ಎನ್ನಲಾಗುತ್ತಿದೆ. ಈ ಮಧ್ಯೆ ಈ ವರ್ಷ ಅಪಾಯ ಇದೆ ಅನ್ನೋದು ದರ್ಶನ್​ಗೆ ಮೊದಲೇ ಗೊತ್ತಿತ್ತಾ ಎನ್ನುವ ಪ್ರಶ್ನೆ ಮೂಡಿದೆ.

ಎರಡು ತಿಂಗಳ ಹಿಂದೆ ನಟ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರು. ನಕಾರಾತ್ಮಕ ಅಂಶಗಳನ್ನು ನಾಶಮಾಡಲು, ಶತ್ರುಗಳ ಮೇಲೆ ವಿಜಯ ಪ್ರಾಪ್ತಿಗೆ ಅಥವಾ ಮಾಟ-ಮಂತ್ರ ಮಾಡಿಸಿರೋ ಅನುಮಾನ ಇದ್ದರೆ ಈ ಹೋಮ ಮಾಡಿಸಲಾಗುತ್ತದೆ. ದರ್ಶನ್ ಕೂಡ ಇದೇ ಹೋಮ ಮಾಡಿಸಿದ್ದರು ಎನ್ನಲಾಗಿದೆ.

ಅರೆಸ್ಟ್ ಆಗುವುದಕ್ಕೂ ಮುನ್ನ ಅವರು ಮನೆಯನ್ನು ಹೊಸದಾಗಿ ರಿನೋವೇಷನ್ ಮಾಡಿದ್ದರು. ಹೀಗಾಗಿ, ಅವರು ವಿಶೇಷ ಪೂಜೆ ಇಟ್ಟುಕೊಂಡಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ನಡೆದ ಬಳಿಕ ದರ್ಶನ್ ಪೂಜೆಯಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: ‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?

ಆ್ಯಕ್ಷನ್ ದೃಶ್ಯಗಳನ್ನು ಇಡದಂತೆ ಮಿಲನಾ ಪ್ರಕಾಶ್​ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಜಾಗ್ರತೆ ವಹಿಸಿದರೂ ದರ್ಶನ್​ಗೆ ಪೆಟ್ಟಾಗಿತ್ತು. ಅವರ ಕೈಗೆ ಪೆಟ್ಟಾಗಲು ಇದೂ ಕಾರಣ. 2017-18ರಿಂದ ದರ್ಶನ್ ಅವರಿಗೆ ಸಾಡೇ ಸಾತಿ ಇದೆ. ಜೂನ್-ನವೆಂಬರ್ 15ವರೆಗೆ ಅವರು ಮತ್ತಷ್ಟು ತೊಂದರೆ ಅನುಭವಿಸಲಿದ್ದಾರೆ. ಹಣ, ಮಾತು, ಆರೋಗ್ಯ, ಸಾಂಸಾರಿಕವಾಗಿ ಸಮಸ್ಯೆ ತೀವ್ರವಾಗುತ್ತದೆ ಎನ್ನುತ್ತಾರೆ ಜ್ಯೋತಿಷಿಗಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್