AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್

ಪೊಲೀಸ್​ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಒಂದು ಪ್ರಮುಖ ಪ್ರಕ್ರಿಯೆ ಮುಗಿಯಬೇಕಿದೆ. ಈಗ ವಿಜಯಲಕ್ಷ್ಮೀ ಅವರು ದರ್ಶನ್​ನ ಭೇಟಿ ಮಾಡಬೇಕು ಎಂದರೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರಳಬೇಕು.

ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್
ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್
ರಾಜೇಶ್ ದುಗ್ಗುಮನೆ
|

Updated on: Aug 28, 2024 | 7:24 AM

Share

ದರ್ಶನ್ ಅವರು ಇನ್ನು ಕೆಲವೇ ಗಂಟೆಗಳಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿರುವುದರಿಂದ ಈ ರೀತಿ ಮಾಡಲಾಗುತ್ತಿದೆ. ದರ್ಶನ್ ಅವರು ಬಳ್ಳಾರಿಗೆ ಶಿಫ್ಟ್ ಆಗುತ್ತಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮೀಗೆ ಟೆನ್ಷನ್ ಶುರುವಾಗಿದೆ. ಅವರು ಪತಿಯನ್ನು ನೋಡಬೇಕು ಎಂದರೆ 300 ಕಿ.ಮೀ ಪ್ರಯಾಣ ಮಾಡಬೇಕು. ಪ್ರತಿವಾರ ಪ್ರಯಾಣ ಮಾಡೋದು ಕಷ್ಟ ಆಗಬಹುದು.

ಅರೆಸ್ಟ್ ಆದಾಗಿನಿಂದ ದರ್ಶನ್ ಅವರನ್ನು ವಿಜಯಲಕ್ಷ್ಮೀ ಈವರೆಗೆ 8ಕ್ಕೂ ಹೆಚ್ಚುಬಾರಿ ಭೇಟಿ ಮಾಡಿ ಬಂದಿದ್ದಾರೆ. ಅವರ ಜೊತೆ ಮಗ ವಿನೀಶ್ ಕೂಡ ಇರುತ್ತಿದ್ದರು. ಇವರ ಜೊತೆ ಇತರ ಸೆಲೆಬ್ರಿಟಿಗಳು ಕೂಡ ಆಗಮಿಸಿದ್ದು ಇದೆ. ಈಗ ವಿಜಯಲಕ್ಷ್ಮೀ ಅವರು ದರ್ಶನ್​ನ ಭೇಟಿ ಮಾಡಬೇಕು ಎಂದರೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರಳಬೇಕು.

ದರ್ಶನ್ ಅವರು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೊತೆ ಆಪ್ತತೆ ಬೆಳೆಸಿಕೊಂಡಿದ್ದರು. ಅವರಿಂದ ಸಾಕಷ್ಟು ಸವಲತ್ತುಗಳನ್ನು ದರ್ಶನ್ ಪಡೆದುಕೊಂಡಿದ್ದರು. ಇದು ಬೆಳಕಿಗೆ ಬಂದ ಬೆನ್ನಲ್ಲೇ ತನಿಖೆ ಆರಂಭ ಆಗಿದೆ. ದರ್ಶನ್ ಗ್ಯಾಂಗ್​ನ ಒಡೆಯಲಾಗಿದೆ. ಇದು ದರ್ಶನ್ ಅವರನ್ನು ಮತ್ತಷ್ಟು ಕುಗ್ಗಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನು, ದರ್ಶನ್ ಅವರು ಮನೆ ಊಟಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ಅವರು ಜೈಲಿನಲ್ಲಿ ಊಟವನ್ನು ಹೊರಗಿನಿಂದ ತರಿಸಿಕೊಳ್ಳುತ್ತಿದ್ದರು ಎನ್ನುವ ವಿಚಾರ ಬಯಲಾಗಿರುವುದರಿಂದ ಕೋರ್ಟ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ. ಪವನ್ , ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಸ್ಥಳಾಂತರ ಆಗಲಿದ್ದಾರೆ. ಶಿವಮೊಗ್ಗ ಜೈಲಿಗೆ ಜಗದೀಶ್​, ಧಾರವಾಡ ಜೈಲಿಗೆ ಧನರಾಜ್​ ಶಿಫ್ಟ್ ಆಗಲಿದ್ದಾರೆ. ವಿಜಯಪುರ ಜೈಲಿಗೆ ವಿನಯ್​ ಸ್ಥಳಾಂತರ ಆಗಬೇಕಿದೆ. ನಾಗರಾಜ್​ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ