AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳನ್ನು ತಂದೆಯಂತೆ ಕಂಡ ದರ್ಶನ್; ಆದರೆ ಅವರು ತಿದ್ದುವ ಕೆಲಸ ಮಾಡಲೇ ಇಲ್ಲ

ದರ್ಶನ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ತಂದೆ ಇಲ್ಲದ ಕೊರಗಿನ ಬಗ್ಗೆ ಹೇಳಿದ್ದರು. ಜೊತೆಗೆ ಅಭಿಮಾನಿಗಳು ನನ್ನನ್ನು ತಿದ್ದುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದರು. ‘ಇವತ್ತು ನನಗೆ ತಂದೆ ಇಲ್ಲ. ನನಗೆ ಹೇಳೋರು ಯಾರೂ ಇಲ್ಲ ಎಂಬಂತಾಗಿದೆ. ನನಗೆ ಅಭಿಮಾನಿಗಳೇ ಎಲ್ಲರೂ’ ಎಂದಿದ್ದರು ಅವರು.

ಅಭಿಮಾನಿಗಳನ್ನು ತಂದೆಯಂತೆ ಕಂಡ ದರ್ಶನ್; ಆದರೆ ಅವರು ತಿದ್ದುವ ಕೆಲಸ ಮಾಡಲೇ ಇಲ್ಲ
ದರ್ಶನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 17, 2024 | 8:36 AM

Share

ನಟ ದರ್ಶನ್ (Darshan) ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ಹಲವು ಸಿನಿಮಾಗಳಲ್ಲಿ ನಟಿಸಿ ತೂಗುದೀಪ ಫೇಮಸ್ ಆಗಿದ್ದರು. ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇತ್ತು. ಅವರ ಮಗನಾಗಿ ಜನಿಸಿದ್ದು ದರ್ಶನ್. ಅವರು ಲೈಟ್​ಬಾಯ್ ಆಗಿ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಸ್ಟಾರ್ ಹೀರೋ ಆದರು. ದರ್ಶನ್ 18 ವರ್ಷದವನಿದ್ದಾಗಲೇ ತೂಗುದೀಪ ಶ್ರೀನಿವಾಸ್ ಅವರು ನಿಧನ ಹೊಂದಿದರು. ಹೀಗಾಗಿ, ಅಪ್ಪನ ಮಾರ್ಗದರ್ಶನ ದರ್ಶನ್​ಗೆ ಸರಿಯಾಗಿ ಸಿಗಲೇ ಇಲ್ಲ. ಈ ಕೊರಗು ದರ್ಶನ್ ಅವರಿಗೆ ಯವಾಗಲೂ ಇತ್ತು. ಈ ಕೊರಗನ್ನು ಫ್ಯಾನ್ಸ್ ನೀಗಿಸಬೇಕಿತ್ತು. ಆದರೆ, ದರ್ಶನ್ ಮಾಡಿದ್ದೆಲ್ಲ ಸರಿ ಎಂದರು ಅಭಿಮಾನಿಗಳು. ಇದೇ ದರ್ಶನ್​ಗೆ ಮುಳುವಾಗಿದೆ.

ಹಳೆಯ ಸಂದರ್ಶನ ವೈರಲ್

ನಟ ದರ್ಶನ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ತಂದೆ ಇಲ್ಲದ ಕೊರಗಿನ ಬಗ್ಗೆ ಹೇಳಿದ್ದರು. ಜೊತೆಗೆ ಅಭಿಮಾನಿಗಳು ನನ್ನನ್ನು ತಿದ್ದುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದರು. ‘ಇವತ್ತು ನನಗೆ ತಂದೆ ಇಲ್ಲ. ನನಗೆ ಹೇಳೋರು ಯಾರೂ ಇಲ್ಲ ಎಂಬಂತಾಗಿದೆ. ನಾನು ಆಡಿದ್ದೇ ಆಟ ಆಗಿಬಿಟ್ಟಿದೆ. ಅವರು ಹಲವು ವರ್ಷ ಚಿತ್ರಂಗದಲ್ಲಿದ್ದರು. ತಪ್ಪು ಒಪ್ಪು ಗೊತ್ತಿರುತ್ತಿತ್ತು. ಆದರೆ, ತಪ್ಪು ಮಾಡ್ತಿದೀಯಾ ಎಂದು ಹೇಳಲು ಯಾರೂ ಇಲ್ಲ. ನನ್ನ ಅದೃಷ್ಟಕ್ಕೆ ಅಭಿಮಾನಿಗಳು ಇದ್ದಾರೆ. ಅವರು ನನ್ನ ತಪ್ಪನ್ನು ತಿದ್ದುತ್ತಾರೆ. ಸಂದರ್ಶನ ನೋಡಿ ಕರೆ ಮಾಡಿ ಮಾಡಿಯೇ ಮಾಡುತ್ತಾರೆ. ಅದರಿಂದ ನಾನು ತಿದ್ದುಕೊಳ್ಳುತ್ತೇನೆ’ ಎಂದಿದ್ದರು ದರ್ಶನ್.

ಈಗ ಹಾಗಿಲ್ಲ..

ದರ್ಶನ್ ಅವರ ಅಭಿಮಾನಿಗಳು ಈಗ ಬದಲಾಗಿದ್ದಾರೆ. ಮೊದಲಿನ ರೀತಿಯಲ್ಲಿ ಇಲ್ಲ. ದರ್ಶನ್ ಏನೇ ಮಾಡಿದರೂ ಅದನ್ನು ಸರಿ ಎಂದೇ ಹೇಳುತ್ತಾರೆ. ಈಗ ನಡೆದಿರೋ ಕೊಲೆ ಘಟನೆ ಒಳ್ಳೆಯ ಉದಾಹರಣೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸುದ್ದಿ ಬಿತ್ತರ ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ಅವರು ಕಿಡಿಕಾರುತ್ತಿದ್ದಾರೆ. ಕೆಲವು ಮಾಧ್ಯಮ ವರದಿಗಾರರ ಮೇಲೆ ಹಲ್ಲೆ ಮಾಡಿದ ಘಟನೆಯೂ ನಡೆದಿದೆ.

ಇದನ್ನೂ ಓದಿ: ‘ಎಷ್ಟೂ ಅಂತ ತಡ್ಕೋತಾರೆ?’; ಕೊಲೆ ಕೇಸ್​ನಲ್ಲಿ ದರ್ಶನ್​ನ ಬೆಂಬಲಿಸಿ ಮಾತನಾಡಿದ ಪರಭಾಷಾ ನಟಿ

‘ನಮ್ಮ ಬಾಸ್ ಏನೆ ಮಾಡಿದರೂ ಅದನ್ನು ನಾವು ಬೆಂಬಲಿಸುತ್ತೇವೆ’ ಎಂದು ಕೆಲವರು ಓಪನ್ ಆಗಿ ಹೇಳಿಕೆ ನೀಡಿದ್ದಾರೆ. ‘ನಮ್ಮ ಬಾಸ್ ಕುಡಿದ ಏಟಲ್ಲಿ ಒಂದೆರಡು ಪೆಟ್ಟು ಕೊಟ್ಟಿರಬಹುದು’ ಎಂದು ಕೆಲ ಅಭಿಮಾನಿಗಳು ದರ್ಶನ್​ನ ಸಮರ್ಥಿಸಿಕೊಂಡಿದ್ದಿದೆ. ಹೀಗಾಗಿ, ದರ್ಶನ್ ಮಾಡಿದ್ದು ತಪ್ಪು ಎಂದು ಹೇಳಿರುವ ಅಭಿಮಾನಿಗಳು ಹುಡುಕಿದರೂ ಒಬ್ಬರಾದರೂ ಸಿಗುತ್ತಾರೋ ಇಲ್ಲವೋ. ಇನ್ನು, ಸಿನಿಮಾ ಶೂಟಿಂಗ್ ಎನ್ನುವ ರೀತಿ ಪೊಲೀಸ್ ಠಾಣೆಯ ಮುಂದೆ, ಕೋರ್ಟ್ ಮುಂದೆ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ನೆರೆಯುತ್ತಿದ್ದಾರೆ. ದರ್ಶನ್ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಭಿಮಾನಿಗಳು ನನ್ನ ಪರವಾಗಿದ್ದಾರಲ್ಲ ಎನ್ನುವ ಧೈರ್ಯ ದರ್ಶನ್​ಗೆ ಸಿಕ್ಕಿರುತ್ತದೆ. ಹೀಗಾಗಿ, ಇಲ್ಲಿ ತಿದ್ದಿಕೊಳ್ಳುವ ಪ್ರಮೇಯವೇ ಬರುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?