AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್​ ಫ್ಯಾನ್ಸ್​​ಗೆ ಡಬಲ್ ಸಿಹಿ ಸುದ್ದಿ; ‘ಡೆವಿಲ್’ ಶೂಟ್​ಗೆ ದಿನಾಂಕ ಫಿಕ್ಸ್?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಈಗ ಜಾಮೀನು ಪಡೆದು ಬಿಡುಗಡೆ ಆಗಿದ್ದಾರೆ. ಸದ್ಯ ಅವರು ಮೈಸೂರಿನಲ್ಲಿ ಇದ್ದಾರೆ. ‘ಡೆವಿಲ್’ ಚಿತ್ರೀಕರಣದ ಬಗ್ಗೆ ಈಗ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಚಿತ್ರತಂಡವು ದರ್ಶನ್ ಇಲ್ಲದೆ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಿದೆಯೇ ಎಂಬ ಪ್ರಶ್ನೆ ಮೂಡಿದೆ.

Darshan: ದರ್ಶನ್​ ಫ್ಯಾನ್ಸ್​​ಗೆ ಡಬಲ್ ಸಿಹಿ ಸುದ್ದಿ; ‘ಡೆವಿಲ್’ ಶೂಟ್​ಗೆ ದಿನಾಂಕ ಫಿಕ್ಸ್?
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Dec 21, 2024 | 3:04 PM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದರು. ಇವರ ಬಂಧನ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಪ್ರಕರಣದಲ್ಲಿ ಆರು ತಿಂಗಳ ಬಳಿಕ ದರ್ಶನ್ ಅವರು ಜಾಮೀನು ಪಡೆದಿದ್ದಾರೆ. ಅವರು ಸದ್ಯ ಮೈಸೂರಿನ ಫಾರ್ಮ್​ಹೌಸ್​ನಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಸಾಕು ಪ್ರಾಣಿಗಳ ಜೊತೆ ಕಾಲ ಕಳೆಯುತ್ತಿದ್ದಾರೆ. ಇದು ಒಂದು ಸಿಹಿ ಸುದ್ದಿ ಆದರೆ, ಇನ್ನೊಂದು ಸಿಹಿ ಸುದ್ದಿ ಕೂಡ ಇದೆ. ಅದುವೇ ‘ಡೆವಿಲ್’ ಸಿನಿಮಾದ ಶೂಟಿಂಗ್ ವಿಚಾರ.

ದರ್ಶನ್ ಜೈಲು ಸೇರುವುದಕ್ಕೂ ಮೊದಲೇ ಒಪ್ಪಿಕೊಂಡ ಚಿತ್ರ ‘ಡೆವಿಲ್’. ಈ ಸಿನಿಮಾದ ಶೂಟಿಂಗ್ ಕೂಡ ಕೊಂಚ ಕಂಪ್ಲೀಟ್ ಆಗಿತ್ತು. ಆದರೆ, ದರ್ಶನ್ ಬಂಧನದ ಬಳಿಕ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ನಿಂತು ಹೋಗಿತ್ತು. ‘ಡೆವಿಲ್’ ಚಿತ್ರಕ್ಕೆ ಪ್ರಕಾಶ್ ವೀರ್ ನಿರ್ದೇಶನ ಮಾಡುತ್ತಿದ್ದಾರೆ. ಟಿವಿ9 ಕನ್ನಡ ಡಿಜಿಟಲ್​ಗೆ ಸಿಕ್ಕಿರೋ ಮಾಹಿತಿ ಪ್ರಕಾರ ಈ ಚಿತ್ರಕ್ಕೆ ಶೂಟಿಂಗ್​ಗೆ ಮುಹೂರ್ತ ಫಿಕ್ಸ್ ಆಗಿದೆಯಂತೆ.

ಸಂಕ್ರಾಂತಿ ಹಬ್ಬ ಮುಗಿದ ಬಳಿಕ ಅಂದರೆ ಜನವರಿ 20ರ ನಂತರ ‘ಡೆವಿಲ್’ ಚಿತ್ರದ ಶೂಟಿಂಗ್ ಮತ್ತೆ ಆರಂಭ ಆಗಲಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಕೆಲಸ ಮಾಡುವ ತಾಂತ್ರಿಕ ವರ್ಗದವರಿಗೆ ಈ ಕುರಿತು ಸಂದೇಶ ರವಾನೆ ಆಗಿದೆ ಎನ್ನಲಾಗಿದೆ. ಈ ವಿಚಾರ ಕೇಳಿ ಡಿ ಬಾಸ್ ಅಭಿಮಾನಿಗಳು ಸಂಭ್ರಮಿಸೋದು ಪಕ್ಕಾ.

ಇದನ್ನೂ ಓದಿ: ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ

ಸದ್ಯ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅದು ಇನ್ನೂ ಪೂರ್ಣ ಪ್ರಮಾಣದಲ್ಲಿ ವಾಸಿ ಆಗಿಲ್ಲ. ಇದರ ಜೊತೆಗೆ ಜೈಲಿನಲ್ಲಿ ಇದ್ದ ಕಾರಣಕ್ಕೆ ಅವರು ತೂಕ ಕಳೆದುಕೊಂಡ ಬಗ್ಗೆ ವರದಿ ಆಗಿತ್ತು. ಹೀಗಾಗಿ, ಮತ್ತೆ ತೂಕ ಏರಿಸಿಕೊಳ್ಳುವ ಅಗತ್ಯ ಇದೆ. ಈ ಕಾರಣಕ್ಕೆ ‘ಡೆವಿಲ್’ ತಂಡದವರು ದರ್ಶನ್ ಇಲ್ಲದ ದೃಶ್ಯಗಳನ್ನು ಶೂಟ್ ಮಾಡಿಕೊಂಡು ಅವರು ಗುಣಮುಖರಾದ ಬಳಿಕ ದರ್ಶನ್ ಭಾಗದ ಶೂಟ್ ಪೂರ್ಣಗೊಳಿಸುತ್ತಾರಾ ಎನ್ನುವ ಪ್ರಶ್ನೆಯೂ ಇದೆ. ಸಂಕ್ರಾಂತಿ ಬಳಿಕ ಈ ಬಗ್ಗೆ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ