AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾಮನ’ ಸಿನಿಮಾ ನೋಡಲು ಬರಲಿರುವ ದರ್ಶನ್, ಎಲ್ಲಿ? ಯಾವಾಗ?

Darshan Thoogudeepa: ನಟ ದರ್ಶನ್, ಇತ್ತೀಚೆಗಷ್ಟೆ ‘ಡೆವಿಲ್’ ಸಿನಿಮಾ ಚಿತ್ರೀಕರಣ ರಾಜಸ್ಥಾನದಲ್ಲಿ ಮುಗಿಸಿ ವಾಪಸ್ಸಾಗಿದ್ದಾರೆ. ಸತತ ಚಿತ್ರೀಕರಣದಿಂದ ಬಳಲಿ, ಬೆನ್ನು ನೋವು ಹೆಚ್ಚಾಗಿರುವ ಕಾರಣ ನೀಡಿ ಕೋರ್ಟ್ ವಿಚಾರಣೆಗೂ ಹಾಜರಾಗಿರಲಿಲ್ಲ. ಆದರೆ ದರ್ಶನ್ ‘ವಾಮನ’ ಸಿನಿಮಾದ ಪ್ರೀಮಿಯರ್ ಶೋನಲ್ಲಿ ಭಾಗಿ ಆಗಲಿದ್ದಾರೆ. ಎಲ್ಲಿ? ಯಾವಾಗ? ಇಲ್ಲಿ ತಿಳಿಯಿರಿ...

‘ವಾಮನ’ ಸಿನಿಮಾ ನೋಡಲು ಬರಲಿರುವ ದರ್ಶನ್, ಎಲ್ಲಿ? ಯಾವಾಗ?
Darshan Thoogudeepa
ಮಂಜುನಾಥ ಸಿ.
|

Updated on: Apr 09, 2025 | 2:07 PM

Share

ಡೆವಿಲ್’ (Devil) ಸಿನಿಮಾದ ಚಿತ್ರೀಕರಣದ ಮೂರನೇ ಶೆಡ್ಯೂಲ್ ಮುಗಿಸಿ ಇತ್ತೀಚೆಗಷ್ಟೆ ರಾಜಸ್ಥಾನದಿಂದ ವಾಪಸ್ಸಾಗಿರುವ ನಟ ದರ್ಶನ್ (Darshan Thoogudeepa) ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುತ್ತಿದ್ದಾರೆ. ದರ್ಶನ್ ಅವರ ಆತ್ಮೀಯ ಗೆಳೆಯ, ಸಹೋದರ ಸಮಾನರೂ ಆಗಿರುವ ಧನ್ವೀರ್ ನಟನೆಯ ‘ವಾಮನ’ (Vaamana) ಸಿನಿಮಾ ಇದೇ ವಾರ ತೆರೆಗೆ ಬರಲಿದ್ದು, ವಿಶ್ರಾಂತಿಯ ನಡುವೆ ಸಹೋದರನ ಸಿನಿಮಾಕ್ಕೆ ಬೆಂಬಲ ನೀಡಲು ಬರುತ್ತಿದ್ದಾರೆ ನಟ ದರ್ಶನ್. ಕೆಲ ದಿನಗಳ ಹಿಂದಷ್ಟೆ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದ್ದ ದರ್ಶನ್, ಇದೀಗ ‘ವಾಮನ’ ಸಿನಿಮಾ ವೀಕ್ಷಿಸಲು ಚಿತ್ರಮಂದಿರಕ್ಕೆ ಬರುತ್ತಿದ್ದಾರೆ.

ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾ ನಾಳೆ (ಏಪ್ರಿಲ್ 10) ರಾಜ್ಯದಾದ್ಯಂತ ಬಿಡುಗಡೆ ಆಗಲಿದ್ದು, ಇಂದು (ಏಪ್ರಿಲ್ 09) ಸಿನಿಮಾದ ವಿಶೇಷ ಶೋ ಆಯೋಜನೆ ಮಾಡಲಾಗಿದೆ. ಈ ಶೋಗೆ ನಟ ದರ್ಶನ್ ಆಗಮಿಸಲಿದ್ದು ಎಲ್ಲರೊಡನೆ ಕುಳಿತು ಸಿನಿಮಾ ನೋಡಲಿದ್ದಾರೆ. ಇಂದು ಸಂಜೆ ಬೆಂಗಳೂರಿನ ಜಿಟಿ ಮಾಲ್​ನಲ್ಲಿ ‘ವಾಮನ’ ಸಿನಿಮಾ ವೀಕ್ಷಿಸಲಿದ್ದಾರೆ ನಟ ದರ್ಶನ್.

ಕೆಲ ದಿನಗಳ ಹಿಂದಷ್ಟೆ ‘ವಾಮನ’ ಸಿನಿಮಾದ ಟ್ರೈಲರ್ ಅನ್ನು ನಟ ದರ್ಶನ್ ಬಿಡುಗಡೆ ಮಾಡಿದ್ದರು. ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಪ್ರಸನ್ನ ಚಿತ್ರಮಂದಿರದಲ್ಲಿ ಆಯೋಜಿಸಲಾಗಿತ್ತು. ದರ್ಶನ್, ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಬರಲಿಲ್ಲ ಆದರೆ ಅವರು ಟ್ರೈಲರ್ ಬಿಡುಗಡೆ ಮಾಡಿದ ವಿಡಿಯೋ ಪ್ರದರ್ಶಿಸಲಾಯ್ತು. ಕಾರ್ಯಕ್ರಮದ ಬಳಿಕ ದರ್ಶನ್ ಅಭಿಮಾನಿಗಳು ಪ್ರಸನ್ನ ಚಿತ್ರಮಂದಿರದ ಕುರ್ಚಿ, ಕಿಟಕಿ, ಗಾಜುಗಳನ್ನು ಒಡೆದು ದಾಂಧಲೆ ಎಬ್ಬಿಸಿದರು. ಈಗ ಜಿಟಿ ಮಾಲ್​ಗೆ ದರ್ಶನ್ ಬರಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲಿಯೂ ಸಹ ದರ್ಶನ್ ಅಭಿಮಾನಿಗಳು ದಾಂಧಲೆ ಎಬ್ಬಿಸುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ
Image
Darshan: ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ: ಏಪ್ರಿಲ್ 22ಕ್ಕೆ ವಿಚಾರಣೆ
Image
ಅಜಯ್ ದೇವಗನ್ ಐಷಾರಾಮಿ ಜೀವನ; 60 ಕೋಟಿ ಮನೆ, ದುಬಾರಿ ಕಾರು, ಬಿಸ್ನೆಸ್
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಇದನ್ನೂ ಓದಿ:ವಿಜಯಲಕ್ಷ್ಮೀ ದರ್ಶನ್ ಜೀವನದಲ್ಲಿ ಈಗ ಖುಷಿಯೋ ಖುಷಿ; ಎಷ್ಟು ಕ್ಯೂಟ್ ನೋಡಿ

ದರ್ಶನ್ ಜೈಲಿನಿಂದ ಬಿಡುಗಡೆ ಆಗಿ ಹೊರಬಂದ ಬಳಿಕ ಹಾಜರಾಗುತ್ತಿರುವ ಎರಡನೇ ಸಿನಿಮಾ ಪ್ರೀಮಿಯರ್ ಶೋ ಇದಾಗಿದೆ. ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನದ ‘ರಾಯಲ್’ ಸಿನಿಮಾದ ಪ್ರೀಮಿಯರ್​ಗೂ ಸಹ ದರ್ಶನ್ ಹೋಗಿ ಸಿನಿಮಾ ವೀಕ್ಷಿಸಿದ್ದರು. ಇದೀಗ ‘ವಾಮನ’ ಸಿನಿಮಾ ಪ್ರೀಮಿಯರ್ ಶೋನಲ್ಲಿ ಭಾಗಿ ಆಗಲಿದ್ದಾರೆ. ‘ವಾಮನ’ ಸಿನಿಮಾದಲ್ಲಿ ನಟ ಧನ್ವೀರ್ ನಾಯಕ, ರೀಷ್ಮಾ ನಾಣಯ್ಯ ನಾಯಕಿ, ಸಂಪತ್ ರಾಜ್, ಅಚ್ಯುತ್ ಕುಮಾರ್, ತಾರಾ ಅವರುಗಳು ಸಹ ಸಿನಿಮಾದಲ್ಲಿದ್ದಾರೆ. ಸಿನಿಮಾ ಆಕ್ಷನ್ ಜೊತೆಗೆ ತಾಯಿ ಸೆಂಟಿಮೆಂಟ್ ಕತೆ ಒಳಗೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ