AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಧಿಕಾರಿಗಳ ಬಳಿ ಮತ್ತೊಂದು ಬೇಡಿಕೆ ಇಟ್ಟ ದರ್ಶನ್, ಆದರೆ ನಿರಾಕರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮನೆ ಊಟ, ಬೆಡ್, ಬೆಡ್​ಶೀಟ್​ಗಾಗಿ ಹೈಕೋರ್ಟ್​ ವರೆಗೆ ಹೋಗಿದ್ದ ದರ್ಶನ್ ತೂಗುದೀಪ ಈಗ ಬಳ್ಳಾರಿ ಜೈಲಿನಲ್ಲೂ ಬೇಡಿಕೆಗಳನ್ನು ಮುಂದುವರೆಸಿದ್ದಾರೆ. ಆದರೆ ಜೈಲು ಸಿಬ್ಬಂದಿ ದರ್ಶನ್ ಬೇಡಿಕೆಯನ್ನು ನಿರಾಕರಿಸಿದ್ದಾರೆ.

ಜೈಲಧಿಕಾರಿಗಳ ಬಳಿ ಮತ್ತೊಂದು ಬೇಡಿಕೆ ಇಟ್ಟ ದರ್ಶನ್, ಆದರೆ ನಿರಾಕರಣೆ
ದರ್ಶನ್
ಮಂಜುನಾಥ ಸಿ.
|

Updated on: Sep 15, 2024 | 12:03 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್, ಕಳೆದ ಮೂರು ತಿಂಗಳಿನಿಂದಲೂ ಜೈಲು ವಾಸ ಅನುಭವಿಸುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಅನ್ನು, ಅಲ್ಲಿ ರಾಜಾತಿಥ್ಯ ಸ್ವೀಕರಿಸಿ ಜೈಲನ್ನು ರೆಸಾರ್ಟ್ ಮಾಡಿಟ್ಟುಕೊಂಡ ಕಾರಣಕ್ಕೆ ಈಗ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಜೈಲಿನಲ್ಲಿ ಶಿಸ್ತಿನ ನಿಯಮಗಳನ್ನು ಪಾಲಿಸಬೇಕಿದ್ದು. ಕೆಲವು ಸಮಸ್ಯೆಗಳು ದರ್ಶನ್​ಗೆ ಕಾಡುತ್ತಿವೆ. ಕೆಲವು ಸೌಲಭ್ಯಗಳಿಗಾಗಿ ದರ್ಶನ್ ಜೈಲಧಿಕಾರಿಗಳ ಬಳಿ ಮನವಿ ಮಾಡುತ್ತಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ್ದಾಗ ಮನೆ ಆಹಾರ, ಬೆಡ್​ ಮತ್ತು ಬೆಡ್​ಶೀಟ್​, ಪುಸ್ತಕಗಳಿಗಾಗಿ ದರ್ಶನ್ ಬೇಡಿಕೆ ಇಟ್ಟಿದ್ದರು, ಹೈಕೋರ್ಟ್ ಮೆಟ್ಟಿಲು ಸಹ ಏರಿದರು. ಆದರೆ ಅಲ್ಲಿ ಆ ಸೌಲಭ್ಯಗಳ್ಯಾವುವೂ ಸಿಕ್ಕಿರಲಿಲ್ಲ. ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್​ಗೆ ಯಾವ ಸೌಲಭ್ಯವೂ ಇಲ್ಲದಾಗಿದೆ. ಇಲ್ಲಿ ತೀರ ಇತ್ತೀಚೆಗಷ್ಟೆ ಹಳೆಯ ಟಿವಿ ಒಂದನ್ನು ನೀಡಲಾಗಿದೆ. ಇದೀಗ ದರ್ಶನ್ ಮತ್ತೊಂದು ಸೌಲಭ್ಯಕ್ಕೆ ಮನವಿ ಮಾಡಿದ್ದಾರೆ, ಆದರೆ ಜೈಲು ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ.

ದರ್ಶನ್​ ಜೈಲು ಸೇರಿದಾಗಿನಿಂದಲೂ ಅವರಿಗೆ ನಿದ್ದೆ ಸಮಸ್ಯೆ ಕಾಡುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗಲೂ ಸಹ ಬೆಡ್​, ಹಾಸಿಗೆ, ದಿಂಬುಗಳು ಇಲ್ಲದೆ ನಿದ್ದೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಬಳ್ಳಾರಿಯಲ್ಲೂ ಅದೇ ಸಮಸ್ಯೆ ಆಗಿದೆ. ಹಾಗಾಗಿ ತಮಗೆ ಮೃದುವಾದ ದಿಂಬಿನ ವ್ಯವಸ್ಥೆ ಮಾಡುವಂತೆ ಜೈಲಧಿಕಾರಿಗಳ ಬಳಿ ದರ್ಶನ್ ಕೇಳಿಕೊಂಡಿದ್ದಾರೆ. ಆದರೆ ಜೈಲು ಅಧಿಕಾರಿಗಳು ಹೊಸ ಮೃದುವಾದ ದಿಂಬು ನೀಡಲು ನಿರಾಕರಿಸಿದ್ದು, ಜೈಲಿನಲ್ಲಿ ಯಾವುದು ಲಭ್ಯವಿದೆಯೋ ಅದನ್ನಷ್ಟೆ ನೀಡಲು ಸಾಧ್ಯ ಎಂದಿದ್ದಾರೆ.

ಇದನ್ನೂ ಓದಿ:ಜಾಮೀನು ಪಡೆಯಲು ದರ್ಶನ್​ಗೆ ಮುಳುವಾಗುತ್ತಾ ಆ ಒಂದು ಸನ್ನೆ?

ಹನುಮಾನ್ ಚಾಲೀಸ

ಇನ್ನು ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್​ಗೆ ಅನಾಮಿಕ ವ್ಯಕ್ತಿಯೊಬ್ಬರು ಹನುಮಾನ್ ಚಾಳೀಸವನ್ನು ಕಳಸಿಕೊಟ್ಟಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಹನುಮಾನ್ ಚಾಳೀಸವನ್ನು ದರ್ಶನ್​ಗೆ ಪಾರ್ಸಲ್ ಕಳಸಿದ್ದಾರೆ. ಹನುಮನ ಆರ್ಶೀವಾದ ನಿಮ್ಮ ಮೇಲಿರಲು ಪುಸ್ತಕ ಓದಿರಿ ಒಳ್ಳೆದಾಗುತ್ತೆ ಎಂದು ಪುಸ್ತಕ ಕಳಿಸಿರುವ ವ್ಯಕ್ತಿ ಬರೆದಿದ್ದಾರೆ.

ಪರಪ್ಪನ ಅಗ್ರಹಾರ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ವಿಚಾರವಾಗಿ ಜೈಲು ಸಿಬ್ಬಂದಿ ಮೇಲೆ ತನಿಖೆ ನಡೆಯುತ್ತಿದೆ. ಸಿಸಿಬಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸಿಸಿಬಿ ಪೊಲೀಸರಿಗೆ ಜೈಲಧಿಕಾರಿಗಳು ಸೂಕ್ತ ಮಾಹಿತಿ ನೀಡದೆ ಸಮಸ್ಯೆ ಮಾಡುತ್ತಿದ್ದಾರೆ. ದರ್ಶನ್ ಬ್ಯಾರಕ್ ಬಳಿ ಡ್ಯೂಟಿಗೆ ಹಾಕಿದ್ದವರ ಮಾಹಿತಿಯನ್ನು ಜೈಲಧಿಕಾರಿಗಳು ನೀಡುತ್ತಿಲ್ಲ, ಡ್ಯೂಟಿ ಡೈರಿಯನ್ನು ಸಹ ಸರಿಯಾಗಿ ಮೇಂಟೇನ್ ಮಾಡಿಲ್ಲ, ಹಾಗಾಗಿ ಯಾರು ಡ್ಯೂಟಿಯಲ್ಲಿದ್ದರು ಎಂಬುದು ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ