ಸರ್ಕಾರಿ ವಕೀಲರನ್ನು ಬದಲಿಸಲು ದರ್ಶನ್ ಕಸರತ್ತು; ಲಾಬಿಗೆ ಕಿಮ್ಮತ್ತು ಕೊಡದ ಸರ್ಕಾರ

| Updated By: ರಾಜೇಶ್ ದುಗ್ಗುಮನೆ

Updated on: Sep 09, 2024 | 8:37 AM

ಸರ್ಕಾರದ ಮಟ್ಟದಲ್ಲಿ ದರ್ಶನ್ ಮತ್ತು ಆಪ್ತರು ಲಾಬಿ ಮಾಡಲು ಮುಂದಾಗಿದ್ದರು. ದರ್ಶನ್ ಪ್ರಯತ್ನಕ್ಕೆ ಸರ್ಕಾರ ತಪರಾಕಿ ಕೊಟ್ಟಿದೆ. ಇವರ ಲಾಬಿಗೆ ಸರ್ಕಾರ ಮಣಿಯಲೇ ಇಲ್ಲ. ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ. ‘ಎಸ್​ಪಿಪಿ ಪ್ರಸನ್ನ ಕುಮಾರ್ ಬದಲಾಯಿಸುವ ಪ್ರಶ್ನೆಯೇ ಇಲ್ಲ’ ಎಂದು ಸರ್ಕಾರ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಸರ್ಕಾರಿ ವಕೀಲರನ್ನು ಬದಲಿಸಲು ದರ್ಶನ್ ಕಸರತ್ತು; ಲಾಬಿಗೆ ಕಿಮ್ಮತ್ತು ಕೊಡದ ಸರ್ಕಾರ
ಸರ್ಕಾರಿ ವಕೀಲರನ್ನು ಬದಲಿಸಲು ದರ್ಶನ್ ಕಸರತ್ತು; ಲಾಬಿಗೆ ಕಿಮ್ಮತ್ತು ಕೊಡದ ಸರ್ಕಾರ
Follow us on

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಹೊರ ಬಂದರೆ ಸಾಕು ಎಂದುಕೊಳ್ಳುತ್ತಾ ಇದ್ದಾರೆ. ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ಗ್ಯಾಂಗ್ ಒಂದು ದೊಡ್ಡ ಸಂಚು ರೂಪಿಸಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಆದರೆ, ದರ್ಶನ್ ಹಾಗೂ ಅವರ ಆಪ್ತರು ಮಾಡಿದ ಲಾಬಿಗೆ ಸರ್ಕಾರ ಕಿಮ್ಮತ್ತು ಕೊಡಲಿಲ್ಲ. ಈ ಮೊದಲು ದರ್ಶನ್ ಜೈಲಿನಲ್ಲಿ ಸವಲತ್ತು ಪಡೆದಿದ್ದ ವಿಚಾರ ಚರ್ಚೆ ಹುಟ್ಟುಹಾಕಿತ್ತು. ಈಗ ಅವರ ಮತ್ತೊಂದು ಕುತಂತ್ರ ಅನೇಕರಿಗೆ ಶಾಕಿಂಗ್ ಎನಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್ ಅವರು ದರ್ಶನ್ ವಿರುದ್ಧ ವಾದ ಮಂಡಿಸುತ್ತಿದ್ದಾರೆ. ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್​ಪಿಪಿ) ಆಗಿ ನೇಮಕ ಮಾಡಿದ್ದು ದರ್ಶನ್ ಹಾಗೂ ಆಪ್ತ ಬಳಗಕ್ಕೆ ಆತಂಕ ತಂದಿದೆ. ವಕೀಲ ಪ್ರಸನ್ನ ಕುಮಾರ್ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಇದು ದರ್ಶನ್ ಚಿಂತೆಗೆ ಕಾರಣ ಆಗಿದೆ. ತಮ್ಮ ಆಪ್ತರ ಮೂಲಕ ಪ್ರಸನ್ನ ಕುಮಾರ್ ಅವರನ್ನು ಬದಲಾಯಿಸಲು ಕಸರತ್ತು ನಡೆಸಿದ್ದರು.

ದರ್ಶನ್ ಮತ್ತು ಆಪ್ತರು ಸರ್ಕಾರದ ಮಟ್ಟದಲ್ಲಿ ಲಾಬಿ ಮಾಡಲು ಮುಂದಾಗಿದ್ದರು. ದರ್ಶನ್ ಪ್ರಯತ್ನಕ್ಕೆ ಸರ್ಕಾರ ತಪರಾಕಿ ಕೊಟ್ಟಿದೆ. ಇವರ ಲಾಬಿಗೆ ಸರ್ಕಾರ ಮಣಿಯಲಿಲ್ಲ. ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ‘ಎಸ್​ಪಿಪಿ ಪ್ರಸನ್ನ ಕುಮಾರ್ ಬದಲಾಯಿಸುವ ಪ್ರಶ್ನೆಯೇ ಇಲ್ಲ’ ಎಂದು ಸರ್ಕಾರ ಹೇಳಿದೆ ಎಂಬುದಾಗಿ ವರದಿ ಆಗಿದೆ.

ಇದನ್ನೂ ಓದಿ: ದರ್ಶನ್‌ ರಕ್ಷಣೆಗೆ ನಡೆಯುತ್ತಿದೆಯಾ ತೆರೆಮರೆ ಕಸರತ್ತು, ಎಸ್​​ಪಿಪಿ ಪ್ರಸನ್ನಕುಮಾರ್​ ಬದಲಾವಣೆಗೆ ಚಿಂತನೆ!

ಸದ್ಯ ಎಷ್ಟೇ ಕಸರತ್ತು ಮಾಡಿದರೂ ದರ್ಶನ್ ಮತ್ತು ಗ್ಯಾಂಗ್ ತಂತ್ರ ಫಲಿಸಿಲ್ಲ. ದರ್ಶನ್ ಪ್ರಕರಣದಲ್ಲಿ ಎಎಸ್​ಪಿಪಿ ಪ್ರಸನ್ನ ಕುಮಾರ್ ಪರ ಅಧಿಕಾರಿ ವರ್ಗ ಕೂಡ ಗಟ್ಟಿಯಾಗಿ ನಿಂತಿದೆ. ದರ್ಶನ್ ಯಾವುದೇ ಲಾಬಿಗೂ ಸರ್ಕಾರ ಕಿಮ್ಮತ್ತು ಕೊಡುತ್ತಿಲ್ಲ. ಪ್ರಯತ್ನ ಫಲಿಸದ ಹಿನ್ನಲೆಯಲ್ಲಿ ದರ್ಶನ್ ಆಪ್ತರು ಸುಮ್ಮನಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.