AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್

ಪೊಲೀಸ್​ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಒಂದು ಪ್ರಮುಖ ಪ್ರಕ್ರಿಯೆ ಮುಗಿಯಬೇಕಿದೆ. ಈಗ ವಿಜಯಲಕ್ಷ್ಮೀ ಅವರು ದರ್ಶನ್​ನ ಭೇಟಿ ಮಾಡಬೇಕು ಎಂದರೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರಳಬೇಕು.

ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್
ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್
ರಾಜೇಶ್ ದುಗ್ಗುಮನೆ
|

Updated on: Aug 28, 2024 | 7:24 AM

Share

ದರ್ಶನ್ ಅವರು ಇನ್ನು ಕೆಲವೇ ಗಂಟೆಗಳಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿರುವುದರಿಂದ ಈ ರೀತಿ ಮಾಡಲಾಗುತ್ತಿದೆ. ದರ್ಶನ್ ಅವರು ಬಳ್ಳಾರಿಗೆ ಶಿಫ್ಟ್ ಆಗುತ್ತಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮೀಗೆ ಟೆನ್ಷನ್ ಶುರುವಾಗಿದೆ. ಅವರು ಪತಿಯನ್ನು ನೋಡಬೇಕು ಎಂದರೆ 300 ಕಿ.ಮೀ ಪ್ರಯಾಣ ಮಾಡಬೇಕು. ಪ್ರತಿವಾರ ಪ್ರಯಾಣ ಮಾಡೋದು ಕಷ್ಟ ಆಗಬಹುದು.

ಅರೆಸ್ಟ್ ಆದಾಗಿನಿಂದ ದರ್ಶನ್ ಅವರನ್ನು ವಿಜಯಲಕ್ಷ್ಮೀ ಈವರೆಗೆ 8ಕ್ಕೂ ಹೆಚ್ಚುಬಾರಿ ಭೇಟಿ ಮಾಡಿ ಬಂದಿದ್ದಾರೆ. ಅವರ ಜೊತೆ ಮಗ ವಿನೀಶ್ ಕೂಡ ಇರುತ್ತಿದ್ದರು. ಇವರ ಜೊತೆ ಇತರ ಸೆಲೆಬ್ರಿಟಿಗಳು ಕೂಡ ಆಗಮಿಸಿದ್ದು ಇದೆ. ಈಗ ವಿಜಯಲಕ್ಷ್ಮೀ ಅವರು ದರ್ಶನ್​ನ ಭೇಟಿ ಮಾಡಬೇಕು ಎಂದರೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರಳಬೇಕು.

ದರ್ಶನ್ ಅವರು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೊತೆ ಆಪ್ತತೆ ಬೆಳೆಸಿಕೊಂಡಿದ್ದರು. ಅವರಿಂದ ಸಾಕಷ್ಟು ಸವಲತ್ತುಗಳನ್ನು ದರ್ಶನ್ ಪಡೆದುಕೊಂಡಿದ್ದರು. ಇದು ಬೆಳಕಿಗೆ ಬಂದ ಬೆನ್ನಲ್ಲೇ ತನಿಖೆ ಆರಂಭ ಆಗಿದೆ. ದರ್ಶನ್ ಗ್ಯಾಂಗ್​ನ ಒಡೆಯಲಾಗಿದೆ. ಇದು ದರ್ಶನ್ ಅವರನ್ನು ಮತ್ತಷ್ಟು ಕುಗ್ಗಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನು, ದರ್ಶನ್ ಅವರು ಮನೆ ಊಟಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ಅವರು ಜೈಲಿನಲ್ಲಿ ಊಟವನ್ನು ಹೊರಗಿನಿಂದ ತರಿಸಿಕೊಳ್ಳುತ್ತಿದ್ದರು ಎನ್ನುವ ವಿಚಾರ ಬಯಲಾಗಿರುವುದರಿಂದ ಕೋರ್ಟ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ. ಪವನ್ , ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಸ್ಥಳಾಂತರ ಆಗಲಿದ್ದಾರೆ. ಶಿವಮೊಗ್ಗ ಜೈಲಿಗೆ ಜಗದೀಶ್​, ಧಾರವಾಡ ಜೈಲಿಗೆ ಧನರಾಜ್​ ಶಿಫ್ಟ್ ಆಗಲಿದ್ದಾರೆ. ವಿಜಯಪುರ ಜೈಲಿಗೆ ವಿನಯ್​ ಸ್ಥಳಾಂತರ ಆಗಬೇಕಿದೆ. ನಾಗರಾಜ್​ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ