AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಬಂದ ಅಮವಾಸ್ಯೆ, ದರ್ಶನ್ ಕಾರ್ಯಯೋಜನೆಯಲ್ಲಿ ಬದಲಾವಣೆ

Darshan Thoogudeepa: ಅನಾರೋಗ್ಯದಿಂದ ಬಳಲುತ್ತಿದ್ದ ದರ್ಶನ್ ತೂಗುದೀಪ, ಚಿಕಿತ್ಸೆ ಪಡೆಯುವ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಮನೆಗೆ ಬಂದಿದ್ದಾರೆ. ಆದರೆ ದರ್ಶನ್ ಇನ್ನೂ ಕೆಲವು ದಿನ ಆಸ್ಪತ್ರೆಗೆ ಹೋಗುತ್ತಿಲ್ಲ.

ಅಡ್ಡಬಂದ ಅಮವಾಸ್ಯೆ, ದರ್ಶನ್ ಕಾರ್ಯಯೋಜನೆಯಲ್ಲಿ ಬದಲಾವಣೆ
ದರ್ಶನ್
ಮಂಜುನಾಥ ಸಿ.
|

Updated on:Oct 31, 2024 | 1:22 PM

Share

ಸುಮಾರು ಐದು ತಿಂಗಳ ಜೈಲು ವಾಸದ ಬಳಿಕ ನಟ ದರ್ಶನ್ ಗೆ ಜಾಮೀನು ದೊರೆತಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್​ಗೆ ವೈದ್ಯಕೀಯ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಲಾಗಿದೆ. ಜಾಮೀನು ಆರುವಾರಗಳ ಮಾತ್ರವೇ ಇರಲಿದ್ದು, ಈ ಆರು ವಾರಗಳಲ್ಲಿ ಚಿಕಿತ್ಸೆ ಮುಗಿಸಿ ಮರಳಿ ಜೈಲು ಸೇರಬೇಕಿದೆ. ಅಲ್ಲದೆ ನ್ಯಾಯಾಲಯ ವಿಧಿಸಿರುವ ಷರತ್ತಿನಂತೆ ಒಂದು ವಾರದ ಒಳಗಾಗಿ ಚಿಕಿತ್ಸೆಯ ಕುರಿತು ಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.

ದರ್ಶನ್ ನಿನ್ನೆ (ಅಕ್ಟೋಬರ್ 30) ತಡರಾತ್ರಿ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯ ಬದಲಾಗಿ ತಮ್ಮ ಪತ್ನಿ ನೆಲೆಸಿರುವ ಮನೆಗೆ ದರ್ಶನ್ ಹೋಗಿದ್ದಾರೆ. ಜೈಲಿನಿಂದ ಬಂದ ಕೂಡಲೇ ದರ್ಶನ್ ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ದರ್ಶನ್ ಆಸ್ಪತ್ರೆಗೆ ಹೋಗುತ್ತಿಲ್ಲ. ಇಂದು ಮಾತ್ರವಲ್ಲ ಇನ್ನೂ ಎರಡು ದಿನಗಳ ಕಾಲ ದರ್ಶನ್ ಆಸ್ಪತ್ರೆಗೆ ಹೋಗುತ್ತಿಲ್ಲ. ಇದಕ್ಕೆ ಕಾರಣವೂ ಇದೆ.

ಇಂದು (ಅಕ್ಟೋಬರ್ 31) ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬ. ಆದ ಕಾರಣ ಇಂದು ಮಗನ ಜೊತೆ, ಪತ್ನಿಯ ಜೊತೆಗೆ ಸಮಯ ಕಳೆಯಲಿದ್ದಾರೆ. ನಾಳೆ ದೀಪಾವಳಿ ಇದ್ದು, ಮನೆಯವರೊಟ್ಟಿಗೆ ದೀಪಾವಳಿ ಆಚರಣೆ ಮಾಡಲಿದ್ದಾರೆ. ಇಂದು ಬೆಳಿಗ್ಗೆಯಷ್ಟೆ ರಾಜರಾಜೇಶ್ವರಿನಗರದ ಮನೆಯಿಂದ ಎಲ್ಲ ಕಾರುಗಳನ್ನು ಸಹ ದರ್ಶನ್ ತಮ್ಮ ಪತ್ನಿಯ ಮನೆಗೆ ತರಿಸಿಕೊಂಡಿದ್ದು, ಎಲ್ಲದಕ್ಕೂ ಪೂಜೆ ಮಾಡಿ ಹಬ್ಬ ಆಚರಣೆ ಮಾಡಲಿದ್ದಾರೆ. ಆ ನಂತರವೇ ದರ್ಶನ್ ಆಸ್ಪತ್ರೆಗೆ ತೆರಳಲಿದ್ದಾರೆ.

ಇದನ್ನೂ ಓದಿ:ದರ್ಶನ್​ಗೆ ಶೀಘ್ರವೇ ಬಿಗ್ ಶಾಕ್; ಬೆಂಗಳೂರು ಪೊಲೀಸರಿಂದ ಮಹತ್ವದ ನಿರ್ಧಾರ

ಅಮವಾಸ್ಯೆ ಇರುವ ಕಾರಣ ಅಮವಾಸ್ಯೆ ಕಳೆದುಕೊಂಡು ದರ್ಶನ್ ಆಸ್ಪತ್ರೆಗೆ ಹೋಗಲಿದ್ದಾರೆ. ಅಲ್ಲಿ ವೈದ್ಯರೊಟ್ಟಿಗೆ ಚರ್ಚೆ ಮಾಡಿ ಮುಂದಿನ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಈಗ ಪತ್ನಿಯ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕೆಲವು ಔಷಧ ಹಾಗೂ ಬೆನ್ನಿಗೆ ಕೆಲವು ಪಟ್ಟಿಗಳನ್ನು ದರ್ಶನ್ ಧರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ದರ್ಶನ್​ಗೆ ಬೆನ್ನುಹುರಿಯ ಸಮಸ್ಯೆ ಎದುರಾಗಿದೆ. ಬೆನ್ನು ಹುರಿಯ ಎಲ್​1 ಎಲ್​5 ಮೂಳೆಗಳ ಸಮಸ್ಯೆಯನ್ನು ದರ್ಶನ್ ಅನುಭವಿಸುತ್ತಿದ್ದು, ದರ್ಶನ್​ ಕಾಲಿನ ಸ್ಪರ್ಷ ಜ್ಞಾನವನ್ನು ತುಸು ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ದರ್ಶನ್​ಗೆ ಶೀಘ್ರ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ವರದಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Thu, 31 October 24

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್