AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ನಟ ದರ್ಶನ್​ಗೆ ಮೊದಲೇ ಇತ್ತಾ ಗಂಡಾಂತರದ ಮುನ್ಸೂಚನೆ?

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದಲೇ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈ ಪ್ರಕರಣದಿಂದ ಹೊರಗೆ ಬರೋದು ಅವರಿಗೆ ಅಷ್ಟು ಸುಲಭವಿಲ್ಲ. ಅವರಿಗೆ ಈ ಬಗ್ಗೆ ಮೊದಲೆ ಸೂಚನೆ ಸಿಕ್ಕಿತ್ತು ಎನ್ನಲಾಗಿದೆ.

Darshan: ನಟ ದರ್ಶನ್​ಗೆ ಮೊದಲೇ ಇತ್ತಾ ಗಂಡಾಂತರದ ಮುನ್ಸೂಚನೆ?
ದರ್ಶನ್
ಮಂಗಳ ರಾಜಗೋಪಾಲ್​
| Edited By: |

Updated on: Jun 29, 2024 | 11:11 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಎನಿಸಿಕೊಂಡಿದ್ದಾರೆ. ಸದ್ಯ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅವರ ವಿರುದ್ಧ ಸದ್ಯ ಇರೋದು ಗಂಭೀರ ಆರೋಪ. ಹೀಗಾಗಿ, ಸದ್ಯಕ್ಕಂತೂ ಜಾಮೀನು ಸಿಗೋದು ಅನುಮಾನ ಎನ್ನಲಾಗುತ್ತಿದೆ. ಈ ಮಧ್ಯೆ ಈ ವರ್ಷ ಅಪಾಯ ಇದೆ ಅನ್ನೋದು ದರ್ಶನ್​ಗೆ ಮೊದಲೇ ಗೊತ್ತಿತ್ತಾ ಎನ್ನುವ ಪ್ರಶ್ನೆ ಮೂಡಿದೆ.

ಎರಡು ತಿಂಗಳ ಹಿಂದೆ ನಟ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರು. ನಕಾರಾತ್ಮಕ ಅಂಶಗಳನ್ನು ನಾಶಮಾಡಲು, ಶತ್ರುಗಳ ಮೇಲೆ ವಿಜಯ ಪ್ರಾಪ್ತಿಗೆ ಅಥವಾ ಮಾಟ-ಮಂತ್ರ ಮಾಡಿಸಿರೋ ಅನುಮಾನ ಇದ್ದರೆ ಈ ಹೋಮ ಮಾಡಿಸಲಾಗುತ್ತದೆ. ದರ್ಶನ್ ಕೂಡ ಇದೇ ಹೋಮ ಮಾಡಿಸಿದ್ದರು ಎನ್ನಲಾಗಿದೆ.

ಅರೆಸ್ಟ್ ಆಗುವುದಕ್ಕೂ ಮುನ್ನ ಅವರು ಮನೆಯನ್ನು ಹೊಸದಾಗಿ ರಿನೋವೇಷನ್ ಮಾಡಿದ್ದರು. ಹೀಗಾಗಿ, ಅವರು ವಿಶೇಷ ಪೂಜೆ ಇಟ್ಟುಕೊಂಡಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ನಡೆದ ಬಳಿಕ ದರ್ಶನ್ ಪೂಜೆಯಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: ‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?

ಆ್ಯಕ್ಷನ್ ದೃಶ್ಯಗಳನ್ನು ಇಡದಂತೆ ಮಿಲನಾ ಪ್ರಕಾಶ್​ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಜಾಗ್ರತೆ ವಹಿಸಿದರೂ ದರ್ಶನ್​ಗೆ ಪೆಟ್ಟಾಗಿತ್ತು. ಅವರ ಕೈಗೆ ಪೆಟ್ಟಾಗಲು ಇದೂ ಕಾರಣ. 2017-18ರಿಂದ ದರ್ಶನ್ ಅವರಿಗೆ ಸಾಡೇ ಸಾತಿ ಇದೆ. ಜೂನ್-ನವೆಂಬರ್ 15ವರೆಗೆ ಅವರು ಮತ್ತಷ್ಟು ತೊಂದರೆ ಅನುಭವಿಸಲಿದ್ದಾರೆ. ಹಣ, ಮಾತು, ಆರೋಗ್ಯ, ಸಾಂಸಾರಿಕವಾಗಿ ಸಮಸ್ಯೆ ತೀವ್ರವಾಗುತ್ತದೆ ಎನ್ನುತ್ತಾರೆ ಜ್ಯೋತಿಷಿಗಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ