AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 11ರಂದು ದರ್ಶನ್​ಗೆ ಶಸ್ತ್ರಚಿಕಿತ್ಸೆ; ಇಲ್ಲಿದೆ ಸರ್ಜರಿಯ ಸಂಪೂರ್ಣ ವಿವರ

ತೀವ್ರ ಬೆನ್ನು ನೋವು ಇರುವುದರಿಂದ ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಈಗ ಸರ್ಜರಿ ಕಾರಣಕ್ಕೆ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.11ರಂದು ದರ್ಶನ್ ಅವರಿಗೆ ವೈದ್ಯರು ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಸರ್ಜರಿ ಮಾಡಲಿದ್ದಾರೆ.

ಡಿಸೆಂಬರ್ 11ರಂದು ದರ್ಶನ್​ಗೆ ಶಸ್ತ್ರಚಿಕಿತ್ಸೆ; ಇಲ್ಲಿದೆ ಸರ್ಜರಿಯ ಸಂಪೂರ್ಣ ವಿವರ
ದರ್ಶನ್​
Ramesha M
| Edited By: |

Updated on: Dec 09, 2024 | 10:48 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಅವರಿಗೆ ಡಿಸೆಂಬರ್​ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು. ಈ ಬಗ್ಗೆ ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್​ಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿವರಗಳನ್ನು ಕೂಡ ಕೋರ್ಟ್​ಗೆ ನೀಡಲಾಗಿದೆ. ದರ್ಶನ್ ಪರ ವಕೀಲರು 5 ಸರ್ಟಿಫಿಕೆಟ್​ಗಳನ್ನ ಹೈಕೋರ್ಟ್​ಗೆ ಸಲ್ಲಿಸಿದ್ದಾರೆ. ಡಿಸೆಂಬರ್​ 2ರ ವೈದ್ಯರ ವರದಿಯಲ್ಲಿ ಸರ್ಜರಿಯ ವಿವರ ಉಲ್ಲೇಖ ಮಾಡಲಾಗಿದೆ. ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಎಂಬ ಸರ್ಜರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಸರ್ಜರಿಯಿಂದ ಬೆನ್ನುಹುರಿ ಚಟುವಟಿಕೆ ಸಹಜಗೊಳಿಸಬಹುದು. ಇದರಿಂದ ದರ್ಶನ್ ಅವರ ಬೆನ್ನುಹುರಿ ನೋವು ಕಡಿಮೆ ಮಾಡಬಹುದು. ಜೀವನದ ಗುಣಮಟ್ಟ ಹೆಚ್ಚಿಸಬಹುದೆಂದು ವೈದ್ಯರ ವರದಿಯಲ್ಲಿ ಹೇಳಲಾಗಿದೆ. ಈ ಸರ್ಜರಿಯ ಬಗ್ಗೆ ಈಗಾಗಲೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಮನವರಿಕೆ ಮಾಡಲಾಗಿದೆ.

ದರ್ಶನ್ ಅವರಿಗೆ ಜನರಲ್ ಅನಸ್ತೇಶಿಯಾ ಕೊಟ್ಟು ಸರ್ಜರಿ ಮಾಡಲಾಗುವುದು. ಈ ಬಗ್ಗೆ ನ್ಯೂರೋ ಸರ್ಜನ್ ವಿಭಾಗದ ಮುಖ್ಯಸ್ಥ ನವೀನ್​ ಅವರಿಂದ ವರದಿ ನೀಡಲಾಗಿದೆ. ಮುಖ್ಯ ಆಡಳಿತಾಧಿಕಾರಿ ಸ್ಮಿತಾ ತಮ್ಮಯ್ಯ ಅವರು ಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ. ಸದ್ಯಕ್ಕೆ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಚಿಕಿತ್ಸೆಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಎದೆಗೂಡಿನ 17 ಮೂಳೆ ಮುರಿದಿವೆ; ಕೊಲೆ ಎನ್ನಲು ಹಲವು ಸಾಕ್ಷ್ಯಗಳಿವೆ: ಎಸ್​ಪಿಪಿ ವಾದ

ಹಲವು ವರ್ಷಗಳಿಂದ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ‘ಕಾಟೇರ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕೂಡ ಅವರಿಗೆ ನೋವು ಕಾಣಿಸಿಕೊಂಡಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 2ನೇ ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದು, ಬಳಿಕ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಆಗ ಅವರಿಗೆ ಬೆನ್ನುನೋವು ಹೆಚ್ಚಾಯಿತು.

ದರ್ಶನ್ ಅವರಿಗೆ ಬೆನ್ನು ನೋವು ಹೆಚ್ಚಾದ ಕಾರಣ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು. ಡಿಸೆಂಬರ್​ 11ಕ್ಕೆ ಅವರ ಜಾಮೀನು ಅವಧಿ ಅಂತ್ಯ ಆಗುವುದರಲ್ಲಿತ್ತು. ಆದರೆ ಅವರ ಪರ ವಕೀಲರು ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದ್ದರು. ಮುಂದಿನ ಆದೇಶದ ತನಕ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!