AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D Boss Darshan: ಮುಂದಿನ ಚಿತ್ರಕ್ಕಾಗಿ ತೆಲುಗು ನಿರ್ಮಾಪಕ-ನಿರ್ದೇಶಕರ ಜತೆ ಕೈಜೋಡಿಸಿದ ದರ್ಶನ್

ರಾಬರ್ಟ್ ಸಿನಿಮಾದ ಬಿಡುಗಡೆಗೂ ಮುನ್ನ ಕಾರ್ಯಕ್ರಮದಲ್ಲಿ ಟಾಲಿವುಡ್​ನ ದೊಡ್ಡ ನಿರ್ಮಾಪಕ ಬಿವಿಎನ್ ಪ್ರಸಾದ್ ಕೂಡ ಆಗಮಿಸಿದ್ದು, ಸಿನಿಮಾ ಬಗ್ಗೆ ಮಾತಾಡಿದ ಪ್ರಸಾದ್, ಮುಂದಿನ ಸಿನಿಮಾ ದರ್ಶನ್‌ಗೆ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.

D Boss Darshan: ಮುಂದಿನ ಚಿತ್ರಕ್ಕಾಗಿ ತೆಲುಗು ನಿರ್ಮಾಪಕ-ನಿರ್ದೇಶಕರ ಜತೆ ಕೈಜೋಡಿಸಿದ ದರ್ಶನ್
ಚಾಲೇಂಜಿಂಗ್ ಸ್ಟಾರ್ ದರ್ಶನ್
preethi shettigar
| Updated By: Digi Tech Desk|

Updated on:Feb 27, 2021 | 6:58 PM

Share

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಸಿನಿಮಾ ರಾಬರ್ಟ್ ಸದ್ಯ ತೆರೆ ಮೇಲೆ ಬರುವುದಕ್ಕೆ ಸಿದ್ಧವಾಗಿದ್ದು, ಸ್ಯಾಂಡಲ್‌ವುಡ್ ಮತ್ತು ಟಾಲಿವುಡ್​ನಲ್ಲಿ ರಾಬರ್ಟ್ ಅಬ್ಬರ ಜೋರಾಗಿದೆ. ಮಾಸ್ ಮಾಹರಾಜನ ದರ್ಶನಕ್ಕೆ ಡಿ ಬಾಸ್ ಭಕ್ತಗಣ ಕಾದು ಕುಳಿತಿದ್ದು, ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ನಡೆದ ಪ್ರೀ ರಿಲೀಸ್ ಇವೆಂಟ್‌ನಲ್ಲಿ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ದರ್ಶನ್‌ಗೆ ಟಾಲಿವುಡ್‌ನ ಖ್ಯಾತ ನಿರ್ದೆಶಕ ಸುಕುಮಾರ್ ಆಕ್ಷನ್ ಕಟ್ ಹೇಳುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಇನ್ನೊಂದು ಕಡೆ ಪವರ್ ಸ್ಟಾರ್ ಪವನ್ ಕಲ್ಯಾಣ್‌ಗೆ ಅತ್ತಾರೀಂಟಿಕಿ ದಾರೇದಿ ಸಿನಿಮಾ ನಿರ್ಮಾಣ ಮಾಡಿದ್ದ, ನಿರ್ಮಾಪಕ ಬಿವಿಎನ್ ಪ್ರಸಾದ್ ಕೂಡ ಈಗ ದಾಸನಿಗಾಗಿ ಸಿನಿಮಾ ನಿರ್ಮಾಣ ಮಾಡುವುದಕ್ಕೆ ಮುಂದೆ ಬಂದಿದ್ದಾರೆ. ಈ ಸಂಬಂಧ ಹೈದರಾಬಾದ್‌ನಲ್ಲಿ ನಡೆದ ರಾಬರ್ಟ್ ಸಿನಿಮಾದ ಬಿಡುಗಡೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಈ ಬಗ್ಗೆ ಖಚಿತವಾದ ಮಾಹಿತಿ ಹೊರಬಿದ್ದಿದೆ.

ರಾಬರ್ಟ್ ಸಿನಿಮಾದ ಬಿಡುಗಡೆಗೂ ಮುನ್ನ ಕಾರ್ಯಕ್ರಮದಲ್ಲಿ ಟಾಲಿವುಡ್​ನ ದೊಡ್ಡ ನಿರ್ಮಾಪಕ ಬಿವಿಎನ್ ಪ್ರಸಾದ್ ಕೂಡ ಆಗಮಿಸಿದ್ದು, ಸಿನಿಮಾ ಬಗ್ಗೆ ಮಾತಾಡಿದ ಪ್ರಸಾದ್, ಮುಂದಿನ ಸಿನಿಮಾ ದರ್ಶನ್‌ಗೆ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.

ಸುಕುಮಾರ್ ನಿರ್ದೇಶನ ಇರುವ ಚಿತ್ರಕ್ಕೆ ಪ್ರಸಾದ್ ಬಂಡವಾಳ ಹಾಕುತ್ತಿರುವುದರಿಂದ ಖಚಿತಗೊಂಡಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ, ದರ್ಶನ್ ಬೇರೆ ಭಾಷೆಯ ನಿರ್ದೇಶಕರ ಜೊತೆ ಕೆಲಸ ಮಾಡುವ ಸವಾಲು ತೆಗೆದುಕೊಂಡಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ಮೂಡಿ ಬರಲಿದೆ ಎನ್ನುವುದು ಮುತ್ತಿನ ನಗರಿಯಿಂದ ಕೇಳಿ ಬಂದಿರುವ ಮಾತು.

ಇತ್ತೀಚೆಗೆ ದರ್ಶನ್ ನೀಡಿದ್ದ ಸಂದರ್ಶನದಲ್ಲಿ ವೀರಮದಕರಿ ಸಿನಿಮಾ ತೆರೆಗೆ ಬರುವುದು ತಡವಾಗಲಿದೆ ಎಂದು ಹೇಳಿದ್ದು, ಹೀಗಾಗಿ ನಡುವೆ ಸಿಗುವ ಅಂತರದಲ್ಲಿ ಬೇರೆ ಸಿನಿಮಾ ಮಾಡುತ್ತೇನೆ ಎಂದು ಹಿಂಟ್‌ ಕೊಟ್ಟಿದ್ದಾರೆ. ಅಕ್ಟೋಬರ್ ಅಷ್ಟರಲ್ಲಿ ಮತ್ತೆ ದೊಡ್ಡ ಪರದೆ ಮೇಲೆ ಬರುತ್ತೇನೆ ಎಂದು ಹೇಳಿದರು. ಆ ಸಿನಿಮಾ ಬೇರೆ ಯಾವುದೂ ಅಲ್ಲ, ಸುಕುಮಾರ್ ಹಾಗೂ ದರ್ಶನ್ ಕಾಂಬಿನೇಷನ್‌ನಲ್ಲಿ ಬರಲಿರುವ ಸಿನಿಮಾನೇ ಎನ್ನುವುದು ಈಗ ಪಕ್ಕಾ ಆಗಿದೆ. ಹೀಗಾಗಿ ದಚ್ಚು ಅಭಿಮಾನಿಗಳು ಈಗ ಸಿಕ್ಕಾಪಟ್ಟೆ ಪುಳಕಿತರಾಗಿದ್ದಾರೆ.

ಇದನ್ನೂ ಓದಿ: ರಾಬರ್ಟ್‌ ಪ್ರೀ ರಿಲೀಸ್.. ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಿ ಬಾಸ್ ದರ್ಶನ್!

Published On - 6:39 pm, Sat, 27 February 21

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ