AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ.

ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ
ರಾಜೇಶ್ ದುಗ್ಗುಮನೆ
|

Updated on:Jun 13, 2024 | 2:12 PM

Share

ನಟ ದರ್ಶನ್ (Darshan) ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಇವರು ಪ್ರಮುಖ ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಈ ಪ್ರಕರಣದಿಂದ ವಿಜಯಲಕ್ಷ್ಮಿ ಅವರು ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್/ಡಿ ಆ್ಯಕ್ಟೀವೇಟ್ ಮಾಡಿದ್ದಾರೆ.

ಈ ರೀತಿ ಘಟನೆಗಳು ನಡೆದಾಗ ಸಹಜವಾಗಿಯೇ ಅಭಿಮಾನಿಗಳು ವಿಜಯಲಕ್ಷ್ಮಿ ಅವರಿಗೆ ಮೆಸೇಜ್ ಮಾಡುತ್ತಾರೆ. ಸಾಕಷ್ಟು ವದಂತಿಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಕಣ್ಣೆದುರು ಕಾಣುತ್ತದೆ. ಇದೆಲ್ಲವೂ ಮತ್ತಷ್ಟು ಚುಚ್ಚುತ್ತದೆ. ಈ ಕಾರಣಕ್ಕೆ ವಿಜಯಲಕ್ಷ್ಮಿ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಫಿಲ್ಮ್​ ಚೇಂಬರ್​ನಲ್ಲಿಂದು ಮಹತ್ವದ ಸಭೆ; ನಿರ್ಧಾರವಾಗಲಿದೆ ದರ್ಶನ್ ಸಿನಿ ಭವಿಷ್ಯ

ದರ್ಶನ್ ಅರೆಸ್ಟ್ ಆದ ಬಳಿಕ ಮೊದಲು ಪ್ರಾಫೈಲ್ ಪಿಕ್ಚರ್​ನ ವಿಜಯಲಕ್ಷ್ಮಿ ಅವರು ತೆಗೆದಿದ್ದರು. ಆ ಬಳಿಕ ದುಬೈ ಟ್ರಿಪ್ ತೆರಳಿದ ಫೋಟೋಗಳನ್ನು ಅವರು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ದುಬೈಗೆ ತೆರಳಿದ್ದ ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:08 pm, Thu, 13 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More