AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ಗೆ ಮತ್ತೆ ಬರ್ತೀನಿ, ಚಿತ್ರಮಂದಿರ ಖಾಲಿ ಇಟ್ಟಿರಿ: ದರ್ಶನ್

Darshan Thoogudeepa: ದರ್ಶನ್ ತಮ್ಮ ಮುಂದಿನ ಸಿನಿಮಾದ ಬಿಡುಗಡೆ ಬಗ್ಗೆ ಮಾತನಾಡಿದ್ದಾರೆ. ‘ಅಕ್ಟೋಬರ್​ನಲ್ಲಿ ಚಿತ್ರಮಂದಿರ ಖಾಲಿ ಇಟ್ಟಿರಿ, ಬರ್ತಿದ್ದೀನಿ’ ಎಂದಿದ್ದಾರೆ.

ಅಕ್ಟೋಬರ್​ಗೆ ಮತ್ತೆ ಬರ್ತೀನಿ, ಚಿತ್ರಮಂದಿರ ಖಾಲಿ ಇಟ್ಟಿರಿ: ದರ್ಶನ್
ಮಂಜುನಾಥ ಸಿ.
|

Updated on: Feb 20, 2024 | 2:35 PM

Share

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ 50 ದಿನ ಪೂರೈಸಿದೆ. ಪ್ರಸನ್ನ ಚಿತ್ರಮಂದಿರದಲ್ಲಿ ‘ಕಾಟೇರ’ ಸಿನಿಮಾದ 50 ದಿನದ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿತ್ತು. ದರ್ಶನ್, ನಾಯಕಿ ಆರಾಧನಾ, ನಟಿ ಶ್ರುತಿ ಸೇರಿದಂತೆ ಚಿತ್ರತಂಡದ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಲವು ವಿಷಯಗಳ ಬಗ್ಗೆ ನಟ ದರ್ಶನ್ ಮಾತನಾಡಿದರು. ‘ಕಾಟೇರ’ ಸಿನಿಮಾದ ಯಶಸ್ಸಿನ ಜೊತೆಗೆ ಇನ್ನೂ ಕೆಲವು ವಿಷಯಗಳ ಬಗ್ಗೆ ಮಾತನಾಡಿದರು. ತಮಗೆ ಹಾಗೂ ಪ್ರಸನ್ನ ಚಿತ್ರಮಂದಿರಕ್ಕೂ ಇರುವ ನಂಟಿನ ಬಗ್ಗೆಯೂ ಮಾತನಾಡಿದರು. ಇದರ ನಡುವೆ ದರ್ಶನ್ ತಮ್ಮ ಮುಂದಿನ ಸಿನಿಮಾ ಬಗ್ಗೆಯೂ ಮಾತನಾಡಿದರು.

ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಮಹತ್ವದ ಬಗ್ಗೆ ಮಾತನಾಡುತ್ತಾ, ‘ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಇದ್ದರಷ್ಟೆ ನಿರ್ಮಾಪಕರು, ಸಿನಿಮಾಗಳು ಬದುಕುವುದಕ್ಕೆ ಸಾಧ್ಯ. ಮಲ್ಟಿಪ್ಲೆಕ್ಸ್​ಗಳಲ್ಲಿ ಬಹಳ ವೇರಿಯೇಷನ್ ನಡೆಯುತ್ತಿರುತ್ತದೆ. ಆದರೆ ಸಿಂಗಲ್ ಸ್ಕ್ರೀನ್​ನಲ್ಲಿ ಮಾರಾಟವಾಗುವ ಪ್ರತಿ ಟಿಕೆಟ್​ನಲ್ಲಿಯೂ ಇಂತಿಷ್ಟೆಂದು ನಿರ್ಮಾಪಕರ ಕೈಗೆ ಸೇರುತ್ತದೆ. ಸಿಂಗಲ್ ಸ್ಕ್ರೀನ್​ಗಳಿಂದಲೇ ಸ್ಟಾರ್​ಗಳು ಹುಟ್ಟೋದು ಸಹ’ ಎಂದರು ದರ್ಶನ್.

‘ಅಂಬರೀಶ’ ಸಿನಿಮಾ ಬಿಡುಗಡೆ ಮಾಡುವ ಸಮಯದಲ್ಲಿ ನಮಗೆ ಕೆಜಿ ರೋಡ್ ಮೇನ್ ಚಿತ್ರಮಂದಿರ ಸಿಕ್ಕಿರಲಿಲ್ಲ. ಆಗ ನಾನು ಸಾಕಷ್ಟು ಗಲಾಟೆ ಮಾಡಿದೆ. ಅಪ್ಪಿ-ರಾಘು ಬಳಿ ಫೋನ್​ನಲ್ಲಿ ಏನೇನೋ ಮಾತನಾಡಿದ್ದೆ. ಮನೆಯ ಬಳಿ ಹೋಗಿಯೂ ಗಲಾಟೆ ಮಾಡಿದ್ದಿದೆ. ಅಯ್ಯೋ ಇವನ ಸವಾಸ ಬೇಡ ಅಂದುಕೊಂಡು ಚಿತ್ರಮಂದಿರ ಕೊಟ್ಟಿದ್ದರು, ಇದನ್ನೇ ನಾವು ಮುಖ್ಯ ಚಿತ್ರಮಂದಿರ ಮಾಡಿಕೊಂಡಿದ್ದೆವು’ ಎಂದಿದ್ದಾರೆ ದರ್ಶನ್.

ಇದನ್ನೂ ಓದಿ:ದರ್ಶನ್​ ವರ್ಸಸ್​ ಉಮಾಪತಿ: ‘ಕಾಟೇರ’ ಶೀರ್ಷಿಕೆ ಬಗ್ಗೆ ​ಕೊನೆಗೂ ಮೌನ ಮುರಿದ ಡಿ ಬಾಸ್​

ವರ್ಷಕ್ಕೆರಡು ಸಿನಿಮಾಗಳನ್ನು ಮಾಡಬೇಕು ಎಂದು ಕೆಲವರು ಹೇಳಿದರು, ನಾನಂತೂ ಅದನ್ನೇ ಮಾಡಿಕೊಂಡು ಬರುತ್ತಿದ್ದೇನೆ. ಈಗ ಮತ್ತೆ ಅಕ್ಟೋಬರ್ ತಿಂಗಳಿಗೆ ಬರುತ್ತಿದ್ದೇನೆ, ಚಿತ್ರಮಂದಿರಗಳನ್ನು ಖಾಲಿ ಇಟ್ಟುಕೊಳ್ಳಿ, ಮರೆಯದೇ ನಮಗೆ ಚಿತ್ರಮಂದಿರ ಕೊಡಿ, ಈಗಾಗಲೇ ಪ್ರಕಾಶ್​ಗೆ ಹೇಳಿದ್ದೀನಿ, ಅಕ್ಟೋಬರ್​ಗೆ ರಿಲೀಸ್ ಮಾಡೋಣ, ಏನಾದರೂ ಮಾಡಿ ಧಮ್ ಕಟ್ಟಿಯಾದರೂ ಕೆಲಸ ಮಾಡೋಣ ಒಟ್ಟಿನಲ್ಲಿ ಅಕ್ಟೋಬರ್ ತಿಂಗಳಿಗೆ ಬಿಡುಗಡೆ ಮಾಡೋಣ ಅಂದಿದ್ದೀನಿ, ತಪ್ಪದೇ ಅಕ್ಟೋಬರ್​ಗೆ ಬರ್ತೀನಿ’ ಎಂದಿದ್ದಾರೆ ದರ್ಶನ್.

ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಸಿನಿಮಾದ ಪ್ರೋಮೋ ಇದೀಗ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ವಿಲನ್ ಶೇಡ್​ನಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಅಕ್ಟೋಬರ್​ನಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?