AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋಗಳ ಬಗ್ಗೆ ದರ್ಶನ್ ಅಭಿಪ್ರಾಯ ಏನು? ಇಲ್ಲಿದೆ ಹಳೆಯ ವಿಡಿಯೋ

ದರ್ಶನ್ ಅವರು ರಿಯಾಲಿಟಿ ಶೋಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ವೀಡಿಯೋ ವೈರಲ್ ಆಗಿದೆ. ಅವರು ಶೋಗಳಲ್ಲಿನ ಅನ್ಯಾಯ ಮತ್ತು ಒತ್ತಡವನ್ನು ಟೀಕಿಸಿದ್ದಾರೆ. ಸೆಲೆಬ್ರಿಟಿಗಳು ರಿಯಾಲಿಟಿ ಶೋಗಳನ್ನು ವಿಭಿನ್ನವಾಗಿ ನೋಡುತ್ತಾರೆ. ಕೆಲವರು ಇದನ್ನು ಒಪ್ಪಿದರೆ, ಇನ್ನೂ ಕೆಲವರು ಮೆಚ್ಚಿಕೊಳ್ಳುತ್ತಾರೆ ಎಂಬುದು ಸ್ಪಷ್ಟವಾಗಿದೆ.

ರಿಯಾಲಿಟಿ ಶೋಗಳ ಬಗ್ಗೆ ದರ್ಶನ್ ಅಭಿಪ್ರಾಯ ಏನು? ಇಲ್ಲಿದೆ ಹಳೆಯ ವಿಡಿಯೋ
ದರ್ಶನ್-ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 16, 2025 | 8:07 AM

Share

ರಿಯಾಲಿಟಿ ಶೋಗಳ ಬಗ್ಗೆ ಒಬ್ಬೊಬ್ಬರು ಒಂದೊಂದು ಅಭಿಪ್ರಾಯಗಳನ್ನು ಹೊಂದಿದ್ದಾರೆ. ಈ ಅಭಿಪ್ರಾಯ ಮೂಡಲೂ ಅವರದ್ದೇ ಆದ ಕಾರಣಗಳು ಇರುತ್ತವೆ. ಅದೇ ರೀತಿ ಸೆಲೆಬ್ರಿಟಿಗಳ ವಲಯದಲ್ಲೂ ಈ ರಿಯಾಲಿಟಿ ಶೋಗಳ ಬಗ್ಗೆ ವಿವಿಧ ಅಭಿಪ್ರಾಯ ಇರುತ್ತದೆ. ದರ್ಶನ್ ಅವರು ಈ ಮೊದಲು ರಿಯಾಲಿಟಿ ಶೋಗಳ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ಈಗ ವೈರಲ್ ಆಗಿದೆ. ಇದನ್ನು ಫ್ಯಾನ್ಸ್ ಹಂಚಿಕೊಳ್ಳುತ್ತಿದ್ದಾರೆ.

ರಿಯಾಲಿಟಿ ಶೋಗಳ ಬಗ್ಗೆ ಒಬ್ಬರು ಒಂದೊಂದು ಅಭಿಪ್ರಾಯ ಹೊಂದಿರುತ್ತಾರೆ ಎಂಬುದು ಗೊತ್ತೇ ಇದೆ.  ಸುದೀಪ್ ಅವರು ಬಿಗ್ ಬಾಸ್​ನ ನಡೆಸಿಕೊಡುತ್ತಾರೆ. ಈ ಕಾರಣಕ್ಕೆ ಅವರಿಗೆ ಶೋ ಮೇಲೆ ನಂಬಿಕೆ ಇದೆ. ಅವರು ‘ಬಿಗ್ ಬಾಸ್’ನ ಸ್ಕ್ರಿಪ್ಟೆಡ್ ಶೋ ಎಂದು ಕರೆಯಲು ಸಿದ್ಧರಿಲ್ಲ. ಈ ಬಗ್ಗೆ ಅನೇಕ ಬಾರಿ ಅವರು ಸ್ಪಷ್ಟನೆ ಕೊಟ್ಟಿದ್ದೂ ಇದೆ. ಈ ಮಧ್ಯೆ ಹಳೆಯ ವಿಡಿಯೋ ಒಂದನ್ನು ವೈರಲ್ ಮಾಡಲಾಗಿದೆ. ಇದರಲ್ಲಿ ದರ್ಶನ್ ಅವರು ರಿಯಾಲಿಟಿ ಶೋ ಬಗ್ಗೆ ಮಾತನಾಡಿದ್ದರು.

ಆರ್ಯವರ್ಧನ್ ಗುರೂಜಿ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದುಕೊಂಡೇ ಬಿಗ್ ಬಾಸ್​ ಶೋ ಬಗ್ಗೆ ಅಪಸ್ವರ ತೆಗೆದಿದ್ದರು. ಈ ಶೋ ಮ್ಯಾಕ್ಸ್ ಫಿಕ್ಸಿಂಗ್ ಎಂಬ ರೀತಿ ಮಾತನಾಡಿದ್ದರು. ಇದನ್ನು ಸುದೀಪ್ ಖಂಡಿಸಿದ್ದರು. ಇದಕ್ಕೆ ದರ್ಶನ್ ಅವರು ಮಾತನಾಡಿರುವ ವಿಡಿಯೋನ ಸೇರಿಸಲಾಗಿದೆ.

View this post on Instagram

A post shared by Gaja Mathin (@mathingaja)

‘ರಿಯಾಲಿಟಿ ಶೋಗಳನ್ನು ನೋಡಿದ್ದೇವೆ. ಅಲ್ಲಿ ನಾವು ಪೊಪೆಟ್ ಆಗಿರುತ್ತೇವೆ. ವಾಹಿನಿಗಳಲ್ಲಿ 10 ಜನ ಕೂರಿಸಿದಾಗ ಆ್ಯಂಕರ್ ಧ್ವನಿ ದೊಡ್ಡದಾಗಿರುತ್ತದೆ. ಉಳಿದವರ ಧ್ವನಿ ಕೇಳುವುದೇ ಇಲ್ಲ. ಏಕೆಂದರೆ ಅವರು ಸರಿ ಹೇಳುತ್ತಾ ಇರುತ್ತಾರೆ. ವಾಹಿನಿಗಳಲ್ಲೇ ಹೀಗಿರುವಾಗ ರಿಯಾಲಿಟಿ ಶೋನಲ್ಲಿ ಎಷ್ಟಿರಬೇಡಿ. ಒಬ್ಬನು ಚೆನ್ನಾಗಿ ಆಡ್ತಾ ಇರ್ತಾರೆ. ಅವರಿಗೆ ಬೈಯ್ಯಿರಿ ಎನ್ನುತ್ತಾರೆ. ಇದೆಲ್ಲ ಬೇಕಾ? ಟೈಮ್ ಹಾಗೂ ತಾಳ್ಮೆ ಎರಡೂ ಬೇಕು. ಈಗ ಏನು ಬೇಕೋ ಅದನ್ನು ತೆಗೆದುಕೊಳ್ಳುವ ಅರ್ಹತೆ ಕೊಟ್ಟಿದ್ದಾರೆ. ಇನ್ಯಾಕೆ ಅವೆಲ್ಲ’ ಎಂದಿದ್ದರು ದರ್ಶನ್.

ಇದನ್ನೂ ಓದಿ: ದರ್ಶನ್​, ವಿಜಯಲಕ್ಷ್ಮೀ, ವಿನೀಶ್; ಹ್ಯಾಪಿ ಫ್ಯಾಮಿಲಿಯ ಫೋಟೋ ನೋಡಿ

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿ ಸಾಕಷ್ಟು ತೊಂದರೆ ಅನುಭವಿಸಿದರು. ಈಗ ಅವರು ಜಾಮೀನು ಪಡೆದು ಹೊರ ಬಂದಿದ್ದಾರೆ. ಶೀಘ್ರವೇ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿದೆ. ಸದ್ಯ ಅವರು ಮೈಸೂರಿನಲ್ಲಿ ಇದ್ದಾರೆ. ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!