AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಕೆಲಸ ಪ್ರಾರಂಭ ಮಾಡಿದ ದರ್ಶನ್, ‘ಡೆವಿಲ್’ಗೆ ಡಬ್ಬಿಂಗ್?

Darshan: ದರ್ಶನ್ ತೂಗುದೀಪ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಈ ತಿಂಗಳು ಜನವರಿ 15 ಇಂದ ಚಿತ್ರೀಕರಣ ಪ್ರಾರಂಭ ಆಗಲಿದೆ ಎನ್ನಲಾಗಿತ್ತು. ಆದರೆ ಜನವರಿ 1 ರಂದೇ ‘ಡೆವಿಲ್’ ಸಿನಿಮಾದ ಕೆಲಸ ಶುರು ಮಾಡುತ್ತಿದ್ದಾರೆ ದರ್ಶನ್, ಇದಕ್ಕೆ ಕಾರಣವೂ ಸಹ ಇದೆ. ಏನದು ಕಾರಣ? ಇಲ್ಲಿ ತಿಳಿಯಿರಿ.

ಹೊಸ ವರ್ಷಕ್ಕೆ ಕೆಲಸ ಪ್ರಾರಂಭ ಮಾಡಿದ ದರ್ಶನ್, ‘ಡೆವಿಲ್’ಗೆ ಡಬ್ಬಿಂಗ್?
Devil
ಮಂಜುನಾಥ ಸಿ.
|

Updated on:Jan 01, 2025 | 11:21 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ ಚಿತ್ರೀಕರಣ ಮರು ಆರಂಭ ಆಗಲಿದೆ ಎನ್ನಲಾಗಿತ್ತು. ಆದರೆ ಅದಕ್ಕೆ ಮುಂಚೆಯೇ ಸಿನಿಮಾ ಕೆಲಸ ಪ್ರಾರಂಭಿಸಿದ್ದಾರೆ ನಟ ದರ್ಶನ್.

ದರ್ಶನ್, ಇಂದು (ಜನವರಿ 1) ‘ಡೆವಿಲ್’ ಸಿನಿಮಾದ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ದರ್ಶನ್ ಬಂಧನಕ್ಕೆ ಮೊದಲೇ ‘ಡೆವಿಲ್’ ಸಿನಿಮಾದ ಸುಮಾರು 50% ಚಿತ್ರೀಕರಣವನ್ನು ಮುಗಿಸಲಾಗಿತ್ತಂತೆ, ಆ ಭಾಗಗಳ ಡಬ್ಬಿಂಗ್ ಕಾರ್ಯವನ್ನು ಇಂದು ದರ್ಶನ್ ಮಾಡುತ್ತಿದ್ದಾರೆ. ಸುಮಾರು ಒಂದು ಗಂಟೆ ಕಾಲ ದರ್ಶನ್, ಡಬ್ಬಿಂಗ್ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ದಿನ ‘ಡಬ್ಬಿಂಗ್’ ಮಾಡಲು ವಿಶೇಷ ಕಾರಣವೂ ಇದೆ.

ಇದನ್ನೂ ಓದಿ:ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್

ದರ್ಶನ್ ಈ ಹಿಂದೆ ಒಮ್ಮೆ ಹೇಳಿದ್ದಂತೆ, ಅವರು ಜನವರಿ 1 ರಂದು ಅಂದರೆ ಹೊಸ ವರ್ಷದಂದು ಕಡ್ಡಾಯವಾಗಿ ಕೆಲಸ ಮಾಡುತ್ತಾರಂತೆ. ಆ ದಿನ ಅವರು ರಜೆ ತೆಗೆದುಕೊಳ್ಳಲು ಇಷ್ಟಪಡುವುದಿಲ್ಲವಂತೆ. ಎಲ್ಲಿ ಆದರೂ ಆಗಲಿ ಚಿತ್ರೀಕರಣದಲ್ಲಿ ಅಥವಾ ಸಿನಿಮಾ ಸಂಬಂಧಿ ಕೆಲಸದಲ್ಲಿ ಕಡ್ಡಾಯವಾಗಿ ತೊಡಗಿಕೊಳ್ಳುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ. ಈ ಬಾರಿ ಅನಾರೋಗ್ಯ ಮತ್ತು ಇತರೆ ಕಾರಣಗಳಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಡಬ್ಬಿಂಗ್ ಮಾಡುವ ಮೂಲಕ ತಮ್ಮನ್ನು ತಾವು ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿ ಇಟ್ಟುಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ.

‘ಡೆವಿಲ್’ ಸಿನಿಮಾದ ಚಿತ್ರೀಕರಣ ಜನವರಿ 15ರಿಂದ ಪ್ರಾರಂಭ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಲ ಮೂಲಗಳ ಪ್ರಕಾರ, ಚಿತ್ರತಂಡದವರಿಗೆ ಜನವರಿ 15ಕ್ಕೆ ಶೂಟಿಂಗ್​ಗೆ ಹಾಜರಾಗುವಂತೆ ಈಗಾಗಲೇ ಸುದ್ದಿ ಮುಟ್ಟಿಸಲಾಗಿದೆಯಂತೆ. ಇನ್ನು ದರ್ಶನ್ ಸಹ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ಫಿಸಿಯೋಥೆರಪಿ ಮಾಡಿಸಿಕೊಳ್ಳುತ್ತಿದ್ದಾರೆ. ಜನವರಿ 15ರ ವೇಳೆಗೆ ಚಿತ್ರೀಕರಣ ಮಾಡುವಷ್ಟರ ಮಟ್ಟಿಗೆ ಗುಣಮುಖರಾಗುವ ಸಾಧ್ಯತೆ ಇದ್ದಂತಿದೆ. ಇನ್ನು ದರ್ಶನ್​ಗೆ ನೀಡಲಾಗಿರುವ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತಿದ್ದು, ಸುಪ್ರೀಂಕೋರ್ಟ್​ನಲ್ಲಿ ವಾದಿಸಲು ವಿಶೇಷ ಪಿಪಿ ಅವರನ್ನು ಸರ್ಕಾರ ಈಗಾಗಲೇ ಹೆಸರಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Wed, 1 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ