AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 11ರಂದು ದರ್ಶನ್​ಗೆ ಶಸ್ತ್ರಚಿಕಿತ್ಸೆ; ಇಲ್ಲಿದೆ ಸರ್ಜರಿಯ ಸಂಪೂರ್ಣ ವಿವರ

ತೀವ್ರ ಬೆನ್ನು ನೋವು ಇರುವುದರಿಂದ ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಈಗ ಸರ್ಜರಿ ಕಾರಣಕ್ಕೆ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.11ರಂದು ದರ್ಶನ್ ಅವರಿಗೆ ವೈದ್ಯರು ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಸರ್ಜರಿ ಮಾಡಲಿದ್ದಾರೆ.

ಡಿಸೆಂಬರ್ 11ರಂದು ದರ್ಶನ್​ಗೆ ಶಸ್ತ್ರಚಿಕಿತ್ಸೆ; ಇಲ್ಲಿದೆ ಸರ್ಜರಿಯ ಸಂಪೂರ್ಣ ವಿವರ
ದರ್ಶನ್​
Ramesha M
| Edited By: |

Updated on: Dec 09, 2024 | 10:48 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ ಅವರಿಗೆ ಡಿಸೆಂಬರ್​ 11ರಂದು ಶಸ್ತ್ರಚಿಕಿತ್ಸೆ ಮಾಡಲಾಗುವುದು. ಈ ಬಗ್ಗೆ ಹೈಕೋರ್ಟ್​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ದರ್ಶನ್​ಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿವರಗಳನ್ನು ಕೂಡ ಕೋರ್ಟ್​ಗೆ ನೀಡಲಾಗಿದೆ. ದರ್ಶನ್ ಪರ ವಕೀಲರು 5 ಸರ್ಟಿಫಿಕೆಟ್​ಗಳನ್ನ ಹೈಕೋರ್ಟ್​ಗೆ ಸಲ್ಲಿಸಿದ್ದಾರೆ. ಡಿಸೆಂಬರ್​ 2ರ ವೈದ್ಯರ ವರದಿಯಲ್ಲಿ ಸರ್ಜರಿಯ ವಿವರ ಉಲ್ಲೇಖ ಮಾಡಲಾಗಿದೆ. ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಎಂಬ ಸರ್ಜರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಲುಂಬರ್ ಡಿಕಂಪ್ರೆಷನ್ ಅಂಡ್ ಫ್ಯೂಷನ್ ಸರ್ಜರಿಯಿಂದ ಬೆನ್ನುಹುರಿ ಚಟುವಟಿಕೆ ಸಹಜಗೊಳಿಸಬಹುದು. ಇದರಿಂದ ದರ್ಶನ್ ಅವರ ಬೆನ್ನುಹುರಿ ನೋವು ಕಡಿಮೆ ಮಾಡಬಹುದು. ಜೀವನದ ಗುಣಮಟ್ಟ ಹೆಚ್ಚಿಸಬಹುದೆಂದು ವೈದ್ಯರ ವರದಿಯಲ್ಲಿ ಹೇಳಲಾಗಿದೆ. ಈ ಸರ್ಜರಿಯ ಬಗ್ಗೆ ಈಗಾಗಲೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಮನವರಿಕೆ ಮಾಡಲಾಗಿದೆ.

ದರ್ಶನ್ ಅವರಿಗೆ ಜನರಲ್ ಅನಸ್ತೇಶಿಯಾ ಕೊಟ್ಟು ಸರ್ಜರಿ ಮಾಡಲಾಗುವುದು. ಈ ಬಗ್ಗೆ ನ್ಯೂರೋ ಸರ್ಜನ್ ವಿಭಾಗದ ಮುಖ್ಯಸ್ಥ ನವೀನ್​ ಅವರಿಂದ ವರದಿ ನೀಡಲಾಗಿದೆ. ಮುಖ್ಯ ಆಡಳಿತಾಧಿಕಾರಿ ಸ್ಮಿತಾ ತಮ್ಮಯ್ಯ ಅವರು ಕೋರ್ಟ್​ಗೆ ವರದಿ ಸಲ್ಲಿಸಿದ್ದಾರೆ. ಸದ್ಯಕ್ಕೆ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಚಿಕಿತ್ಸೆಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಎದೆಗೂಡಿನ 17 ಮೂಳೆ ಮುರಿದಿವೆ; ಕೊಲೆ ಎನ್ನಲು ಹಲವು ಸಾಕ್ಷ್ಯಗಳಿವೆ: ಎಸ್​ಪಿಪಿ ವಾದ

ಹಲವು ವರ್ಷಗಳಿಂದ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ‘ಕಾಟೇರ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕೂಡ ಅವರಿಗೆ ನೋವು ಕಾಣಿಸಿಕೊಂಡಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 2ನೇ ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದು, ಬಳಿಕ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಆಗ ಅವರಿಗೆ ಬೆನ್ನುನೋವು ಹೆಚ್ಚಾಯಿತು.

ದರ್ಶನ್ ಅವರಿಗೆ ಬೆನ್ನು ನೋವು ಹೆಚ್ಚಾದ ಕಾರಣ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು. ಡಿಸೆಂಬರ್​ 11ಕ್ಕೆ ಅವರ ಜಾಮೀನು ಅವಧಿ ಅಂತ್ಯ ಆಗುವುದರಲ್ಲಿತ್ತು. ಆದರೆ ಅವರ ಪರ ವಕೀಲರು ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದ್ದರು. ಮುಂದಿನ ಆದೇಶದ ತನಕ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್