AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಊಟ, ಹಾಸಿಗೆ, ಅರ್ಜಿ ಹಿಂಪಡೆದ ವಕೀಲರು, ಕಾರಣ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ತೂಗುದೀಪಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶಕ್ಕಾಗಿ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಾಂತ್ರಿಕ ಕಾರಣಗಳಿಂದ ವಕೀಲರು ಹಿಂಪಡೆದಿದ್ದಾರೆ.

ದರ್ಶನ್​ಗೆ ಊಟ, ಹಾಸಿಗೆ, ಅರ್ಜಿ ಹಿಂಪಡೆದ ವಕೀಲರು, ಕಾರಣ?
ಮಂಜುನಾಥ ಸಿ.
|

Updated on: Jul 29, 2024 | 4:49 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪಗೆ ಮನೆ ಊಟ ಮತ್ತು ಮಲಗಲು ಮನೆಯಿಂದ ಹಾಸಿಗೆ ತರಿಸಿಕೊಳ್ಳಲು ಅವಕಾಶ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಕೀಲರು ಹಿಂಪಡೆದಿದ್ದಾರೆ. ಪ್ರಕರಣವು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು, ಆದರೆ ಇಲ್ಲಿ ಅರ್ಜಿಯನ್ನು ತಾಂತ್ರಿಕ ಕಾರಣದಿಂದ ವಕೀಲರು ಹಿಂಪಡೆದಿದ್ದು, ಇನ್ನೊಂದು ಹೊಸ ಅರ್ಜಿಯನ್ನು ಸಲ್ಲಿಸಲೆಂದೇ ಈ ಅರ್ಜಿಯನ್ನು ಹಿಂಪಡೆಯಲಾಗಿದೆ ಎನ್ನಲಾಗುತ್ತಿದೆ.

ಪ್ರಕರಣದ ಕುರಿತಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಬೇಕಿರುವ ಹಿನ್ನೆಲೆಯಲ್ಲಿ ಈ ಹಿಂದಿನ ಹಳೆಯ ಅರ್ಜಿಯನ್ನು ವಾಪಸ್ ಪಡೆದು ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುವ ಕಾರಣದಿಂದಾಗಿ ಅರ್ಜಿಗಳನ್ನು ವಾಪಸ್ ಪಡೆಯಲಾಗಿದೆ. ಮ್ಯಾಜಿಸ್ಟ್ರೇಟ್ ಅರ್ಜಿಯನ್ನು ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಆದರೆ ಈಗಿನ ಅರ್ಜಿಯನ್ನು ಮೊದಲಿಗೆ ಹೈಕೋರ್ಟ್​ನಲ್ಲಿಯೇ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಹೈಕೋರ್ಟ್​, ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಕಳಿಸಿತ್ತು, ಹಾಗಾಗಿ ಈಗ ಹೊಸ ಅರ್ಜಿ ಸಲ್ಲಿಸಿ, ಬಳಿಕ ಈಗ ಮ್ಯಾಜಿಸ್ಟ್ರೇಟರ್ ನೀಡಿರುವ ಆದೇಶವನ್ನು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡುವ ಸಾಧ್ಯತೆ ಇದೆ.

ಜೈಲಿನಲ್ಲಿ ಮನೆ ಊಟ, ಮಲಗಲು ಹಾಸಿಗೆ ಮತ್ತು ಕೆಲವು ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ರಿಟ್ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದರ್ಶನ್​ಗೆ ಅವಕಾಶ ಕೊಟ್ಟಲ್ಲಿ ಎಲ್ಲ ಕೈದಿಗಳೂ ಅದನ್ನೇ ಕೇಳುತ್ತಾರೆ ಎಂದಿದ್ದರು. ಅಲ್ಲದೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆದು ದರ್ಶನ್ ಅರ್ಜಿಯನ್ನು ತಳ್ಳಿ ಹಾಕಲಾಯ್ತು. ಚಾರ್ಲ್ ಶೋಭರಾಜ್ ಸೇರಿದಂತೆ ಇನ್ನು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿ ನ್ಯಾಯಾಧೀಶರು ಅರ್ಜಿಯನ್ನು ತಳ್ಳಿ ಹಾಕಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ 17 ಮಂದಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅದರಲ್ಲಿ ಮೂರು ಮಂದಿ ತುಮಕೂರು ಜೈಲಿನಲ್ಲಿ ಇನ್ನುಳಿದವರು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದಾರೆ. ದರ್ಶನ್​ಗೆ ಜೈಲಿನ ಊಟ ಸರಿಹೊಂದದ ಕಾರಣ ಅನಾರೋಗ್ಯ ಉಂಟಾಗಿತ್ತು, ಹಾಸಿಗೆ ಸರಿಯಿಲ್ಲದ ಕಾರಣ ನಿದ್ರಾಹೀನತೆ ಕಾಡಿತ್ತು. ಹಾಗಾಗಿ ಮನೆಯಿಂದ ಊಟ ತರಿಸಿಕೊಳ್ಳಲು, ಹಾಸಿಗೆ ಹಾಗೂ ಕೆಲವು ಪುಸ್ತಕ ತರಿಸಿಕೊಳ್ಳಲು ಅವಕಾಶ ಕೊಡುವಂತೆ ರಿಟ್ ಅರ್ಜಿ ಸಲ್ಲಿಸಿದ್ದರು. ಇನ್ನು ನಟ ದರ್ಶನ್ ಹಾಗೂ ಇತರರಿಗೆ ಆಗಸ್ಟ್ 4 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ