AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ಬಳ್ಳಾರಿ ಜೈಲಿಗೆ ದರ್ಶನ್, ಇಲ್ಲಿದೆ ರೂಟ್​ ಮ್ಯಾಪ್

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ತೂಗುದೀಪ ಅವರನ್ನು ನಾಳೆ (ಆಗಸ್ಟ್ 29) ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ದರ್ಶನ್ ಅನ್ನು ಯಾವ ಮಾರ್ಗವಾಗಿ ಬಳ್ಳಾರಿಗೆ ಕರೆದೊಯ್ಯಲಾಗುತ್ತಿದೆ? ಇಲ್ಲಿದೆ ಮಾಹಿತಿ.

Darshan Thoogudeepa: ಬಳ್ಳಾರಿ ಜೈಲಿಗೆ ದರ್ಶನ್, ಇಲ್ಲಿದೆ ರೂಟ್​ ಮ್ಯಾಪ್
ಮಂಜುನಾಥ ಸಿ.
|

Updated on: Aug 28, 2024 | 6:47 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಆದರೆ ಈ ನಡುವೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಹಾಗೂ ಇತರೆ ಕೆಲವು ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ದರ್ಶನ್ ಹಾಗೂ ಇತರೆ ಕೆಲವರಿಗೆ ವಿಶೇಷ ಆತಿಥ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗುತ್ತಿರುವ ವಿಷಯ ಬಹಿರಂಗವಾದ ಬಳಿಕ ಪೊಲೀಸರ ಮನವಿಯಂತೆ ನ್ಯಾಯಾಲಯವು ಆರೋಪಿಗಳ ವರ್ಗಾವಣೆಗೆ ಅನುಮತಿ ನೀಡಿದೆ. ನಾಳೆ (ಆಗಸ್ಟ್ 29) ರಂದು ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗುತ್ತದೆ.

ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಸಿಕ್ಕ ಪ್ರಕರಣದ ಬಗ್ಗೆ ಎಫ್​ಐಆರ್ ದಾಖಲಾಗಿದ್ದು, ಪ್ರಕರಣ ಕುರಿತಾಗಿ ಇಂದು (ಆಗಸ್ಟ್ 29) ನಟ ದರ್ಶನ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ವಿಚಾರಣೆ ಹಾಗೂ ಸ್ಥಳ ಮಹಜರು ಸಹ ಮಾಡಲಾಗಿದೆ. ಇಂದೇ ಸಂಜೆ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ವರ್ಗ ಮಾಡುವ ಸುದ್ದಿ ಹಬ್ಬಿತ್ತು, ಆದರೆ ಇಂದು ವಿಚಾರಣೆ ನಡೆದಿದ್ದು, ಇನ್ನೂ ಕೆಲವು ಆರೋಪಿಗಳ ವಿಚಾರಣೆ ನಡೆಯಬೇಕಿರುವ ಕಾರಣ ವರ್ಗಾವಣೆಯನ್ನು ನಾಳೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ದರ್ಶನ್ ಮತ್ತು ಗ್ಯಾಂಗ್​ ನ್ಯಾಯಾಂಗ ಬಂಧನ ವಿಸ್ತರಿಸಲು ಪೊಲೀಸರು ನೀಡಿದ ಕಾರಣಗಳೇನು?

ದರ್ಶನ್ ಅವರನ್ನು ನಾಳೆ (ಆಗಸ್ಟ್ 29) ಬೆಂಗಳೂರು, ತುಮಕೂರು, ಹಿರಿಯೂರು, ಚಳ್ಳಕೆರೆ, ರಾಯದುರ್ಗ ಹಾದಿಯಾಗಿ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಅನ್ನು ಸ್ಥಳಾಂತರ ಮಾಡಲಾಗುತ್ತದೆ. ಇಂದೇ ದರ್ಶನ್ ಬಳ್ಳಾರಿಗೆ ಜೈಲಿಗೆ ಬರುತ್ತಾರೆಂದು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂದೆ ಜಮಾವಣೆಗೊಂಡಿದ್ದರು. ಆದರೆ ಇಂದು ದರ್ಶನ್ ಅನ್ನು ಸ್ಥಳಾಂತರ ಮಾಡಲಾಗುತ್ತಿಲ್ಲ ಎನ್ನಲಾಗುತ್ತಿದೆ.

ಇನ್ನು ಬಳ್ಳಾರಿ ಜೈಲಿನಲ್ಲಿ ದರ್ಶನ್ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಲಾಗಿದೆ. ಸಿಸಿಟಿವಿ, ಬಾಡಿ ಕ್ಯಾಮ್ ವ್ಯವಸ್ಥೆಯೂ ಸಹ ಬಳ್ಳಾರಿ ಜೈಲಿನಲ್ಲಿದೆ. ಜಾಮರ್​ಗಳನ್ನು ಸಹ ಪರಿಶೀಲಿಸಲಾಗಿದೆಯಂತೆ. ಬಳ್ಳಾರಿಯ ವಿಶೇಷ ಭದ್ರತಾ ಬ್ಯಾರಕ್ 15 ರಲ್ಲಿ ದರ್ಶನ್ ಅನ್ನು ಇರಿಸಲಾಗುತ್ತದೆ. ಬಳ್ಳಾರಿ ಜೈಲಿನಲ್ಲಿ ಈಗಾಗಲೇ 385 ಮಂದಿ ಕೈದಿಗಳಿದ್ದಾರೆ. 100 ಮಂದಿ ಸಿಬ್ಬಂದಿ ಇದ್ದಾರೆ. ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

1872 ರಲ್ಲಿ ಸ್ಥಾಪಿಸಿದ ಜೈಲು ಇದಾಗಿದ್ದು, ಎರಡನೇ ವಿಶ್ವ ಯುದ್ಧದ ಸಮಯದಲ್ಲಿ ಕೆಲ ವಿದೇಶಿ ಬಂಧಿಗಳನ್ನು ಇದರಲ್ಲಿ ಇರಿಸಲಾಗಿತ್ತಂತೆ. ದ್ರಾವಿಡ ಚಳವಳಿಯ ಹರಕಾರ ಅಣ್ಣಾ ದೊರೈ ಅವರು ಸಹ ಈ ಜೈಲಿನಲ್ಲಿ ದಿನಗಳನ್ನು ಕಳೆದಿದ್ದಾರೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಲ್​ಕೆ ಅಡ್ವಾಣಿ ಅವರನ್ನು ಈ ಜೈಲಿನಲ್ಲಿ ಇಡಲಾಗಿತ್ತು. ಈಗ ಈ ಜೈಲಿನಲ್ಲಿ 385 ಜನ ಕೈದಿಗಳಿದ್ದು, ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ, ಹರ್ಷ ಹತ್ಯೆ ಆರೋಪಿಗಳು ಸಹ ಇಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ