AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಮುಂದಿನ ಚಿತ್ರಕ್ಕಾಗಿ ತೆಲುಗು ನಿರ್ಮಾಪಕ-ನಿರ್ದೇಶಕರ ಜತೆ ಕೈಜೋಡಿಸಿದ ದರ್ಶನ್

ರಾಬರ್ಟ್ ಸಿನಿಮಾದ ಬಿಡುಗಡೆಗೂ ಮುನ್ನ ಕಾರ್ಯಕ್ರಮದಲ್ಲಿ ಟಾಲಿವುಡ್​ನ ದೊಡ್ಡ ನಿರ್ಮಾಪಕ ಬಿವಿಎನ್ ಪ್ರಸಾದ್ ಕೂಡ ಆಗಮಿಸಿದ್ದು, ಸಿನಿಮಾ ಬಗ್ಗೆ ಮಾತಾಡಿದ ಪ್ರಸಾದ್, ಮುಂದಿನ ಸಿನಿಮಾ ದರ್ಶನ್‌ಗೆ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.

D Boss Darshan: ಮುಂದಿನ ಚಿತ್ರಕ್ಕಾಗಿ ತೆಲುಗು ನಿರ್ಮಾಪಕ-ನಿರ್ದೇಶಕರ ಜತೆ ಕೈಜೋಡಿಸಿದ ದರ್ಶನ್
ಚಾಲೇಂಜಿಂಗ್ ಸ್ಟಾರ್ ದರ್ಶನ್
preethi shettigar
| Edited By: |

Updated on:Feb 27, 2021 | 6:58 PM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಸಿನಿಮಾ ರಾಬರ್ಟ್ ಸದ್ಯ ತೆರೆ ಮೇಲೆ ಬರುವುದಕ್ಕೆ ಸಿದ್ಧವಾಗಿದ್ದು, ಸ್ಯಾಂಡಲ್‌ವುಡ್ ಮತ್ತು ಟಾಲಿವುಡ್​ನಲ್ಲಿ ರಾಬರ್ಟ್ ಅಬ್ಬರ ಜೋರಾಗಿದೆ. ಮಾಸ್ ಮಾಹರಾಜನ ದರ್ಶನಕ್ಕೆ ಡಿ ಬಾಸ್ ಭಕ್ತಗಣ ಕಾದು ಕುಳಿತಿದ್ದು, ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ನಡೆದ ಪ್ರೀ ರಿಲೀಸ್ ಇವೆಂಟ್‌ನಲ್ಲಿ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ದರ್ಶನ್‌ಗೆ ಟಾಲಿವುಡ್‌ನ ಖ್ಯಾತ ನಿರ್ದೆಶಕ ಸುಕುಮಾರ್ ಆಕ್ಷನ್ ಕಟ್ ಹೇಳುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಇನ್ನೊಂದು ಕಡೆ ಪವರ್ ಸ್ಟಾರ್ ಪವನ್ ಕಲ್ಯಾಣ್‌ಗೆ ಅತ್ತಾರೀಂಟಿಕಿ ದಾರೇದಿ ಸಿನಿಮಾ ನಿರ್ಮಾಣ ಮಾಡಿದ್ದ, ನಿರ್ಮಾಪಕ ಬಿವಿಎನ್ ಪ್ರಸಾದ್ ಕೂಡ ಈಗ ದಾಸನಿಗಾಗಿ ಸಿನಿಮಾ ನಿರ್ಮಾಣ ಮಾಡುವುದಕ್ಕೆ ಮುಂದೆ ಬಂದಿದ್ದಾರೆ. ಈ ಸಂಬಂಧ ಹೈದರಾಬಾದ್‌ನಲ್ಲಿ ನಡೆದ ರಾಬರ್ಟ್ ಸಿನಿಮಾದ ಬಿಡುಗಡೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಈ ಬಗ್ಗೆ ಖಚಿತವಾದ ಮಾಹಿತಿ ಹೊರಬಿದ್ದಿದೆ.

ರಾಬರ್ಟ್ ಸಿನಿಮಾದ ಬಿಡುಗಡೆಗೂ ಮುನ್ನ ಕಾರ್ಯಕ್ರಮದಲ್ಲಿ ಟಾಲಿವುಡ್​ನ ದೊಡ್ಡ ನಿರ್ಮಾಪಕ ಬಿವಿಎನ್ ಪ್ರಸಾದ್ ಕೂಡ ಆಗಮಿಸಿದ್ದು, ಸಿನಿಮಾ ಬಗ್ಗೆ ಮಾತಾಡಿದ ಪ್ರಸಾದ್, ಮುಂದಿನ ಸಿನಿಮಾ ದರ್ಶನ್‌ಗೆ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.

ಸುಕುಮಾರ್ ನಿರ್ದೇಶನ ಇರುವ ಚಿತ್ರಕ್ಕೆ ಪ್ರಸಾದ್ ಬಂಡವಾಳ ಹಾಕುತ್ತಿರುವುದರಿಂದ ಖಚಿತಗೊಂಡಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ, ದರ್ಶನ್ ಬೇರೆ ಭಾಷೆಯ ನಿರ್ದೇಶಕರ ಜೊತೆ ಕೆಲಸ ಮಾಡುವ ಸವಾಲು ತೆಗೆದುಕೊಂಡಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ಮೂಡಿ ಬರಲಿದೆ ಎನ್ನುವುದು ಮುತ್ತಿನ ನಗರಿಯಿಂದ ಕೇಳಿ ಬಂದಿರುವ ಮಾತು.

ಇತ್ತೀಚೆಗೆ ದರ್ಶನ್ ನೀಡಿದ್ದ ಸಂದರ್ಶನದಲ್ಲಿ ವೀರಮದಕರಿ ಸಿನಿಮಾ ತೆರೆಗೆ ಬರುವುದು ತಡವಾಗಲಿದೆ ಎಂದು ಹೇಳಿದ್ದು, ಹೀಗಾಗಿ ನಡುವೆ ಸಿಗುವ ಅಂತರದಲ್ಲಿ ಬೇರೆ ಸಿನಿಮಾ ಮಾಡುತ್ತೇನೆ ಎಂದು ಹಿಂಟ್‌ ಕೊಟ್ಟಿದ್ದಾರೆ. ಅಕ್ಟೋಬರ್ ಅಷ್ಟರಲ್ಲಿ ಮತ್ತೆ ದೊಡ್ಡ ಪರದೆ ಮೇಲೆ ಬರುತ್ತೇನೆ ಎಂದು ಹೇಳಿದರು. ಆ ಸಿನಿಮಾ ಬೇರೆ ಯಾವುದೂ ಅಲ್ಲ, ಸುಕುಮಾರ್ ಹಾಗೂ ದರ್ಶನ್ ಕಾಂಬಿನೇಷನ್‌ನಲ್ಲಿ ಬರಲಿರುವ ಸಿನಿಮಾನೇ ಎನ್ನುವುದು ಈಗ ಪಕ್ಕಾ ಆಗಿದೆ. ಹೀಗಾಗಿ ದಚ್ಚು ಅಭಿಮಾನಿಗಳು ಈಗ ಸಿಕ್ಕಾಪಟ್ಟೆ ಪುಳಕಿತರಾಗಿದ್ದಾರೆ.

ಇದನ್ನೂ ಓದಿ: ರಾಬರ್ಟ್‌ ಪ್ರೀ ರಿಲೀಸ್.. ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಿ ಬಾಸ್ ದರ್ಶನ್!

Published On - 6:39 pm, Sat, 27 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ