ಅಕ್ಟೋಬರ್​ಗೆ ಮತ್ತೆ ಬರ್ತೀನಿ, ಚಿತ್ರಮಂದಿರ ಖಾಲಿ ಇಟ್ಟಿರಿ: ದರ್ಶನ್

Darshan Thoogudeepa: ದರ್ಶನ್ ತಮ್ಮ ಮುಂದಿನ ಸಿನಿಮಾದ ಬಿಡುಗಡೆ ಬಗ್ಗೆ ಮಾತನಾಡಿದ್ದಾರೆ. ‘ಅಕ್ಟೋಬರ್​ನಲ್ಲಿ ಚಿತ್ರಮಂದಿರ ಖಾಲಿ ಇಟ್ಟಿರಿ, ಬರ್ತಿದ್ದೀನಿ’ ಎಂದಿದ್ದಾರೆ.

ಅಕ್ಟೋಬರ್​ಗೆ ಮತ್ತೆ ಬರ್ತೀನಿ, ಚಿತ್ರಮಂದಿರ ಖಾಲಿ ಇಟ್ಟಿರಿ: ದರ್ಶನ್
Follow us
|

Updated on: Feb 20, 2024 | 2:35 PM

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ 50 ದಿನ ಪೂರೈಸಿದೆ. ಪ್ರಸನ್ನ ಚಿತ್ರಮಂದಿರದಲ್ಲಿ ‘ಕಾಟೇರ’ ಸಿನಿಮಾದ 50 ದಿನದ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿತ್ತು. ದರ್ಶನ್, ನಾಯಕಿ ಆರಾಧನಾ, ನಟಿ ಶ್ರುತಿ ಸೇರಿದಂತೆ ಚಿತ್ರತಂಡದ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಲವು ವಿಷಯಗಳ ಬಗ್ಗೆ ನಟ ದರ್ಶನ್ ಮಾತನಾಡಿದರು. ‘ಕಾಟೇರ’ ಸಿನಿಮಾದ ಯಶಸ್ಸಿನ ಜೊತೆಗೆ ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ತಮಗೆ ಹಾಗೂ ಪ್ರಸನ್ನ ಚಿತ್ರಮಂದಿರಕ್ಕೂ ಇರುವ ನಂಟಿನ ಬಗ್ಗೆಯೂ ಮಾತನಾಡಿದರು. ಇದರ ನಡುವೆ ದರ್ಶನ್ ತಮ್ಮ ಮುಂದಿನ ಸಿನಿಮಾ ಬಗ್ಗೆಯೂ ಮಾತನಾಡಿದರು.

ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಮಹತ್ವದ ಬಗ್ಗೆ ಮಾತನಾಡುತ್ತಾ, ‘ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಇದ್ದರಷ್ಟೆ ನಿರ್ಮಾಪಕರು, ಸಿನಿಮಾಗಳು ಬದುಕುವುದಕ್ಕೆ ಸಾಧ್ಯ. ಮಲ್ಟಿಪ್ಲೆಕ್ಸ್​ಗಳಲ್ಲಿ ಬಹಳ ವೇರಿಯೇಷನ್ ನಡೆಯುತ್ತಿರುತ್ತದೆ. ಆದರೆ ಸಿಂಗಲ್ ಸ್ಕ್ರೀನ್​ನಲ್ಲಿ ಮಾರಾಟವಾಗುವ ಪ್ರತಿ ಟಿಕೆಟ್​ನಲ್ಲಿಯೂ ಇಂತಿಷ್ಟೆಂದು ನಿರ್ಮಾಪಕರ ಕೈಗೆ ಸೇರುತ್ತದೆ. ಸಿಂಗಲ್ ಸ್ಕ್ರೀನ್​ಗಳಿಂದಲೇ ಸ್ಟಾರ್​ಗಳು ಹುಟ್ಟೋದು ಸಹ’ ಎಂದರು ದರ್ಶನ್.

‘ಅಂಬರೀಶ’ ಸಿನಿಮಾ ಬಿಡುಗಡೆ ಮಾಡುವ ಸಮಯದಲ್ಲಿ ನಮಗೆ ಕೆಜಿ ರೋಡ್ ಮೇನ್ ಚಿತ್ರಮಂದಿರ ಸಿಕ್ಕಿರಲಿಲ್ಲ. ಆಗ ನಾನು ಸಾಕಷ್ಟು ಗಲಾಟೆ ಮಾಡಿದೆ. ಅಪ್ಪಿ-ರಾಘು ಬಳಿ ಫೋನ್​ನಲ್ಲಿ ಏನೇನೋ ಮಾತನಾಡಿದ್ದೆ. ಮನೆಯ ಬಳಿ ಹೋಗಿಯೂ ಗಲಾಟೆ ಮಾಡಿದ್ದಿದೆ. ಅಯ್ಯೋ ಇವನ ಸವಾಸ ಬೇಡ ಅಂದುಕೊಂಡು ಚಿತ್ರಮಂದಿರ ಕೊಟ್ಟಿದ್ದರು, ಇದನ್ನೇ ನಾವು ಮುಖ್ಯ ಚಿತ್ರಮಂದಿರ ಮಾಡಿಕೊಂಡಿದ್ದೆವು’ ಎಂದಿದ್ದಾರೆ ದರ್ಶನ್.

ಇದನ್ನೂ ಓದಿ:ದರ್ಶನ್​ ವರ್ಸಸ್​ ಉಮಾಪತಿ: ‘ಕಾಟೇರ’ ಶೀರ್ಷಿಕೆ ಬಗ್ಗೆ ​ಕೊನೆಗೂ ಮೌನ ಮುರಿದ ಡಿ ಬಾಸ್​

ವರ್ಷಕ್ಕೆರಡು ಸಿನಿಮಾಗಳನ್ನು ಮಾಡಬೇಕು ಎಂದು ಕೆಲವರು ಹೇಳಿದರು, ನಾನಂತೂ ಅದನ್ನೇ ಮಾಡಿಕೊಂಡು ಬರುತ್ತಿದ್ದೇನೆ. ಈಗ ಮತ್ತೆ ಅಕ್ಟೋಬರ್ ತಿಂಗಳಿಗೆ ಬರುತ್ತಿದ್ದೇನೆ, ಚಿತ್ರಮಂದಿರಗಳನ್ನು ಖಾಲಿ ಇಟ್ಟುಕೊಳ್ಳಿ, ಮರೆಯದೇ ನಮಗೆ ಚಿತ್ರಮಂದಿರ ಕೊಡಿ, ಈಗಾಗಲೇ ಪ್ರಕಾಶ್​ಗೆ ಹೇಳಿದ್ದೀನಿ, ಅಕ್ಟೋಬರ್​ಗೆ ರಿಲೀಸ್ ಮಾಡೋಣ, ಏನಾದರೂ ಮಾಡಿ ಧಮ್ ಕಟ್ಟಿಯಾದರೂ ಕೆಲಸ ಮಾಡೋಣ ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಿಗೆ ಬಿಡುಗಡೆ ಮಾಡೋಣ ಅಂದಿದ್ದೀನಿ, ತಪ್ಪದೇ ಅಕ್ಟೋಬರ್​ಗೆ ಬರ್ತೀನಿ’ ಎಂದಿದ್ದಾರೆ ದರ್ಶನ್.

ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಸಿನಿಮಾದ ಪ್ರೋಮೋ ಇದೀಗ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ವಿಲನ್ ಶೇಡ್​ನಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಅಕ್ಟೋಬರ್​ನಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು