AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ಗೆ ಮತ್ತೆ ಬರ್ತೀನಿ, ಚಿತ್ರಮಂದಿರ ಖಾಲಿ ಇಟ್ಟಿರಿ: ದರ್ಶನ್

Darshan Thoogudeepa: ದರ್ಶನ್ ತಮ್ಮ ಮುಂದಿನ ಸಿನಿಮಾದ ಬಿಡುಗಡೆ ಬಗ್ಗೆ ಮಾತನಾಡಿದ್ದಾರೆ. ‘ಅಕ್ಟೋಬರ್​ನಲ್ಲಿ ಚಿತ್ರಮಂದಿರ ಖಾಲಿ ಇಟ್ಟಿರಿ, ಬರ್ತಿದ್ದೀನಿ’ ಎಂದಿದ್ದಾರೆ.

ಅಕ್ಟೋಬರ್​ಗೆ ಮತ್ತೆ ಬರ್ತೀನಿ, ಚಿತ್ರಮಂದಿರ ಖಾಲಿ ಇಟ್ಟಿರಿ: ದರ್ಶನ್
ಮಂಜುನಾಥ ಸಿ.
|

Updated on: Feb 20, 2024 | 2:35 PM

Share

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ 50 ದಿನ ಪೂರೈಸಿದೆ. ಪ್ರಸನ್ನ ಚಿತ್ರಮಂದಿರದಲ್ಲಿ ‘ಕಾಟೇರ’ ಸಿನಿಮಾದ 50 ದಿನದ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿತ್ತು. ದರ್ಶನ್, ನಾಯಕಿ ಆರಾಧನಾ, ನಟಿ ಶ್ರುತಿ ಸೇರಿದಂತೆ ಚಿತ್ರತಂಡದ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಲವು ವಿಷಯಗಳ ಬಗ್ಗೆ ನಟ ದರ್ಶನ್ ಮಾತನಾಡಿದರು. ‘ಕಾಟೇರ’ ಸಿನಿಮಾದ ಯಶಸ್ಸಿನ ಜೊತೆಗೆ ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ತಮಗೆ ಹಾಗೂ ಪ್ರಸನ್ನ ಚಿತ್ರಮಂದಿರಕ್ಕೂ ಇರುವ ನಂಟಿನ ಬಗ್ಗೆಯೂ ಮಾತನಾಡಿದರು. ಇದರ ನಡುವೆ ದರ್ಶನ್ ತಮ್ಮ ಮುಂದಿನ ಸಿನಿಮಾ ಬಗ್ಗೆಯೂ ಮಾತನಾಡಿದರು.

ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಮಹತ್ವದ ಬಗ್ಗೆ ಮಾತನಾಡುತ್ತಾ, ‘ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಇದ್ದರಷ್ಟೆ ನಿರ್ಮಾಪಕರು, ಸಿನಿಮಾಗಳು ಬದುಕುವುದಕ್ಕೆ ಸಾಧ್ಯ. ಮಲ್ಟಿಪ್ಲೆಕ್ಸ್​ಗಳಲ್ಲಿ ಬಹಳ ವೇರಿಯೇಷನ್ ನಡೆಯುತ್ತಿರುತ್ತದೆ. ಆದರೆ ಸಿಂಗಲ್ ಸ್ಕ್ರೀನ್​ನಲ್ಲಿ ಮಾರಾಟವಾಗುವ ಪ್ರತಿ ಟಿಕೆಟ್​ನಲ್ಲಿಯೂ ಇಂತಿಷ್ಟೆಂದು ನಿರ್ಮಾಪಕರ ಕೈಗೆ ಸೇರುತ್ತದೆ. ಸಿಂಗಲ್ ಸ್ಕ್ರೀನ್​ಗಳಿಂದಲೇ ಸ್ಟಾರ್​ಗಳು ಹುಟ್ಟೋದು ಸಹ’ ಎಂದರು ದರ್ಶನ್.

‘ಅಂಬರೀಶ’ ಸಿನಿಮಾ ಬಿಡುಗಡೆ ಮಾಡುವ ಸಮಯದಲ್ಲಿ ನಮಗೆ ಕೆಜಿ ರೋಡ್ ಮೇನ್ ಚಿತ್ರಮಂದಿರ ಸಿಕ್ಕಿರಲಿಲ್ಲ. ಆಗ ನಾನು ಸಾಕಷ್ಟು ಗಲಾಟೆ ಮಾಡಿದೆ. ಅಪ್ಪಿ-ರಾಘು ಬಳಿ ಫೋನ್​ನಲ್ಲಿ ಏನೇನೋ ಮಾತನಾಡಿದ್ದೆ. ಮನೆಯ ಬಳಿ ಹೋಗಿಯೂ ಗಲಾಟೆ ಮಾಡಿದ್ದಿದೆ. ಅಯ್ಯೋ ಇವನ ಸವಾಸ ಬೇಡ ಅಂದುಕೊಂಡು ಚಿತ್ರಮಂದಿರ ಕೊಟ್ಟಿದ್ದರು, ಇದನ್ನೇ ನಾವು ಮುಖ್ಯ ಚಿತ್ರಮಂದಿರ ಮಾಡಿಕೊಂಡಿದ್ದೆವು’ ಎಂದಿದ್ದಾರೆ ದರ್ಶನ್.

ಇದನ್ನೂ ಓದಿ:ದರ್ಶನ್​ ವರ್ಸಸ್​ ಉಮಾಪತಿ: ‘ಕಾಟೇರ’ ಶೀರ್ಷಿಕೆ ಬಗ್ಗೆ ​ಕೊನೆಗೂ ಮೌನ ಮುರಿದ ಡಿ ಬಾಸ್​

ವರ್ಷಕ್ಕೆರಡು ಸಿನಿಮಾಗಳನ್ನು ಮಾಡಬೇಕು ಎಂದು ಕೆಲವರು ಹೇಳಿದರು, ನಾನಂತೂ ಅದನ್ನೇ ಮಾಡಿಕೊಂಡು ಬರುತ್ತಿದ್ದೇನೆ. ಈಗ ಮತ್ತೆ ಅಕ್ಟೋಬರ್ ತಿಂಗಳಿಗೆ ಬರುತ್ತಿದ್ದೇನೆ, ಚಿತ್ರಮಂದಿರಗಳನ್ನು ಖಾಲಿ ಇಟ್ಟುಕೊಳ್ಳಿ, ಮರೆಯದೇ ನಮಗೆ ಚಿತ್ರಮಂದಿರ ಕೊಡಿ, ಈಗಾಗಲೇ ಪ್ರಕಾಶ್​ಗೆ ಹೇಳಿದ್ದೀನಿ, ಅಕ್ಟೋಬರ್​ಗೆ ರಿಲೀಸ್ ಮಾಡೋಣ, ಏನಾದರೂ ಮಾಡಿ ಧಮ್ ಕಟ್ಟಿಯಾದರೂ ಕೆಲಸ ಮಾಡೋಣ ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಿಗೆ ಬಿಡುಗಡೆ ಮಾಡೋಣ ಅಂದಿದ್ದೀನಿ, ತಪ್ಪದೇ ಅಕ್ಟೋಬರ್​ಗೆ ಬರ್ತೀನಿ’ ಎಂದಿದ್ದಾರೆ ದರ್ಶನ್.

ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಸಿನಿಮಾದ ಪ್ರೋಮೋ ಇದೀಗ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ವಿಲನ್ ಶೇಡ್​ನಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಅಕ್ಟೋಬರ್​ನಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು