AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಕೋರಿಕೆಗೆ ಕೊನೆಗೂ ಮಣಿದ ದರ್ಶನ್; ಹೆಲ್ತ್ ಬಗ್ಗೆ ಗುಡ್​ನ್ಯೂಸ್

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕು ತಿಂಗಳುಗಳು ಕಳೆದಿವೆ. ಹೊರ ಬರಲು ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರಾದರೂ ಅದು ಸಾಧ್ಯವಾಗುತ್ತಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ಈಗಾಗಲೇ ಕೆಳ ಹಂತದ ಕೋರ್ಟ್​ನಲ್ಲಿ ರಿಜೆಕ್ಟ್ ಆಗಿದೆ. ಈ ಮಧ್ಯೆ ದರ್ಶನ್​ಗೆ ಕೊಂಚ ರಿಲೀಫ್ ಆಗುವಂತಹ ಬೆಳವಣಿಗೆ ನಡೆದಿದೆ.

ವೈದ್ಯರ ಕೋರಿಕೆಗೆ ಕೊನೆಗೂ ಮಣಿದ ದರ್ಶನ್; ಹೆಲ್ತ್ ಬಗ್ಗೆ ಗುಡ್​ನ್ಯೂಸ್
ದರ್ಶನ್
ವಿನಾಯಕ ಬಡಿಗೇರ್​
| Edited By: |

Updated on:Oct 21, 2024 | 12:53 PM

Share

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಎ2 ಆರೋಪಿ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ಅವರಿಗೆ ತೀವ್ರ ಬೆನ್ನು ನೋವು ಉಂಟಾಗಿದೆ. ಅವರಿಗೆ ಎಂಆರ್‌ಐ ಸ್ಕಾನಿಂಗ್​ನ ಅಗತ್ಯವಿದೆ. ಇದನ್ನು ಮಾಡಿಸಲು ವೈದ್ಯರು ಸೂಚಿಸುತ್ತಲೇ ಬಂದಿದ್ದರು. ಆದರೆ, ಇದಕ್ಕೆ ದರ್ಶನ್ ಒಪ್ಪಿರಲಿಲ್ಲ. ಈಗ ಬಳ್ಳಾರಿಯ ವಿಮ್ಸ್‌ನಲ್ಲಿ ಎಂಆರ್‌ಐ ಸ್ಕಾನಿಂಗ್ ಮಾಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ದರ್ಶನ್ ಕೂಡ ಒಪ್ಪಿಗೆ ನೀಡಿದ್ದಾರೆ.

ದರ್ಶನ್ ಬೆನ್ನುನೋವು ಸಮಸ್ಯೆ ಮಿತಿಮೀರಿದೆ. ಫಿಸಿಯೋಥೆರಪಿಯನ್ನು ಈಗಾಗಲೇ ಮಾಡಿಸಲಾಗುತ್ತಿದೆ. ಆದಾಗ್ಯೂ ಬೆನ್ನು ನೋವು ಕಡಿಮೆ ಆಗುತ್ತಿಲ್ಲ. ಹೀಗಾಗಿ ದರ್ಶನ್ ಜೊತೆ ಜೈಲಿನ ಅಧಿಕಾರಿಗಳು ಮಾತನಾಡಿದ್ದು, ಸ್ಕ್ಯಾನಿಂಗ್ ಮಾಡಿಸಲೇಬೇಕು ಎಂದಿದ್ದಾರೆ. ಜೈಲಾಧಿಕಾರಿಗಳ ಮಾತಿಗೆ ದರ್ಶನ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 22ರಂದು ದರ್ಶನ್ ಕುಟುಂಬಸ್ಥರು ಜೈಲಿಗೆ ಭೇಟಿ ನೀಡಲಿದ್ದಾರೆ. ಕುಟುಂಬಸ್ಥರೊಂದಿಗೆ ಮಾತನಾಡಿ ಸ್ಕಾನಿಂಗ್‌ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮಾಧ್ಯದಮವರು ಮುತ್ತಿಕೊಳ್ಳುತ್ತಾರೆ ಹಾಗೂ ಭದ್ರತೆಯ ಸಮಸ್ಯೆ ಆಗುತ್ತದೆ ಎಂದು ದರ್ಶನ್ ಅವರು ಸ್ಕಾನಿಂಗ್ ಬೇಡ ಎನ್ನುತ್ತಿದ್ದರು. ಈಗ ಬೆನ್ನುನೋವು ಕೈಮೀರಿರುವುದರಿಂದ ದರ್ಶನ್ ಒಪ್ಪಿಗೆ ಕೊಡಲೇಬೇಕಾದ ಅನಿವಾರ್ಯತೆ ಮೂಡಿದೆ.

ಈಗಾಗಲೇ ಬಳ್ಳಾರಿಯ ವಿಮ್ಸ್ ನಿರ್ದೇಶಕರ ಜೊತೆ ಮೇಲಾಧಿಕಾರಿಗಳು ಮಾತನಾಡಿದ್ದಾರೆ. ಅಕ್ಟೋಬರ್ 22ರಂದು ಎಂಆರ್‌ಐ ಸ್ಕಾನಿಂಗ್ ಬಗ್ಗೆ ದಿನಾಂಕ ನಿರ್ಧಾರ‌‌ ಮಾಡಲಾಗುತ್ತದೆ. ವಿಮ್ಸ್​​ನಲ್ಲಿ ಸೆಕ್ಯುರಿಟಿ ಕೊಡುವ ಬಗ್ಗೆ, ಸ್ಕಾನಿಂಗ್ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ:  ಕೊಲೆ ಆರೋಪಿ ದರ್ಶನ್​​ಗೆ ಕೊನೆಗೂ ಸಿಕ್ತು ರಿಲೀಫ್; ಫ್ಯಾನ್ಸ್​ಗೆ ಗುಡ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 130 ದಿನಗಳ ಮೇಲಾಗಿದೆ. ದರ್ಶನ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದು, ಕೆಳ ಹಂತದ ಕೋರ್ಟ್​ನಲ್ಲಿ ಇದು ರಿಜೆಕ್ಟ್ ಆಗಿದೆ. ಹೈಕೋರ್ಟ್​ನಲ್ಲಿ ದರ್ಶನ್ ಪರವಾಗಿ ಅರ್ಜಿ ಸಲ್ಲಿಕೆ ಆಗಿದೆ. ಈ ಅರ್ಜಿ ಯಾವಾಗ ವಿಚಾರಣೆಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಅಲ್ಲಿಯೂ ಜಾಮೀನು ಸಿಗದಿದ್ದರೆ ಅವರು ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ. ಅವರ ಅನಾರೋಗ್ಯದ ವಿಚಾರ ಜಾಮೀನು ಪಡೆಯಲು ಪ್ರಮುಖ ಅಸ್ತ್ರವಾಗಿ ಬಳಕೆ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:43 pm, Mon, 21 October 24

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!