ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ.

ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ
Follow us
|

Updated on:Jun 13, 2024 | 2:12 PM

ನಟ ದರ್ಶನ್ (Darshan) ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಇವರು ಪ್ರಮುಖ ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಈ ಪ್ರಕರಣದಿಂದ ವಿಜಯಲಕ್ಷ್ಮಿ ಅವರು ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್/ಡಿ ಆ್ಯಕ್ಟೀವೇಟ್ ಮಾಡಿದ್ದಾರೆ.

ಈ ರೀತಿ ಘಟನೆಗಳು ನಡೆದಾಗ ಸಹಜವಾಗಿಯೇ ಅಭಿಮಾನಿಗಳು ವಿಜಯಲಕ್ಷ್ಮಿ ಅವರಿಗೆ ಮೆಸೇಜ್ ಮಾಡುತ್ತಾರೆ. ಸಾಕಷ್ಟು ವದಂತಿಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಕಣ್ಣೆದುರು ಕಾಣುತ್ತದೆ. ಇದೆಲ್ಲವೂ ಮತ್ತಷ್ಟು ಚುಚ್ಚುತ್ತದೆ. ಈ ಕಾರಣಕ್ಕೆ ವಿಜಯಲಕ್ಷ್ಮಿ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಫಿಲ್ಮ್​ ಚೇಂಬರ್​ನಲ್ಲಿಂದು ಮಹತ್ವದ ಸಭೆ; ನಿರ್ಧಾರವಾಗಲಿದೆ ದರ್ಶನ್ ಸಿನಿ ಭವಿಷ್ಯ

ದರ್ಶನ್ ಅರೆಸ್ಟ್ ಆದ ಬಳಿಕ ಮೊದಲು ಪ್ರಾಫೈಲ್ ಪಿಕ್ಚರ್​ನ ವಿಜಯಲಕ್ಷ್ಮಿ ಅವರು ತೆಗೆದಿದ್ದರು. ಆ ಬಳಿಕ ದುಬೈ ಟ್ರಿಪ್ ತೆರಳಿದ ಫೋಟೋಗಳನ್ನು ಅವರು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ದುಬೈಗೆ ತೆರಳಿದ್ದ ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:08 pm, Thu, 13 June 24

ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ದಿವ್ಯ ನಿರ್ಲಕ್ಷ್ಯ ತೊರಿ ರನೌಟ್​ಗೆ ಬಲಿಯಾದ ಕಿವೀಸ್ ನಾಯಕಿ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ