AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಕೋರಿಕೆಗೆ ಕೊನೆಗೂ ಮಣಿದ ದರ್ಶನ್; ಹೆಲ್ತ್ ಬಗ್ಗೆ ಗುಡ್​ನ್ಯೂಸ್

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕು ತಿಂಗಳುಗಳು ಕಳೆದಿವೆ. ಹೊರ ಬರಲು ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರಾದರೂ ಅದು ಸಾಧ್ಯವಾಗುತ್ತಿಲ್ಲ. ದರ್ಶನ್ ಅವರ ಜಾಮೀನು ಅರ್ಜಿ ಈಗಾಗಲೇ ಕೆಳ ಹಂತದ ಕೋರ್ಟ್​ನಲ್ಲಿ ರಿಜೆಕ್ಟ್ ಆಗಿದೆ. ಈ ಮಧ್ಯೆ ದರ್ಶನ್​ಗೆ ಕೊಂಚ ರಿಲೀಫ್ ಆಗುವಂತಹ ಬೆಳವಣಿಗೆ ನಡೆದಿದೆ.

ವೈದ್ಯರ ಕೋರಿಕೆಗೆ ಕೊನೆಗೂ ಮಣಿದ ದರ್ಶನ್; ಹೆಲ್ತ್ ಬಗ್ಗೆ ಗುಡ್​ನ್ಯೂಸ್
ದರ್ಶನ್
ವಿನಾಯಕ ಬಡಿಗೇರ್​
| Updated By: ರಾಜೇಶ್ ದುಗ್ಗುಮನೆ|

Updated on:Oct 21, 2024 | 12:53 PM

Share

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಎ2 ಆರೋಪಿ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ಅವರಿಗೆ ತೀವ್ರ ಬೆನ್ನು ನೋವು ಉಂಟಾಗಿದೆ. ಅವರಿಗೆ ಎಂಆರ್‌ಐ ಸ್ಕಾನಿಂಗ್​ನ ಅಗತ್ಯವಿದೆ. ಇದನ್ನು ಮಾಡಿಸಲು ವೈದ್ಯರು ಸೂಚಿಸುತ್ತಲೇ ಬಂದಿದ್ದರು. ಆದರೆ, ಇದಕ್ಕೆ ದರ್ಶನ್ ಒಪ್ಪಿರಲಿಲ್ಲ. ಈಗ ಬಳ್ಳಾರಿಯ ವಿಮ್ಸ್‌ನಲ್ಲಿ ಎಂಆರ್‌ಐ ಸ್ಕಾನಿಂಗ್ ಮಾಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ದರ್ಶನ್ ಕೂಡ ಒಪ್ಪಿಗೆ ನೀಡಿದ್ದಾರೆ.

ದರ್ಶನ್ ಬೆನ್ನುನೋವು ಸಮಸ್ಯೆ ಮಿತಿಮೀರಿದೆ. ಫಿಸಿಯೋಥೆರಪಿಯನ್ನು ಈಗಾಗಲೇ ಮಾಡಿಸಲಾಗುತ್ತಿದೆ. ಆದಾಗ್ಯೂ ಬೆನ್ನು ನೋವು ಕಡಿಮೆ ಆಗುತ್ತಿಲ್ಲ. ಹೀಗಾಗಿ ದರ್ಶನ್ ಜೊತೆ ಜೈಲಿನ ಅಧಿಕಾರಿಗಳು ಮಾತನಾಡಿದ್ದು, ಸ್ಕ್ಯಾನಿಂಗ್ ಮಾಡಿಸಲೇಬೇಕು ಎಂದಿದ್ದಾರೆ. ಜೈಲಾಧಿಕಾರಿಗಳ ಮಾತಿಗೆ ದರ್ಶನ್ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 22ರಂದು ದರ್ಶನ್ ಕುಟುಂಬಸ್ಥರು ಜೈಲಿಗೆ ಭೇಟಿ ನೀಡಲಿದ್ದಾರೆ. ಕುಟುಂಬಸ್ಥರೊಂದಿಗೆ ಮಾತನಾಡಿ ಸ್ಕಾನಿಂಗ್‌ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಮಾಧ್ಯದಮವರು ಮುತ್ತಿಕೊಳ್ಳುತ್ತಾರೆ ಹಾಗೂ ಭದ್ರತೆಯ ಸಮಸ್ಯೆ ಆಗುತ್ತದೆ ಎಂದು ದರ್ಶನ್ ಅವರು ಸ್ಕಾನಿಂಗ್ ಬೇಡ ಎನ್ನುತ್ತಿದ್ದರು. ಈಗ ಬೆನ್ನುನೋವು ಕೈಮೀರಿರುವುದರಿಂದ ದರ್ಶನ್ ಒಪ್ಪಿಗೆ ಕೊಡಲೇಬೇಕಾದ ಅನಿವಾರ್ಯತೆ ಮೂಡಿದೆ.

ಈಗಾಗಲೇ ಬಳ್ಳಾರಿಯ ವಿಮ್ಸ್ ನಿರ್ದೇಶಕರ ಜೊತೆ ಮೇಲಾಧಿಕಾರಿಗಳು ಮಾತನಾಡಿದ್ದಾರೆ. ಅಕ್ಟೋಬರ್ 22ರಂದು ಎಂಆರ್‌ಐ ಸ್ಕಾನಿಂಗ್ ಬಗ್ಗೆ ದಿನಾಂಕ ನಿರ್ಧಾರ‌‌ ಮಾಡಲಾಗುತ್ತದೆ. ವಿಮ್ಸ್​​ನಲ್ಲಿ ಸೆಕ್ಯುರಿಟಿ ಕೊಡುವ ಬಗ್ಗೆ, ಸ್ಕಾನಿಂಗ್ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ:  ಕೊಲೆ ಆರೋಪಿ ದರ್ಶನ್​​ಗೆ ಕೊನೆಗೂ ಸಿಕ್ತು ರಿಲೀಫ್; ಫ್ಯಾನ್ಸ್​ಗೆ ಗುಡ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 130 ದಿನಗಳ ಮೇಲಾಗಿದೆ. ದರ್ಶನ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದು, ಕೆಳ ಹಂತದ ಕೋರ್ಟ್​ನಲ್ಲಿ ಇದು ರಿಜೆಕ್ಟ್ ಆಗಿದೆ. ಹೈಕೋರ್ಟ್​ನಲ್ಲಿ ದರ್ಶನ್ ಪರವಾಗಿ ಅರ್ಜಿ ಸಲ್ಲಿಕೆ ಆಗಿದೆ. ಈ ಅರ್ಜಿ ಯಾವಾಗ ವಿಚಾರಣೆಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಅಲ್ಲಿಯೂ ಜಾಮೀನು ಸಿಗದಿದ್ದರೆ ಅವರು ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ. ಅವರ ಅನಾರೋಗ್ಯದ ವಿಚಾರ ಜಾಮೀನು ಪಡೆಯಲು ಪ್ರಮುಖ ಅಸ್ತ್ರವಾಗಿ ಬಳಕೆ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:43 pm, Mon, 21 October 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ